ಬೆಂಗಳೂರು : ಹಿಂದಿನ ಸರ್ಕಾರದ ಆಡಳಿತಗಾರರಿಗೆ, ಅಧಿಕಾರಿಗಳ ಕೊರಳಿಗೆ ಉರುಳಾಗಲಿದೆ ಎಂದು ಭಾವಿಸಲಾದ ಬಿಟ್ಕಾಯಿನ್ ಹಗರಣದಲ್ಲಿ ವಿಶೇಷ ತನಿಖಾ ದಳ ಬೆಂಗಳೂರಿನ ನಾಲ್ಕು ಕಡೆ ಮನೆ ಶೋಧ ಕಾರ್ಯಾಚರಣೆ ನಡೆಸಿದೆ.
ಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಸೇರಿದ ಜಯನಗರದ ನಿವಾಸ, ಶ್ರೀಕಿಗೆ ನೆರವಾದ ಆರೋಪಕ್ಕೆ ಗುರಿಯಾಗಿರುವ ಸುನೀಶ್ ಹೆಗ್ಡೆ ಅವರ ಸಂಜಯ ನಗರ ನಿವಾಸ, ಪ್ರಸಿದ್ಧ್ ಅವರ ಸದಾಶಿವ ನಗರ ನಿವಾಸ ಮತ್ತು ಸಂಬಂಕರೊಬ್ಬರ ಮನೆಯ ಮೇಲೆ ದಾಳಿಗಳಾಗಿವೆ.
ನ್ಯಾಯಾಲಯದಿಂದ ವಾರಂಟ್ ಪಡೆದು ಇಂದು ಮುಂಜಾನೆ 6 ಗಂಟೆಯಿಂದಲೇ ಶೋಧ ಕಾರ್ಯಾಚರಣೆ ನಡೆಸಲಾಗಿದೆ. 2020 ರಲ್ಲಿ ವರದಿಯಾಗಿದ್ದ ಬಿಟ್ಕಾಯಿನ್ ಹಗರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮರುತನಿಖೆಗೆ ಆದೇಶಿಸಿದ್ದು, ವಿಶೇಷ ತನಿಖಾ ದಳ ರಚಿಸಿದೆ.
ತನಿಖಾ ದಳ ಈಗಾಗಲೇ ವಿವಿಧ ಹಂತಗಳಲ್ಲಿ ವಿಚಾರಣೆ ನಡೆಸುತ್ತಿದೆ. ಅತ್ಯುನ್ನತವಾದ ತಂತ್ರಜ್ಞಾನ ಆಧಾರಿತ ಹೈ ಪ್ರೊಫೈಲ್ ಪ್ರಕರಣವಾಗಿರುವ ಬಿಟ್ಕಾಯಿನ್ನಲ್ಲಿ ಸಾಕ್ಷ್ಯ ಸಂಗ್ರಹಿಸುವುದು ಕಷ್ಟದ ಕೆಲಸವಾಗಿದ್ದು, ತನಿಖಾ ದಳ ಈ ನಿಟ್ಟಿನಲ್ಲಿ ಹಗಲೂ ರಾತ್ರಿ ಬೆನ್ನು ಬಿದ್ದಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಂದಲೂ ಹೇಳಿಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದಿದ್ದ ಮೂವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ದಾಳಿ ಮಾಡುವ ಮೂಲಕ ಸಾಕ್ಷ್ಯಗಳನ್ನು ಸಂಗ್ರಹಿಸುವ ಪ್ರಯತ್ನ ನಡೆಸಿದೆ.
ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…
ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…
ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…