ಕೆ.ಆರ್.ಪೇಟೆ: ತಾಲ್ಲೂಕಿನ ಹಿರೀಕಳಲೆ ಬಳಿ ಭಾನುವಾರ ರಾತ್ರಿ ಹಿಟ್ ಅಂಡ್ ರನ್ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರ ಧಾರುಣ ಸಾವು ಉಂಟಾಗಿದೆ.
ಹಿರೀಕಳಲೆ ಗ್ರಾಮದ ಸಂದೇಶ್ ಮತ್ತು ಮರಡಹಳ್ಳಿಯ ಭರತ್ ಮೃತ ದುರ್ದೈವಿಗಳು.
ಎಳನೀರು ವ್ಯಾಪಾರ ಮಾಡಿ ತಮ್ಮ ಮನೆಯ ಸಂಸಾರಕ್ಕೆ ಆಸರೆಯಾಗಿದ್ದ ಯುವಕರಾಗಿದ್ದು, ಭಾನುವಾರ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ಕೆ.ಆರ್.ಪೇಟೆ ಕಡೆಯಿಂದ ಊರಿನ ಕಡೆ ಹೋಗುವಾಗ ಅಪಘಾತ ಸಂಭವಿಸಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ಅಪಘಾತ ನಡೆಸಿ ಪರಾರಿಯಾಗಿರುವ ವಾಹನ ಪತ್ತೆಗೆ ಸೂಕ್ತ ಕ್ರಮ ಕೈಗೊಂಡಿದ್ದಾರೆ.
ಘಟನೆ ಕುರಿತು ಕಿಕ್ಕೇರಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…