BREAKING NEWS

ಜಿಯೋ ಗ್ರಾಹಕರಿಗೆ ಬಿಗ್‌ ಶಾಕ್… ಮೊಬೈಲ್‌ ರಿಚಾರ್ಚ್‌ ಮತ್ತಷ್ಟು ದುಬಾರಿ..!

ಮೈಸೂರು: ದೇಶದ ಪ್ರಮುಖ ಟಿಲಿಕಾಂ ಕಂಪನಿ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ಹೆಚ್ಚಳ ಮಾಡಿದೆ. ತನ್ನ ಪ್ರಿಪೇಯ್ಡ್‌ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಈ ಹೊಸ ದರ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್‌ ಬೆಲೆಗಳಲ್ಲಿ ಮೊದಲ ಹೆಚ್ಚಳ ಮಾಡಿದೆ. ದೇಶದಲ್ಲಿ ಗರಿಷ್ಠ ಪ್ರಮಾಣದ ಮೊಬೈಲ್‌ ಗ್ರಾಹಕರನ್ನು ಹೊಂದಿರುವ ಜಿಯೋ ಇದೀಗ ತನ್ನ ಗ್ರಾಹಕರಿಗೆ ದರ ಹೆಚ್ಚಳದ ಬಿಸಿ ಮುಟ್ಟಿಸಿದೆ.

ಹಿಂದೆ ಎಷ್ಟಿತ್ತು, ಈಗಾ ಎಷ್ಟಾಗುತ್ತೆ?

ಈ ಹಿಂದೆ 155 ರೂಪಾಯಿ ರಿಚಾರ್ಚ್‌ ಪ್ಲ್ಯಾನ್‌ 189 ರೂಪಾಯಿಗೆ ಏರಲಿದೆ. ಆದರೆ ವ್ಯಾಲಿಡಿಟಿ ಮಾತ್ರ 28ದಿನಗಳಿಗೆ ಇರಲಿದೆ. ಇನ್ನು 209 ರೂಪಾಯಿಯ ರಿಚಾರ್ಚ್‌ ಪ್ಲ್ಯಾನ್‌ 249 ರೂಪಾಯಿ ಆಗಲಿದೆ. ಇಲ್ಲಿ 40 ರೂ ಏರಿಕೆ ಕಂಡಿದೆ. ಇದರ ವ್ಯಾಲಿಡಿಟಿ ಕೂಡ 28 ದಿನ ಇರಲಿದೆ.

ಡೇಟಾ ಇಂಟರ್‌ನೆಟ್‌ ಪ್ಲ್ಯಾನ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇನ್ನೂ 5G ಅನಿಯಮಿತ ಡೇಟಾವನ್ನು ನೀಡುತ್ತಿದ್ದ ರೂ. 239 ಯೋಜನೆಯು ಇನ್ನು ಮುಂದೆ ಇರೋದಿಲ್ಲ. 239 ರ ರಿಚಾರ್ಜ್‌ ಪ್ಲ್ಯಾನ್‌ ಇದೀಗ ರೂ.299 ಆಗಲಿದೆ. ಆದರೆ 5G ಅನಿಯಮಿತ ಡೇಟಾವು 2GB ಮತ್ತು ಅದಕ್ಕಿಂತ ಹೆಚ್ಚಿನ ಯೋಜನೆಗಳಲ್ಲಿ ಮಾತ್ರ ಇರುತ್ತದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

23 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago