ಮಡಿಕೇರಿ : ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೆ ದುರ್ಮರಣ ಹೊಂದಿದ್ದಾರೆ. ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಬಿರ್ಚಿ ವುಡ್ ರೆಸಾರ್ಟ್ ಸಮೀಪದ ಈ ಅವಘಡ ನಡೆದಿದೆ. ರಾತ್ರಿ ಘಟನೆ ನಡೆದಿದ್ದರೂ ನಿರ್ಜನ ಪ್ರದೇಶವಾದ್ದರಿಂದ ಬೆಳಗಿನವರೆಗೂ ಯಾರ ಗಮನಕ್ಕೂ ಬಂದಿರಲಿಲ್ಲ.
ಬೈಕ್ ಲೈಟ್ ಕಂಬಕ್ಕೆ ಅಪ್ಪಳಿಸಿದ್ದರಿಂದ ಬೈಕ್ನಿಂದ ಚಿಮ್ಮಿಬಿದ್ದ ಸವಾರರು ಸ್ಥಳದಲ್ಲೆ ಪ್ರಾಣ ಚೆಲ್ಲಿದ್ದಾರೆ. ಧಾರಾಕಾರವಾಗಿ ಮಳೆ ಬರುತ್ತಿದ್ದುದರಿಂದ ದಾರಿ ಕಾಣದೆ ಅಥವಾ ಸ್ಕಿಡ್ ಆಗಿ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಉದಯ(25) ಹಾಗೂ ಚಂದನ್(26) ಮೃತ ದುರ್ಧೈವಿಗಳು. ಇಬ್ಬರೂ ಸುಂಟಿಕೊಪ್ಪದ ಮದುರಮ ಬಡಾವಣೆ ನಿವಾಸಿಗಳು. ನಿನ್ನೆ ರಾತ್ರಿಯೇ ಇವರು ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುವಾಗ ಅಪಘಾತ ನಡೆದಿದ್ದು, ಮುಂಜಾನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…