ನವದೆಹಲಿ : ಬಿಲ್ಕಿಸ್ ಬಾನು ಹತ್ಯೆ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಶಿಕ್ಷೆ ಕಡಿತಗೊಳಿಸಿ ಮೇ 2022 ರಂದು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ಬಿಲ್ಕಿಸ್ ಬಾನು ಹತ್ಯೆ ಮಾಡಿದ್ದ ಆರೋಪಿಗಳು ತಮಗೆ ನೀಡಲಾಗಿದ್ದ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸುವಂತೆ ಕೋರಿ ಗುಜರಾತ್ ಸರ್ಕಾರಕ್ಕೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದ್ದ ಸುಪ್ರೀಂ ಆದೇಶವನ್ನು ಸ್ವತಃ ಸುಪ್ರೀಂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ನಿವೃತ್ತರಾಗಿರುವ ನ್ಯಾಯಾದೀಶರಾದ ಅಜಯ್ ರಸ್ತೆಗಿ ಆದೇಶ ನೀಡಿದ್ದರು.
ವಂಚನೆ ಹಾಗೂ ವಾಸ್ತವಗಳನ್ನು ಮರೆಮಾಡಿ ಈ ಆದೇಶವನ್ನು ಪಡೆಯಲಾಗಿತ್ತು ಎಂದಿರುವ ಸುಪ್ರೀಂ ಕೋರ್ಟ್, ಅಪರಾಧಿಗಳ ಬಿಡುಗಡೆ ಮರುಪರಿಶೀಲಿಸಲು ಅರ್ಜಿ ಸಲ್ಲಿಸದೇ ಇರುವುದಕ್ಕೆ ಗುಜರಾತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಅಪರಾಧಿಗಳ ವಿಚಾರಣೆಯು ಮಹಾರಾಷ್ಟ್ರ ನ್ಯಾಯಾಲಯದಲ್ಲಿ ನಡೆದಿದ್ದರಿಂದ ಮಹಾರಾಷ್ಟ್ರ ಸರ್ಕಾರ ಮಾತ್ರ ಅವರ ಶಿಕ್ಷೆ ಕಡಿತಗೊಳಿಸುವ ಹಕ್ಕು ಹೊಂದಿತ್ತು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪರಾಧಿಗಳಲ್ಲೊಬ್ಬ ರಾಧೇಶ್ಯಾಮ್ ಭಗವಾನ್ ದಾಸ್ ಶಾ ಎಂಬಾತ ಶಿಕ್ಷೆ ಕಡಿತಗೊಳಿಸಲು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕೋರಿದ ಅನುಮತಿಯನ್ನು ಜುಲೈ 2019ರಲ್ಲಿ ಗುಜರತ್ ಹೈಕೋರ್ಟ್ ನಿರಾಕರಿಸಿದ ನಂತರ ಸಲ್ಲಿಸಿದ್ದ ಅರ್ಜಿ ಇದಾಗಿತ್ತು.
ಆತ ಮಹಾರಾಷ್ಟ್ರ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ನಿರ್ಧಾರ ಪ್ರಕಟಗೊಳ್ಳುವ ಮುನ್ನವೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ.
ಈ ಹಿಂದೆ ಆಗಸ್ಟ್ ತಿಂಗಳಿನಲ್ಲಿ ತನ್ನ ಮೇ 2022 ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿತ್ತು. ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ನೀಡಿರುವ ಆದೇಶ ರದ್ದುಗೊಳಿಸಿರುವ ಸುಪ್ರೀಂ, ಆರೋಪಿಗಳಿಗೆ ಜೈಲಿಗೆ ಮರಳಲು ಎರಡು ವಾರಗಳ ಗಡುವು ನೀಡಿದೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…