BREAKING NEWS

ಬಿಜೆಪಿ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ನೆನ್ನೆ ವಿಧಾನಸಭೆಯಲ್ಲಿ ನಡೆದ ಗದ್ದಲ, ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು, ಉಪಸಭಾಧ್ಯಕ್ಷರಾಗಿ ಕಲಾಪ ನಡೆಸುತ್ತಿದ್ದ ರುದ್ರಪ್ಪ ಲಮಾಣಿ ಅವರತ್ತ ಪೇಪರ್ ಎಸೆದು, ಮಸೂದೆ ಪ್ರತಿಗಳನ್ನು ಹರಿದು ಹಾಕಿದ್ದನ್ನು ಸಿಎಂ ಸಿದ್ದರಾಮಯ್ಯ ಅನಾಗರಿಕ ವರ್ತನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕರು, ಮಾಜಿ ಸಚಿವ ನಡವಳಿಕೆಯ ಕಾರಣದಿಂದಾಗಿ 10 ಶಾಸಕರನ್ನು ಸದನದ ಮುಂದಿನ ಅವಧಿವರೆಗೂ ಅಮಾನತುಗೊಳಿಸಲಾಗಿದೆ. ಸರ್ಕಾರದ ನಡೆಯನ್ನು ಖಂಡಿಸಿರುವ ಜೆಡಿಎಸ್ ಹಾಗೂ ಬಿಜೆಪಿ ಇಂದು ಸದನದ ಕಲಾಪವನ್ನು ಬಹಿಷ್ಕರಿಸಿದ್ದವು.

ಇದಷ್ಟೇ ಅಲ್ಲದೇ ಅವರು ಸಭಾಧ್ಯಕ್ಷರು, ಉಪಸಭಾಧ್ಯಕ್ಷರ ಹುದ್ದೆಗೆ ಗೌರವ ಹೊಂದಿಲ್ಲ ಎಂದು ಬಜೆಟ್ ಮೇಲಿನ ಚರ್ಚೆಗೆ ಪ್ರತಿಕ್ರಿಯೆ ನೀಡುವಾಗ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನೆನ್ನೆಯ ಬಿಜೆಪಿ ಶಾಸಕರ ನಡವಳಿಕೆಯನ್ನು ನಾನು ಏನೆಂದು ಕರೆಯಬೇಕು? ಅಸಭ್ಯ ಎನ್ನುವ ಶಬ್ದವೂ ಅವರ ನಡವಳಿಕೆಯನ್ನು ಸೂಚಿಸಲು ಸಭ್ಯವಾದ ಶಬ್ದವಾಗುತ್ತದೆ ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಘಟನೆಯ ಬಗ್ಗೆ ನೋವು ವ್ಯಕ್ತಪಡಿಸಿರುವ ಸಿದ್ದರಾಮಯ್ಯ,  “ನಾನು 1983 ರಿಂದ ವಿಧಾನಸಭೆಯಲ್ಲಿದ್ದೇನೆ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ ಕಾರ್ಯನಿರ್ವಹಿಸಿದ್ದೇನೆ ಆದರೆ ಎಂದಿಗೂ ಇಂತಹ ನಡವಳಿಕೆಯನ್ನು ಸದನದಲ್ಲಿ ನೋಡಿಲ್ಲ, ಕಾಂಗ್ರೆಸ್ ಶಾಸಕರು ಎಂದಿಗೂ ಈ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ನೆನ್ನೆಯ ಘಟನೆಯಿಂದ ಲಮಾಣಿ ಅವರು ಕುಗ್ಗಿದ್ದಾರೆ, ಆದರೆ ಅವರೊಂದಿಗೆ ಕಾಂಗ್ರೆಸ್ ಎಂದಿಗೂ ಇರಲಿದೆ, ಆದ್ದರಿಂದ ಅವರು ಕುಗ್ಗಬಾರದು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಲಮಾಣಿ ಅವರು ಶತಮಾನಗಳಿಂದ ಶೋಷಣೆಗೆ ಒಳಗಾದ ದಲಿತ ಸಮುದಾಯದವರಾಗಿದ್ದಾರೆ. ಒಂದು ವೇಳೆ ಸದನದಲ್ಲಿ ಮಾರ್ಷಲ್ ಗಳು ಇಲ್ಲದೇ ಇದ್ದಿದ್ದರೆ ಬಿಜೆಪಿಯವರು ಉಪಸಭಾಧ್ಯಕ್ಷರ ಮೇಲೆ ಹಲ್ಲೆಯ ಯತ್ನವನ್ನೂ ಮಾಡುವ ಸಾಧ್ಯತೆ ಇತ್ತು, ನೆನ್ನೆಯ ಅವರ ನಡವಳಿಕೆ ಹಾಗೆಯೇ ಇತ್ತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದೇ ವೇಳೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡದ ಬಿಜೆಪಿಯನ್ನು ಸಿದ್ದರಾಮಯ್ಯ ಟೀಕಿಸಿದ್ದು, ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಯಲ್ಲಿ ಹಾಗೂ ಸಂಮ್ವಿಧಾನದ ಬಗ್ಗೆ ಬಿಜೆಪಿಗರಿಗೆ ನಂಬಿಕೆ ಇಲ್ಲ. ಅವರು ರಚನಾತ್ಮಕ ವಿಪಕ್ಷವಾಗಿ ಕಾರ್ಯನಿರ್ವಹಿಸುವ ಬದಲು ಪ್ರತಿಭಟನೆಗಳಲ್ಲೇ ಕಾಲ ಕಳೆಯುತ್ತಾರೆ ಎಂದೂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ವಿಪಕ್ಷ ನಾಯಕನನ್ನೇ ಆಯ್ಕೆ ಮಾಡಿಲ್ಲ. ಆದ್ದರಿಂದ ವಿಪಕ್ಷ ನಾಯಕನೇ ಇಲ್ಲದೇ ಮೊದಲ ಬಾರಿಗೆ ಬಜೆಟ್ ಬಗ್ಗೆ ಚರ್ಚೆ ನಡೆದಿದೆ. ಬಿಜೆಪಿ ವಿಪಕ್ಷನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ, ರಾಜಕೀಯವಾಗಿ ದಿವಾಳಿಯಾಗಿದೆ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿ ಮೋದಿ ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡಿದ್ದರು ಆದರೆ ಕಾಂಗ್ರೆಸ್ ಆ ರೀತಿ ಎಂದಿಗೂ ಯೋಚಿಸುವುದಿಲ್ಲ.  ನಾವು ಬಿಜೆಪಿ ಮುಕ್ತ ಭಾರತ ಅಂತಲೋ ಬಿಜೆಪಿ ಮುಕ್ತ ಕರ್ನಾಟಕ ಎಂದೋ ಹೇಳುವುದಿಲ್ಲ. ಏಕೆಂದರೆ ಅವರು ಕೋಮುವಾದಿಗಳು ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಹಾಳುಮಾಡುವ ದುಷ್ಟ ಶಕ್ತಿಗಳು, ನಮ್ಮ ಉದ್ದೇಶ ಒಂದೇ ಅದು ಅಂತಹ ಶಕ್ತಿಗಳು ಅಧಿಕಾರಕ್ಕೆ ಬರಬಾರದೆಂಬುದಾಗಿದೆ ಎಂದು ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು.

andolanait

Recent Posts

ಓದುಗರ ಪತ್ರ: ವಿಶ್ವ ಶಾಂತಿಗೆ ಪೋಪ್ ಕರೆ ಸ್ವಾಗತಾರ್ಹ

ಮಧ್ಯ ಪ್ರಾಚ್ಯ ದೇಶಗಳಲ್ಲಿ ಕಳೆದ ೪೦ ದಿನಗಳಿಂದಲೂ ಯುದ್ಧ ನಡೆಯುತ್ತಿರುವುದರಿಂದ ವಿವಿಧ ದೇಶಗಳು ಸಂಕಷ್ಟಕ್ಕೆ ಸಿಲುಕಿವೆ. ಪೋಪ್ ೧೪ನೇ ಲಿಯೋರವರು…

22 mins ago

ಓದುಗರ ಪತ್ರ: ವಿದ್ಯಾರ್ಥಿಗಳ ಸ್ಕಾಲರ್‌ಶಿಪ್ ಮೊತ್ತ ಹೆಚ್ಚಿಸಿ

ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಸರ್ಕಾರ ನೀಡುವ ಸ್ಕಾಲರ್‌ಶಿಪ್ ದೊಡ್ಡ ಸಹಾಯವಾಗಿದೆ. ಆದರೆ ವಸತಿ ವೆಚ್ಚ,ಪುಸ್ತಕಗಳು ಹಾಗೂ…

24 mins ago

ಓದುಗರ ಪತ್ರ: ದಿಕ್ಕು ತಪ್ಪುತ್ತಿರುವ ಕೊಲ್ಲಿ ಸಮರ

ಕೊಲ್ಲಿಯಲ್ಲಿ ಅಮೆರಿಕ-ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿದ್ದ ಯುದ್ಧದ ನಿಲುಗಡೆಗಾಗಿ ಕರೆಯಲಾಗಿದ್ದ ಪಾಕಿಸ್ತಾನ ನೇತೃತ್ವದ ಸಂಧಾನ ಸಭೆ ವಿಫಲವಾಗುವುದರೊಂದಿಗೆ ಕೊಲ್ಲಿಯಲ್ಲಿ…

27 mins ago

ಓದುಗರ ಪತ್ರ: ರಸ್ತೆ ದುರಸ್ತಿಗೊಳಿಸಿ

ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದ ರಸ್ತೆ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಸವಾರರು ಹರ ಸಾಹಸ ಮಾಡಬೇಕಾಗಿದೆ. ರಸ್ತೆಯ…

3 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಕಸ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ಜ್ಯೂಸ್ ಸೆಂಟರ್, ಕಾಫಿ, ಟೀ ಅಂಗಡಿಗಳು ಪ್ಲಾಸ್ಟಿಕ್ ಕವರ್, ನೀರಿನ ಬಾಟಲಿ, ಪ್ಲಾಸ್ಟಿಕ್ ಕಪ್‌ಗಳನ್ನು…

3 hours ago

ಹಾರ್ಮುಜ್ ಹಾದಿಯಲ್ಲಿ ಬಟ್ಟಬಯಲಾದ ನೀತಿ ವೈಫಲ್ಯ

ಭಾರತದ ಹೆಚ್ಚಿನ ಕುಟುಂಬಗಳಿಗೆ ಅಡುಗೆ ಅನಿಲ ಅಥವಾ ಎಲ್‌ಪಿಜಿ ಎಂಬುದು ದಿನಚರಿಯ ಅವಿಭಾಜ್ಯ ಅಂಗವಾಗಿದೆ. ಸಿಲಿಂಡರ್ ಯಾವಾಗ ಖಾಲಿಯಾಗುತ್ತದೆ ಎನ್ನುವುದರತ್ತ…

3 hours ago