BREAKING NEWS

ಜಿಯೋ ಗ್ರಾಹಕರಿಗೆ ಬಿಗ್‌ ಶಾಕ್… ಮೊಬೈಲ್‌ ರಿಚಾರ್ಚ್‌ ಮತ್ತಷ್ಟು ದುಬಾರಿ..!

ಮೈಸೂರು: ದೇಶದ ಪ್ರಮುಖ ಟಿಲಿಕಾಂ ಕಂಪನಿ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ಹೆಚ್ಚಳ ಮಾಡಿದೆ. ತನ್ನ ಪ್ರಿಪೇಯ್ಡ್‌ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಈ ಹೊಸ ದರ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್‌ ಬೆಲೆಗಳಲ್ಲಿ ಮೊದಲ ಹೆಚ್ಚಳ ಮಾಡಿದೆ. ದೇಶದಲ್ಲಿ ಗರಿಷ್ಠ ಪ್ರಮಾಣದ ಮೊಬೈಲ್‌ ಗ್ರಾಹಕರನ್ನು ಹೊಂದಿರುವ ಜಿಯೋ ಇದೀಗ ತನ್ನ ಗ್ರಾಹಕರಿಗೆ ದರ ಹೆಚ್ಚಳದ ಬಿಸಿ ಮುಟ್ಟಿಸಿದೆ.

ಹಿಂದೆ ಎಷ್ಟಿತ್ತು, ಈಗಾ ಎಷ್ಟಾಗುತ್ತೆ?

ಈ ಹಿಂದೆ 155 ರೂಪಾಯಿ ರಿಚಾರ್ಚ್‌ ಪ್ಲ್ಯಾನ್‌ 189 ರೂಪಾಯಿಗೆ ಏರಲಿದೆ. ಆದರೆ ವ್ಯಾಲಿಡಿಟಿ ಮಾತ್ರ 28ದಿನಗಳಿಗೆ ಇರಲಿದೆ. ಇನ್ನು 209 ರೂಪಾಯಿಯ ರಿಚಾರ್ಚ್‌ ಪ್ಲ್ಯಾನ್‌ 249 ರೂಪಾಯಿ ಆಗಲಿದೆ. ಇಲ್ಲಿ 40 ರೂ ಏರಿಕೆ ಕಂಡಿದೆ. ಇದರ ವ್ಯಾಲಿಡಿಟಿ ಕೂಡ 28 ದಿನ ಇರಲಿದೆ.

ಡೇಟಾ ಇಂಟರ್‌ನೆಟ್‌ ಪ್ಲ್ಯಾನ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇನ್ನೂ 5G ಅನಿಯಮಿತ ಡೇಟಾವನ್ನು ನೀಡುತ್ತಿದ್ದ ರೂ. 239 ಯೋಜನೆಯು ಇನ್ನು ಮುಂದೆ ಇರೋದಿಲ್ಲ. 239 ರ ರಿಚಾರ್ಜ್‌ ಪ್ಲ್ಯಾನ್‌ ಇದೀಗ ರೂ.299 ಆಗಲಿದೆ. ಆದರೆ 5G ಅನಿಯಮಿತ ಡೇಟಾವು 2GB ಮತ್ತು ಅದಕ್ಕಿಂತ ಹೆಚ್ಚಿನ ಯೋಜನೆಗಳಲ್ಲಿ ಮಾತ್ರ ಇರುತ್ತದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

2 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

2 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

3 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

4 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

4 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

4 hours ago