BREAKING NEWS

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ : ಎಚ್‌ಡಿಡಿ

ನವದೆಹಲಿ : ಕಾವೇರಿ ನೀರು ವಿಚಾರದಲ್ಲಿ ನಮ್ಮ ರಾಜ್ಯ ಸರ್ಕಾರ ತೆಗೆದುಕೊಂಡ ನಿರ್ಣಯ ದುರಂತ. ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡರು ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಹೇಳಿದ್ದಾರೆ.

ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ವಿಚಾರವಾಗಿ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ದೊಡ್ಡ ಅನ್ಯಾಯವಾಗಿದೆ. ಇವತ್ತಿನ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮಹತ್ತರವಾದ ಪೆಟ್ಟು. ಬೆಂಗಳೂರಿಗೆ ಕುಡಿಯುವ ನೀರು ಬೇಕು. ಮುಂದೇನು ಆಗುತ್ತೆ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ನಾವು ಎಲ್ಲೋ ಒಂದು ಕಡೆ ಎಡವಿದ್ದೇವೆ. ನಮ್ಮ ರಾಜ್ಯದಲ್ಲಿ ಆಗುತ್ತಿರುವ ಅನ್ಯಾಯಕ್ಕೆ ಮೊದಲು ಧರಣಿ ಮಾಡಿದ್ದೆ. ಧರಣಿ ಕೂತು ಸಮಸ್ಯೆಗೆ ಪರಿಹಾರ ಕಂಡುಕೊಂಡಿದ್ದೇವೆ. ಇಂದು ಸದನದಲ್ಲಿ ಕಾವೇರಿ ವಿಚಾರ ಎತ್ತಿದ್ದೇನೆ. ಕರ್ನಾಟಕ, ತಮಿಳುನಾಡಿಗೆ ಸಂಬಂಧ ಇಲ್ಲದ ಅಧಿಕಾರಿಗಳನ್ನು ಗ್ರೌಂಡ್‌ಗೆ ಕಳುಹಿಸಲಿ. ವಾಸ್ತವಿಕ ವರದಿಯನ್ನು ಅಧಿಕಾರಿಗಳ ತಂಡ ಸಲ್ಲಿಸಲಿ. ನಾವು ಒಪ್ಪಿಕೊಳ್ಳುತ್ತೇವೆ, ಆದರೆ ತಮಿಳುನಾಡು ಒಪ್ಪಿಕೊಳ್ಳುತ್ತಿಲ್ಲ. ತಮಿಳುನಾಡಿನ ರಾಜಕಾರಣಿಗಳಲ್ಲಿ ಒಗ್ಗಟ್ಟು ಇದೆ. ನಮ್ಮ ರಾಜಕಾರಣಿಗಳಲ್ಲಿ ಇಲ್ಲ ಎಂದು ಹೇಳಿದರು.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನಾನ್ಯಾವತ್ತೂ ಪ್ರತ್ಯೇಕವಾಗಿ ಪ್ರಧಾನಿಯನ್ನು ಭೇಟಿಯಾಗಲ್ಲ. ಇಂಡಿಯಾ ಸಭೆಗೆ ಕರೆಯುವುದೇ ಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಿತೀಶ್ ಕುಮಾರ್‌ಗೆ ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಮೈತ್ರಿ ವಿಚಾರವಾಗಿ ನಾನು ಯಾರನ್ನೂ ಭೇಟಿಯಾಗಲ್ಲ. ಚರ್ಚೆಗೆ ಬಂದಾಗ ಮಾತನಾಡುತ್ತೇವೆ. ಈಗ ಎಲ್ಲಿದ್ದೇವೆ ಅಲ್ಲೇ ಇರುತ್ತೇವೆ. ಈಗ ಮೈತ್ರಿ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದರು.

lokesh

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

2 hours ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

2 hours ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

2 hours ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

2 hours ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

2 hours ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

2 hours ago