BREAKING NEWS

ಬಿಲ್ಕಿಸ್‌ ಬಾನು ಪ್ರಕರಣ: ಆರೋಪಿಗಳಿಗೆ ಜೈಲಿಗೆ ಮರಳಲು ಎರಡು ವಾರಗಳ ಕಾಲಾವಕಾಶ ನೀಡಿದ ಸುಪ್ರೀಂ

ನವದೆಹಲಿ : ಬಿಲ್ಕಿಸ್ ಬಾನು ಹತ್ಯೆ ಪ್ರಕರಣದ 11 ಮಂದಿ ಅಪರಾಧಿಗಳಿಗೆ ಶಿಕ್ಷೆ ಕಡಿತಗೊಳಿಸಿ ಮೇ 2022 ರಂದು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಇಂದು ರದ್ದುಗೊಳಿಸಿದೆ.

ಬಿಲ್ಕಿಸ್‌ ಬಾನು ಹತ್ಯೆ ಮಾಡಿದ್ದ ಆರೋಪಿಗಳು ತಮಗೆ ನೀಡಲಾಗಿದ್ದ ಶಿಕ್ಷೆಯ ಅವಧಿಯನ್ನು ಕಡಿತಗೊಳಿಸುವಂತೆ ಕೋರಿ ಗುಜರಾತ್‌ ಸರ್ಕಾರಕ್ಕೆ ಮನವಿ ಸಲ್ಲಿಸಲು ಅನುಮತಿ ನೀಡಲಾಗಿದ್ದ ಸುಪ್ರೀಂ ಆದೇಶವನ್ನು ಸ್ವತಃ ಸುಪ್ರೀಂ ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ. ಈ ನಿವೃತ್ತರಾಗಿರುವ ನ್ಯಾಯಾದೀಶರಾದ ಅಜಯ್‌ ರಸ್ತೆಗಿ ಆದೇಶ ನೀಡಿದ್ದರು.

ವಂಚನೆ ಹಾಗೂ ವಾಸ್ತವಗಳನ್ನು ಮರೆಮಾಡಿ ಈ ಆದೇಶವನ್ನು ಪಡೆಯಲಾಗಿತ್ತು ಎಂದಿರುವ ಸುಪ್ರೀಂ ಕೋರ್ಟ್‌, ಅಪರಾಧಿಗಳ ಬಿಡುಗಡೆ ಮರುಪರಿಶೀಲಿಸಲು ಅರ್ಜಿ ಸಲ್ಲಿಸದೇ ಇರುವುದಕ್ಕೆ ಗುಜರಾತ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಅಪರಾಧಿಗಳ ವಿಚಾರಣೆಯು ಮಹಾರಾಷ್ಟ್ರ ನ್ಯಾಯಾಲಯದಲ್ಲಿ ನಡೆದಿದ್ದರಿಂದ ಮಹಾರಾಷ್ಟ್ರ ಸರ್ಕಾರ ಮಾತ್ರ ಅವರ ಶಿಕ್ಷೆ ಕಡಿತಗೊಳಿಸುವ ಹಕ್ಕು ಹೊಂದಿತ್ತು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಪರಾಧಿಗಳಲ್ಲೊಬ್ಬ ರಾಧೇಶ್ಯಾಮ್ ಭಗವಾನ್‌ ದಾಸ್ ಶಾ ಎಂಬಾತ ಶಿಕ್ಷೆ ಕಡಿತಗೊಳಿಸಲು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕೋರಿದ ಅನುಮತಿಯನ್ನು ಜುಲೈ 2019ರಲ್ಲಿ ಗುಜರತ್ ಹೈಕೋರ್ಟ್ ನಿರಾಕರಿಸಿದ ನಂತರ ಸಲ್ಲಿಸಿದ್ದ ಅರ್ಜಿ ಇದಾಗಿತ್ತು.

ಆತ ಮಹಾರಾಷ್ಟ್ರ ನ್ಯಾಯಾಲಯದಲ್ಲಿ ಅಪೀಲು ಸಲ್ಲಿಸಿದ್ದರೂ ನಿರ್ಧಾರ ಪ್ರಕಟಗೊಳ್ಳುವ ಮುನ್ನವೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ.

ಈ ಹಿಂದೆ ಆಗಸ್ಟ್ ತಿಂಗಳಿನಲ್ಲಿ ತನ್ನ ಮೇ 2022 ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಅಚ್ಚರಿ ವ್ಯಕ್ತಪಡಿಸಿತ್ತು. ಗುಜರಾತ್ ಸರ್ಕಾರ ಅಪರಾಧಿಗಳ ಬಿಡುಗಡೆಗೆ ನೀಡಿರುವ ಆದೇಶ ರದ್ದುಗೊಳಿಸಿರುವ ಸುಪ್ರೀಂ, ಆರೋಪಿಗಳಿಗೆ ಜೈಲಿಗೆ ಮರಳಲು ಎರಡು ವಾರಗಳ ಗಡುವು ನೀಡಿದೆ.

andolanait

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

4 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

6 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

8 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

9 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

12 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

13 hours ago