BREAKING NEWS

ಲೈಟ್‌ ಕಂಬಕ್ಕೆ ಬೈಕ್‌ ಡಿಕ್ಕಿ : ಸವಾರರಿಬ್ಬರ ದುರ್ಮರಣ

ಮಡಿಕೇರಿ : ಬೈಕ್ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಸಮೀಪದ ಈ ಅವಘಡ ನಡೆದಿದೆ. ರಾತ್ರಿ ಘಟನೆ ನಡೆದಿದ್ದರೂ ನಿರ್ಜನ ಪ್ರದೇಶವಾದ್ದರಿಂದ ಬೆಳಗಿನವರೆಗೂ ಯಾರ ಗಮನಕ್ಕೂ ಬಂದಿರಲಿಲ್ಲ.

ಬೈಕ್ ಲೈಟ್ ಕಂಬಕ್ಕೆ ಅಪ್ಪಳಿಸಿದ್ದರಿಂದ ಬೈಕ್ನಿಂದ ಚಿಮ್ಮಿಬಿದ್ದ ಸವಾರರು ಸ್ಥಳದಲ್ಲೆ ಪ್ರಾಣ ಚೆಲ್ಲಿದ್ದಾರೆ. ಧಾರಾಕಾರವಾಗಿ ಮಳೆ ಬರುತ್ತಿದ್ದುದರಿಂದ ದಾರಿ ಕಾಣದೆ ಅಥವಾ ಸ್ಕಿಡ್ ಆಗಿ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

ಉದಯ(25) ಹಾಗೂ ಚಂದನ್(26) ಮೃತ ದುರ್ಧೈವಿಗಳು. ಇಬ್ಬರೂ ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳು. ನಿನ್ನೆ ರಾತ್ರಿಯೇ ಇವರು ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುವಾಗ ಅಪಘಾತ ನಡೆದಿದ್ದು, ಮುಂಜಾನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

lokesh

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

32 mins ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

40 mins ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

2 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

4 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

4 hours ago