ಹಲಗೂರು : ಇಲ್ಲಿಗೆ ಸಮೀಪದ ಅಂತರವಳ್ಳಿ ಗ್ರಾಮದಲ್ಲಿ ಎರಡು ಬೈಕ್ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡು, ನಂತರ ಚಿಕಿತ್ಸೆ ಫಲಿಸದೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಅಂತರವಳ್ಳಿ ಗ್ರಾಮದ ಕುಮಾರಸ್ವಾಮಿ ಅವರ ಪುತ್ರ ಎ.ಕೆ.ಶಿವಪ್ಪ (32) ಮೃತ ಯುವಕ.
ಶನಿವಾರ ಬೆಳಿಗ್ಗೆ ಕಾರ್ಯನಿಮಿತ್ತ ಹಲಗೂರಿಗೆ ಹೋಗಿ ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದಾಗ ಇಲ್ಲಿನ ಸರ್ಕಾರಿ ನ್ಯಾಯ ಬೆಲೆ ಅಂಗಡಿ ಎದುರು ಹುಸ್ಕೂರು ಕಡೆಯಿಂದ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಡಿಕ್ಕಿ ಹೊಡೆದ ಬೈಕ್ ಸವಾರ ತನ್ನ ಬೈಕ್ನೊಂದಿಗೆ ಪರಾರಿಯಾಗಿದ್ದಾರೆ.
ತೀವ್ರ ಗಾಯಗೊಂಡ ಶಿವಪ್ಪ ಅವರಿಗೆ ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…