ಬೆಂಗಳೂರು : ಹಿಂದಿನ ಸರ್ಕಾರದ ಆಡಳಿತಗಾರರಿಗೆ, ಅಧಿಕಾರಿಗಳ ಕೊರಳಿಗೆ ಉರುಳಾಗಲಿದೆ ಎಂದು ಭಾವಿಸಲಾದ ಬಿಟ್ಕಾಯಿನ್ ಹಗರಣದಲ್ಲಿ ವಿಶೇಷ ತನಿಖಾ ದಳ ಬೆಂಗಳೂರಿನ ನಾಲ್ಕು ಕಡೆ ಮನೆ ಶೋಧ ಕಾರ್ಯಾಚರಣೆ ನಡೆಸಿದೆ.
ಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಸೇರಿದ ಜಯನಗರದ ನಿವಾಸ, ಶ್ರೀಕಿಗೆ ನೆರವಾದ ಆರೋಪಕ್ಕೆ ಗುರಿಯಾಗಿರುವ ಸುನೀಶ್ ಹೆಗ್ಡೆ ಅವರ ಸಂಜಯ ನಗರ ನಿವಾಸ, ಪ್ರಸಿದ್ಧ್ ಅವರ ಸದಾಶಿವ ನಗರ ನಿವಾಸ ಮತ್ತು ಸಂಬಂಕರೊಬ್ಬರ ಮನೆಯ ಮೇಲೆ ದಾಳಿಗಳಾಗಿವೆ.
ನ್ಯಾಯಾಲಯದಿಂದ ವಾರಂಟ್ ಪಡೆದು ಇಂದು ಮುಂಜಾನೆ 6 ಗಂಟೆಯಿಂದಲೇ ಶೋಧ ಕಾರ್ಯಾಚರಣೆ ನಡೆಸಲಾಗಿದೆ. 2020 ರಲ್ಲಿ ವರದಿಯಾಗಿದ್ದ ಬಿಟ್ಕಾಯಿನ್ ಹಗರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮರುತನಿಖೆಗೆ ಆದೇಶಿಸಿದ್ದು, ವಿಶೇಷ ತನಿಖಾ ದಳ ರಚಿಸಿದೆ.
ತನಿಖಾ ದಳ ಈಗಾಗಲೇ ವಿವಿಧ ಹಂತಗಳಲ್ಲಿ ವಿಚಾರಣೆ ನಡೆಸುತ್ತಿದೆ. ಅತ್ಯುನ್ನತವಾದ ತಂತ್ರಜ್ಞಾನ ಆಧಾರಿತ ಹೈ ಪ್ರೊಫೈಲ್ ಪ್ರಕರಣವಾಗಿರುವ ಬಿಟ್ಕಾಯಿನ್ನಲ್ಲಿ ಸಾಕ್ಷ್ಯ ಸಂಗ್ರಹಿಸುವುದು ಕಷ್ಟದ ಕೆಲಸವಾಗಿದ್ದು, ತನಿಖಾ ದಳ ಈ ನಿಟ್ಟಿನಲ್ಲಿ ಹಗಲೂ ರಾತ್ರಿ ಬೆನ್ನು ಬಿದ್ದಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಂದಲೂ ಹೇಳಿಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದಿದ್ದ ಮೂವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ದಾಳಿ ಮಾಡುವ ಮೂಲಕ ಸಾಕ್ಷ್ಯಗಳನ್ನು ಸಂಗ್ರಹಿಸುವ ಪ್ರಯತ್ನ ನಡೆಸಿದೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…