BREAKING NEWS

ಬಿಟ್‍ ಕಾಯಿನ್ ಹಗರಣ : ಆರೋಪಿಗಳ ಮನೆ ಮೇಲೆ ಎಸ್‌ಐಟಿ ದಾಳಿ

ಬೆಂಗಳೂರು : ಹಿಂದಿನ ಸರ್ಕಾರದ ಆಡಳಿತಗಾರರಿಗೆ, ಅಧಿಕಾರಿಗಳ ಕೊರಳಿಗೆ ಉರುಳಾಗಲಿದೆ ಎಂದು ಭಾವಿಸಲಾದ ಬಿಟ್‍ಕಾಯಿನ್ ಹಗರಣದಲ್ಲಿ ವಿಶೇಷ ತನಿಖಾ ದಳ ಬೆಂಗಳೂರಿನ ನಾಲ್ಕು ಕಡೆ ಮನೆ ಶೋಧ ಕಾರ್ಯಾಚರಣೆ ನಡೆಸಿದೆ.

ಕರಣದ ಪ್ರಮುಖ ಆರೋಪಿ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ಸೇರಿದ ಜಯನಗರದ ನಿವಾಸ, ಶ್ರೀಕಿಗೆ ನೆರವಾದ ಆರೋಪಕ್ಕೆ ಗುರಿಯಾಗಿರುವ ಸುನೀಶ್ ಹೆಗ್ಡೆ ಅವರ ಸಂಜಯ ನಗರ ನಿವಾಸ, ಪ್ರಸಿದ್ಧ್ ಅವರ ಸದಾಶಿವ ನಗರ ನಿವಾಸ ಮತ್ತು ಸಂಬಂಕರೊಬ್ಬರ ಮನೆಯ ಮೇಲೆ ದಾಳಿಗಳಾಗಿವೆ.

ನ್ಯಾಯಾಲಯದಿಂದ ವಾರಂಟ್ ಪಡೆದು ಇಂದು ಮುಂಜಾನೆ 6 ಗಂಟೆಯಿಂದಲೇ ಶೋಧ ಕಾರ್ಯಾಚರಣೆ ನಡೆಸಲಾಗಿದೆ. 2020 ರಲ್ಲಿ ವರದಿಯಾಗಿದ್ದ ಬಿಟ್‍ಕಾಯಿನ್ ಹಗರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮರುತನಿಖೆಗೆ ಆದೇಶಿಸಿದ್ದು, ವಿಶೇಷ ತನಿಖಾ ದಳ ರಚಿಸಿದೆ.

ತನಿಖಾ ದಳ ಈಗಾಗಲೇ ವಿವಿಧ ಹಂತಗಳಲ್ಲಿ ವಿಚಾರಣೆ ನಡೆಸುತ್ತಿದೆ. ಅತ್ಯುನ್ನತವಾದ ತಂತ್ರಜ್ಞಾನ ಆಧಾರಿತ ಹೈ ಪ್ರೊಫೈಲ್ ಪ್ರಕರಣವಾಗಿರುವ ಬಿಟ್‍ಕಾಯಿನ್‍ನಲ್ಲಿ ಸಾಕ್ಷ್ಯ ಸಂಗ್ರಹಿಸುವುದು ಕಷ್ಟದ ಕೆಲಸವಾಗಿದ್ದು, ತನಿಖಾ ದಳ ಈ ನಿಟ್ಟಿನಲ್ಲಿ ಹಗಲೂ ರಾತ್ರಿ ಬೆನ್ನು ಬಿದ್ದಿದೆ. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಂದಲೂ ಹೇಳಿಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದಿದ್ದ ಮೂವರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ದಾಳಿ ಮಾಡುವ ಮೂಲಕ ಸಾಕ್ಷ್ಯಗಳನ್ನು ಸಂಗ್ರಹಿಸುವ ಪ್ರಯತ್ನ ನಡೆಸಿದೆ.

lokesh

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

18 hours ago