BREAKING NEWS

ಜಿಯೋ ಗ್ರಾಹಕರಿಗೆ ಬಿಗ್‌ ಶಾಕ್… ಮೊಬೈಲ್‌ ರಿಚಾರ್ಚ್‌ ಮತ್ತಷ್ಟು ದುಬಾರಿ..!

ಮೈಸೂರು: ದೇಶದ ಪ್ರಮುಖ ಟಿಲಿಕಾಂ ಕಂಪನಿ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ಹೆಚ್ಚಳ ಮಾಡಿದೆ. ತನ್ನ ಪ್ರಿಪೇಯ್ಡ್‌ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಈ ಹೊಸ ದರ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್‌ ಬೆಲೆಗಳಲ್ಲಿ ಮೊದಲ ಹೆಚ್ಚಳ ಮಾಡಿದೆ. ದೇಶದಲ್ಲಿ ಗರಿಷ್ಠ ಪ್ರಮಾಣದ ಮೊಬೈಲ್‌ ಗ್ರಾಹಕರನ್ನು ಹೊಂದಿರುವ ಜಿಯೋ ಇದೀಗ ತನ್ನ ಗ್ರಾಹಕರಿಗೆ ದರ ಹೆಚ್ಚಳದ ಬಿಸಿ ಮುಟ್ಟಿಸಿದೆ.

ಹಿಂದೆ ಎಷ್ಟಿತ್ತು, ಈಗಾ ಎಷ್ಟಾಗುತ್ತೆ?

ಈ ಹಿಂದೆ 155 ರೂಪಾಯಿ ರಿಚಾರ್ಚ್‌ ಪ್ಲ್ಯಾನ್‌ 189 ರೂಪಾಯಿಗೆ ಏರಲಿದೆ. ಆದರೆ ವ್ಯಾಲಿಡಿಟಿ ಮಾತ್ರ 28ದಿನಗಳಿಗೆ ಇರಲಿದೆ. ಇನ್ನು 209 ರೂಪಾಯಿಯ ರಿಚಾರ್ಚ್‌ ಪ್ಲ್ಯಾನ್‌ 249 ರೂಪಾಯಿ ಆಗಲಿದೆ. ಇಲ್ಲಿ 40 ರೂ ಏರಿಕೆ ಕಂಡಿದೆ. ಇದರ ವ್ಯಾಲಿಡಿಟಿ ಕೂಡ 28 ದಿನ ಇರಲಿದೆ.

ಡೇಟಾ ಇಂಟರ್‌ನೆಟ್‌ ಪ್ಲ್ಯಾನ್‌ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇನ್ನೂ 5G ಅನಿಯಮಿತ ಡೇಟಾವನ್ನು ನೀಡುತ್ತಿದ್ದ ರೂ. 239 ಯೋಜನೆಯು ಇನ್ನು ಮುಂದೆ ಇರೋದಿಲ್ಲ. 239 ರ ರಿಚಾರ್ಜ್‌ ಪ್ಲ್ಯಾನ್‌ ಇದೀಗ ರೂ.299 ಆಗಲಿದೆ. ಆದರೆ 5G ಅನಿಯಮಿತ ಡೇಟಾವು 2GB ಮತ್ತು ಅದಕ್ಕಿಂತ ಹೆಚ್ಚಿನ ಯೋಜನೆಗಳಲ್ಲಿ ಮಾತ್ರ ಇರುತ್ತದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

17 mins ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

43 mins ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

2 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

2 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

5 hours ago

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…

10 hours ago