BREAKING NEWS

ಬಿಲ್ಕಿಸ್‌ ಬಾನು ಪ್ರಕರಣ: ಆರೋಪಿಗಳಿಗೆ ಜೈಲಿಗೆ ಮರಳಲು ಎರಡು ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ

ನವದೆಹಲಿ : ಬಿಲ್ಕಿಸ್ ಬಾನು ಹತ್ಯೆ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಶಿಕ್ಷೆ ಕಡಿತಗೊಳಿಸಿ ಮೇ 2022 ರಂದು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಇಂದು ರದ್ದುಗೊಳಿಸಿದೆ.

ಬಿಲ್ಕಿಸ್‌ ಬಾನು ಹತ್ಯೆ ಮಾಡಿದ್ದ ಆರೋಪಿಗಳು ತಮಗೆ ನೀಡಲಾಗಿದ್ದ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸುವಂತೆ ಕೋರಿ ಗುಜರಾತ್‌ ಸರ್ಕಾರಕ್ಕೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದ್ದ ಸುಪ್ರೀಂ ಆದೇಶವನ್ನು ಸ್ವತಃ ಸುಪ್ರೀಂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ನಿವೃತ್ತರಾಗಿರುವ ನ್ಯಾಯಾದೀಶರಾದ ಅಜಯ್‌ ರಸ್ತೆಗಿ ಆದೇಶ ನೀಡಿದ್ದರು.

ವಂಚನೆ ಹಾಗೂ ವಾಸ್ತವಗಳನ್ನು ಮರೆಮಾಡಿ ಈ ಆದೇಶವನ್ನು ಪಡೆಯಲಾಗಿತ್ತು ಎಂದಿರುವ ಸುಪ್ರೀಂ ಕೋರ್ಟ್‌, ಅಪರಾಧಿಗಳ ಬಿಡುಗಡೆ ಮರುಪರಿಶೀಲಿಸಲು ಅರ್ಜಿ ಸಲ್ಲಿಸದೇ ಇರುವುದಕ್ಕೆ ಗುಜರಾತ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಅಪರಾಧಿಗಳ ವಿಚಾರಣೆಯು ಮಹಾರಾಷ್ಟ್ರ ನ್ಯಾಯಾಲಯದಲ್ಲಿ ನಡೆದಿದ್ದರಿಂದ ಮಹಾರಾಷ್ಟ್ರ ಸರ್ಕಾರ ಮಾತ್ರ ಅವರ ಶಿಕ್ಷೆ ಕಡಿತಗೊಳಿಸುವ ಹಕ್ಕು ಹೊಂದಿತ್ತು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪರಾಧಿಗಳಲ್ಲೊಬ್ಬ ರಾಧೇಶ್ಯಾಮ್ ಭಗವಾನ್‌ ದಾಸ್ ಶಾ ಎಂಬಾತ ಶಿಕ್ಷೆ ಕಡಿತಗೊಳಿಸಲು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕೋರಿದ ಅನುಮತಿಯನ್ನು ಜುಲೈ 2019ರಲ್ಲಿ ಗುಜರತ್ ಹೈಕೋರ್ಟ್ ನಿರಾಕರಿಸಿದ ನಂತರ ಸಲ್ಲಿಸಿದ್ದ ಅರ್ಜಿ ಇದಾಗಿತ್ತು.

ಆತ ಮಹಾರಾಷ್ಟ್ರ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ನಿರ್ಧಾರ ಪ್ರಕಟಗೊಳ್ಳುವ ಮುನ್ನವೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ.

ಈ ಹಿಂದೆ ಆಗಸ್ಟ್ ತಿಂಗಳಿನಲ್ಲಿ ತನ್ನ ಮೇ 2022 ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿತ್ತು. ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ನೀಡಿರುವ ಆದೇಶ ರದ್ದುಗೊಳಿಸಿರುವ ಸುಪ್ರೀಂ, ಆರೋಪಿಗಳಿಗೆ ಜೈಲಿಗೆ ಮರಳಲು ಎರಡು ವಾರಗಳ ಗಡುವು ನೀಡಿದೆ.

andolanait

Recent Posts

27ನೇ ಕೊಡವ ಕೌಟುಂಬಿಕ ಹಾಕಿ ಉತ್ಸವಕ್ಕೆ ಅಜ್ಜಿಕುಟ್ಟಿರ ನೇತೃತ್ವ

ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…

2 hours ago

ಕಬಿನಿ ಹಿನ್ನೀರಿಗೆ ಹಿಂಡು ಹಿಂಡಾಗಿ ವನ್ಯಪ್ರಾಣಿಗಳ ಲಗ್ಗೆ

ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…

2 hours ago

ನೀರಿನ ಪೈಪ್‌ಲೈನ್ ಅಳವಡಿಕೆ ಚುರುಕು

  ೧೦೦ ಕಿ.ಮೀ.ಹೆಚ್‌ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…

2 hours ago

ಜೂ.20ರಿಂದ ಎಸ್‌ಐಆರ್; ಮತದಾರರಲ್ಲಿ ಇರಲಿ ಜಾಗ್ರತೆ

ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್‌ಒಗಳು ಮೈಸೂರು:ಕಳೆದ ಎಲೆಕ್ಷನ್‌ನಲ್ಲಿ ಇದೇ ಬೂತ್‌ನಲ್ಲಿ ವೋಟ್ ಮಾಡಿದ್ದೆ,…

3 hours ago

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

15 hours ago