BREAKING NEWS

ಬಿಲ್ಕಿಸ್‌ ಬಾನು ಪ್ರಕರಣ | ಅಪರಾಧಿಗಳ ಅವಧಿಪೂರ್ವ ಬಿಡುಗಡೆ ಕಾರಣವೇನು: ಕಾಂಗ್ರೆಸ್

ನವದೆಹಲಿ: ಬಿಲ್ಕಿಸ್‌ ಬಾನು ಪ್ರಕರಣದ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆ ನಿರ್ಧಾರವನ್ನು ಯಾವ ಆಧಾರದ ಮೇಲೆ ತೆಗೆದುಕೊಳ್ಳಲಾಗಿತ್ತು ಎಂಬುದು ಬಹಿರಂಗವಾಗಬೇಕು ಎಂದು ಕಾಂಗ್ರೆಸ್‌ ಬುಧವಾರ ಆಗ್ರಹಿಸಿದೆ.

ಈ ಪ್ರಕರಣದ ಅಪರಾಧಿಗಳನ್ನು ಅವಧಿಗೂ ಮುನ್ನವೇ ಬಿಡುಗಡೆ ಮಾಡಿದ್ದರ ಕುರಿತು ಗುಜರಾತ್‌ ಸರ್ಕಾರವನ್ನು ಸುಪ್ರೀಂಕೋರ್ಟ್‌ ಪ್ರಶ್ನಿಸಿತ್ತು. ಇಂಥ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಅಪರಾಧದ ಗಂಭೀರತೆಯನ್ನು ಪರಿಗಣಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿತ್ತು.

ಇದರ ಬೆನ್ನಲ್ಲೇ, ಕಾಂಗ್ರೆಸ್‌ ಪಕ್ಷ ಗುಜರಾತ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪಕ್ಷದ ವಕ್ತಾರೆ ಸುಪ್ರಿಯಾ ಶ್ರೀನೇತ್, ‘ಇದು ಸಾಮಾನ್ಯ ಅಪರಾಧ ಕೃತ್ಯವಲ್ಲ. ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಮಗುವನ್ನು ಕೊಲ್ಲಲಾಗಿತ್ತು. ಆಕೆಯನ್ನು ಎಂಥ ಸಂಕಷ್ಟಕ್ಕೆ ದೂಡಲಾಗಿತ್ತು ಎಂಬ ಕಲ್ಪನೆ ನಿಮಗಿದೆಯೇ’ ಎಂದು ಪ್ರಶ್ನಿಸಿದರು.

‘ಆದಾಗ್ಯೂ, ಅಪರಾಧಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದ ಕಡತಗಳ ಮೇಲೆ ತಮಗೆ ವಿಶೇಷ ಅಧಿಕಾರ ಇದೆ ಎಂಬುದಾಗಿ ಕೇಂದ್ರ ಹಾಗೂ ಗುಜರಾತ್‌ ಸರ್ಕಾರಗಳು ಹೇಳುತ್ತಿವೆ’ ಎಂದು ಟೀಕಿಸಿದರು.

‘ಅದು ಎಂಥ ವಿಶೇಷ ಅಧಿಕಾರ? ಇದು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವೆ’ ಎಂದು ಪ್ರಶ್ನಿಸಿದ ಅವರು, ‘ಇದು ಮಹಿಳೆಯೊಬ್ಬಳ ಹಕ್ಕಿಗೆ ಸಂಬಂಧಿಸಿದ್ದು’ ಎಂದರು.‌

andolanait

Recent Posts

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

3 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

4 hours ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

4 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

11 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

11 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

11 hours ago