ಮಡಿಕೇರಿ : ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಸಮೀಪದ ಈ ಅವಘಡ ನಡೆದಿದೆ. ರಾತ್ರಿ ಘಟನೆ ನಡೆದಿದ್ದರೂ ನಿರ್ಜನ ಪ್ರದೇಶವಾದ್ದರಿಂದ ಬೆಳಗಿನವರೆಗೂ ಯಾರ ಗಮನಕ್ಕೂ ಬಂದಿರಲಿಲ್ಲ.
ಬೈಕ್ ಲೈಟ್ ಕಂಬಕ್ಕೆ ಅಪ್ಪಳಿಸಿದ್ದರಿಂದ ಬೈಕ್ನಿಂದ ಚಿಮ್ಮಿಬಿದ್ದ ಸವಾರರು ಸ್ಥಳದಲ್ಲೆ ಪ್ರಾಣ ಚೆಲ್ಲಿದ್ದಾರೆ. ಧಾರಾಕಾರವಾಗಿ ಮಳೆ ಬರುತ್ತಿದ್ದುದರಿಂದ ದಾರಿ ಕಾಣದೆ ಅಥವಾ ಸ್ಕಿಡ್ ಆಗಿ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಉದಯ(25) ಹಾಗೂ ಚಂದನ್(26) ಮೃತ ದುರ್ಧೈವಿಗಳು. ಇಬ್ಬರೂ ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳು. ನಿನ್ನೆ ರಾತ್ರಿಯೇ ಇವರು ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುವಾಗ ಅಪಘಾತ ನಡೆದಿದ್ದು, ಮುಂಜಾನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…