ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿತ್ತು ಎಂಬುದು ಬಹಿರಂಗವಾಗಬೇಕು ಎಂದು ಕಾಂಗ್ರೆಸ್ ಬುಧವಾರ ಆಗ್ರಹಿಸಿದೆ.
ಈ ಪ್ರಕರಣದ ಅಪರಾಧಿಗಳನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಿದ್ದರ ಕುರಿತು ಗುಜರಾತ್ ಸರ್ಕಾರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು. ಇಂಥ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು.
ಇದರ ಬೆನ್ನಲ್ಲೇ, ಕಾಂಗ್ರೆಸ್ ಪಕ್ಷ ಗುಜರಾತ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನೇತ್, ‘ಇದು ಸಾಮಾನ್ಯ ಅಪರಾಧ ಕೃತ್ಯವಲ್ಲ. ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಮಗುವನ್ನು ಕೊಲ್ಲಲಾಗಿತ್ತು. ಆಕೆಯನ್ನು ಎಂಥ ಸಂಕಷ್ಟಕ್ಕೆ ದೂಡಲಾಗಿತ್ತು ಎಂಬ ಕಲ್ಪನೆ ನಿಮಗಿದೆಯೇ’ ಎಂದು ಪ್ರಶ್ನಿಸಿದರು.
‘ಆದಾಗ್ಯೂ, ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದ ಕಡತಗಳ ಮೇಲೆ ತಮಗೆ ವಿಶೇಷ ಅಧಿಕಾರ ಇದೆ ಎಂಬುದಾಗಿ ಕೇಂದ್ರ ಹಾಗೂ ಗುಜರಾತ್ ಸರ್ಕಾರಗಳು ಹೇಳುತ್ತಿವೆ’ ಎಂದು ಟೀಕಿಸಿದರು.
‘ಅದು ಎಂಥ ವಿಶೇಷ ಅಧಿಕಾರ? ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವೆ’ ಎಂದು ಪ್ರಶ್ನಿಸಿದ ಅವರು, ‘ಇದು ಮಹಿಳೆಯೊಬ್ಬಳ ಹಕ್ಕಿಗೆ ಸಂಬಂಧಿಸಿದ್ದು’ ಎಂದರು.
ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ…
ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ…
ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಒತ್ತಾಯಿಸಿದ್ದಾರೆ.…
ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ…
ಬೆಂಗಳೂರು: ಗದಗ ಜಿಲ್ಲೆ ಶಿರಹಟ್ಟಿ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ…