BREAKING NEWS

ಬಿಲ್ಕಿಸ್‌ ಬಾನು ಪ್ರಕರಣ | ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಕಾರಣವೇನು: ಕಾಂಗ್ರೆಸ್

ನವದೆಹಲಿ: ಬಿಲ್ಕಿಸ್‌ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿತ್ತು ಎಂಬುದು ಬಹಿರಂಗವಾಗಬೇಕು ಎಂದು ಕಾಂಗ್ರೆಸ್‌ ಬುಧವಾರ ಆಗ್ರಹಿಸಿದೆ.

ಈ ಪ್ರಕರಣದ ಅಪರಾಧಿಗಳನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಿದ್ದರ ಕುರಿತು ಗುಜರಾತ್‌ ಸರ್ಕಾರವನ್ನು ಸುಪ್ರೀಂಕೋರ್ಟ್‌ ಪ್ರಶ್ನಿಸಿತ್ತು. ಇಂಥ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು.

ಇದರ ಬೆನ್ನಲ್ಲೇ, ಕಾಂಗ್ರೆಸ್‌ ಪಕ್ಷ ಗುಜರಾತ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನೇತ್, ‘ಇದು ಸಾಮಾನ್ಯ ಅಪರಾಧ ಕೃತ್ಯವಲ್ಲ. ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಮಗುವನ್ನು ಕೊಲ್ಲಲಾಗಿತ್ತು. ಆಕೆಯನ್ನು ಎಂಥ ಸಂಕಷ್ಟಕ್ಕೆ ದೂಡಲಾಗಿತ್ತು ಎಂಬ ಕಲ್ಪನೆ ನಿಮಗಿದೆಯೇ’ ಎಂದು ಪ್ರಶ್ನಿಸಿದರು.

‘ಆದಾಗ್ಯೂ, ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದ ಕಡತಗಳ ಮೇಲೆ ತಮಗೆ ವಿಶೇಷ ಅಧಿಕಾರ ಇದೆ ಎಂಬುದಾಗಿ ಕೇಂದ್ರ ಹಾಗೂ ಗುಜರಾತ್‌ ಸರ್ಕಾರಗಳು ಹೇಳುತ್ತಿವೆ’ ಎಂದು ಟೀಕಿಸಿದರು.

‘ಅದು ಎಂಥ ವಿಶೇಷ ಅಧಿಕಾರ? ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವೆ’ ಎಂದು ಪ್ರಶ್ನಿಸಿದ ಅವರು, ‘ಇದು ಮಹಿಳೆಯೊಬ್ಬಳ ಹಕ್ಕಿಗೆ ಸಂಬಂಧಿಸಿದ್ದು’ ಎಂದರು.‌

andolanait

Recent Posts

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

2 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

2 hours ago

ಪಿ.ಜಿ.ಪಾಳ್ಯ ಸಫಾರಿ ಕೇಂದ್ರಕ್ಕೆ ಪ್ರವಾಸಿಗರ ಲಗ್ಗೆ

ಮಹಾದೇಶ್ ಎಂ.ಗೌಡ ಹನೂರು: ಚಾಮರಾಜನಗರ ಜಿಲ್ಲೆಯಲ್ಲಿ ಸಫಾರಿ ಎಂದರೆ ನೆನಪಾಗುವುದು ಬಂಡೀಪುರ, ಕೆ.ಗುಡಿ ಮಾತ್ರ. ಇತ್ತೀಚಿನ ದಿನಗಳಲ್ಲಿ ಹನೂರು ತಾಲ್ಲೂಕಿನ…

2 hours ago

ಈ ಹಳೇ ಕಟ್ಟಡ ಕುಸಿದರೆ ವ್ಯಾಪಾರಿಗಳಿಗೆ ಸಂಚಕಾರ!

ರಾಜೇಶ್ ಬೆಂಡರವಾಡಿ ಚಾಮರಾಜೇಶ್ವರ ದೇವಸ್ಥಾನಕ್ಕೆ ಸೇರಿದ ಈ ಕಟ್ಟಡದಲ್ಲಿ ಬೆಳೆದಿದೆ ಅರಳಿಮರ; ಶೀಘ್ರದಲ್ಲಿ ಕಟ್ಟಡ ತೆರವುಗೊಳಿಸಲು ಆಗ್ರಹ  ಚಾಮರಾಜನಗರ: ಇಲ್ಲಿನ…

2 hours ago

ಮಹಾರಾಜ ಕಾಲೇಜು ಕಟ್ಟಡ ಶಿಥಿಲ

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಶತಮಾನಕ್ಕೂ ಹೆಚ್ಚು ಇತಿಹಾಸ ಹೊಂದಿರುವ ಭವ್ಯ ಪಾರಂಪರಿಕ ಕಟ್ಟಡ, ದೊಡ್ಡ ಬಾಗಿಲು-ಕಿಟಕಿಗಳೊಂದಿಗೆ ಇನ್ನೂ ಗಟ್ಟಿಯಾಗಿ…

2 hours ago

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

15 hours ago