BREAKING NEWS

ಬಿಜೆಪಿ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ನೆನ್ನೆ ವಿಧಾನಸಭೆಯಲ್ಲಿ ನಡೆದ ಗದ್ದಲ, ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು, ಉಪಸಭಾಧ್ಯಕ್ಷರಾಗಿ ಕಲಾಪ ನಡೆಸುತ್ತಿದ್ದ ರುದ್ರಪ್ಪ ಲಮಾಣಿ ಅವರತ್ತ ಪೇಪರ್ ಎಸೆದು, ಮಸೂದೆ ಪ್ರತಿಗಳನ್ನು ಹರಿದು ಹಾಕಿದ್ದನ್ನು ಸಿಎಂ ಸಿದ್ದರಾಮಯ್ಯ ಅನಾಗರಿಕ ವರ್ತನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕರು, ಮಾಜಿ ಸಚಿವ ನಡವಳಿಕೆಯ ಕಾರಣದಿಂದಾಗಿ 10 ಶಾಸಕರನ್ನು ಸದನದ ಮುಂದಿನ ಅವಧಿವರೆಗೂ ಅಮಾನತುಗೊಳಿಸಲಾಗಿದೆ. ಸರ್ಕಾರದ ನಡೆಯನ್ನು ಖಂಡಿಸಿರುವ ಜೆಡಿಎಸ್ ಹಾಗೂ ಬಿಜೆಪಿ ಇಂದು ಸದನದ ಕಲಾಪವನ್ನು ಬಹಿಷ್ಕರಿಸಿದ್ದವು.

ಇದಷ್ಟೇ ಅಲ್ಲದೇ ಅವರು ಸಭಾಧ್ಯಕ್ಷರು, ಉಪಸಭಾಧ್ಯಕ್ಷರ ಹುದ್ದೆಗೆ ಗೌರವ ಹೊಂದಿಲ್ಲ ಎಂದು ಬಜೆಟ್ ಮೇಲಿನ ಚರ್ಚೆಗೆ ಪ್ರತಿಕ್ರಿಯೆ ನೀಡುವಾಗ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನೆನ್ನೆಯ ಬಿಜೆಪಿ ಶಾಸಕರ ನಡವಳಿಕೆಯನ್ನು ನಾನು ಏನೆಂದು ಕರೆಯಬೇಕು? ಅಸಭ್ಯ ಎನ್ನುವ ಶಬ್ದವೂ ಅವರ ನಡವಳಿಕೆಯನ್ನು ಸೂಚಿಸಲು ಸಭ್ಯವಾದ ಶಬ್ದವಾಗುತ್ತದೆ ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಘಟನೆಯ ಬಗ್ಗೆ ನೋವು ವ್ಯಕ್ತಪಡಿಸಿರುವ ಸಿದ್ದರಾಮಯ್ಯ,  “ನಾನು 1983 ರಿಂದ ವಿಧಾನಸಭೆಯಲ್ಲಿದ್ದೇನೆ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ ಕಾರ್ಯನಿರ್ವಹಿಸಿದ್ದೇನೆ ಆದರೆ ಎಂದಿಗೂ ಇಂತಹ ನಡವಳಿಕೆಯನ್ನು ಸದನದಲ್ಲಿ ನೋಡಿಲ್ಲ, ಕಾಂಗ್ರೆಸ್ ಶಾಸಕರು ಎಂದಿಗೂ ಈ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ನೆನ್ನೆಯ ಘಟನೆಯಿಂದ ಲಮಾಣಿ ಅವರು ಕುಗ್ಗಿದ್ದಾರೆ, ಆದರೆ ಅವರೊಂದಿಗೆ ಕಾಂಗ್ರೆಸ್ ಎಂದಿಗೂ ಇರಲಿದೆ, ಆದ್ದರಿಂದ ಅವರು ಕುಗ್ಗಬಾರದು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಲಮಾಣಿ ಅವರು ಶತಮಾನಗಳಿಂದ ಶೋಷಣೆಗೆ ಒಳಗಾದ ದಲಿತ ಸಮುದಾಯದವರಾಗಿದ್ದಾರೆ. ಒಂದು ವೇಳೆ ಸದನದಲ್ಲಿ ಮಾರ್ಷಲ್ ಗಳು ಇಲ್ಲದೇ ಇದ್ದಿದ್ದರೆ ಬಿಜೆಪಿಯವರು ಉಪಸಭಾಧ್ಯಕ್ಷರ ಮೇಲೆ ಹಲ್ಲೆಯ ಯತ್ನವನ್ನೂ ಮಾಡುವ ಸಾಧ್ಯತೆ ಇತ್ತು, ನೆನ್ನೆಯ ಅವರ ನಡವಳಿಕೆ ಹಾಗೆಯೇ ಇತ್ತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದೇ ವೇಳೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡದ ಬಿಜೆಪಿಯನ್ನು ಸಿದ್ದರಾಮಯ್ಯ ಟೀಕಿಸಿದ್ದು, ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಯಲ್ಲಿ ಹಾಗೂ ಸಂಮ್ವಿಧಾನದ ಬಗ್ಗೆ ಬಿಜೆಪಿಗರಿಗೆ ನಂಬಿಕೆ ಇಲ್ಲ. ಅವರು ರಚನಾತ್ಮಕ ವಿಪಕ್ಷವಾಗಿ ಕಾರ್ಯನಿರ್ವಹಿಸುವ ಬದಲು ಪ್ರತಿಭಟನೆಗಳಲ್ಲೇ ಕಾಲ ಕಳೆಯುತ್ತಾರೆ ಎಂದೂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ವಿಪಕ್ಷ ನಾಯಕನನ್ನೇ ಆಯ್ಕೆ ಮಾಡಿಲ್ಲ. ಆದ್ದರಿಂದ ವಿಪಕ್ಷ ನಾಯಕನೇ ಇಲ್ಲದೇ ಮೊದಲ ಬಾರಿಗೆ ಬಜೆಟ್ ಬಗ್ಗೆ ಚರ್ಚೆ ನಡೆದಿದೆ. ಬಿಜೆಪಿ ವಿಪಕ್ಷನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ, ರಾಜಕೀಯವಾಗಿ ದಿವಾಳಿಯಾಗಿದೆ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿ ಮೋದಿ ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡಿದ್ದರು ಆದರೆ ಕಾಂಗ್ರೆಸ್ ಆ ರೀತಿ ಎಂದಿಗೂ ಯೋಚಿಸುವುದಿಲ್ಲ.  ನಾವು ಬಿಜೆಪಿ ಮುಕ್ತ ಭಾರತ ಅಂತಲೋ ಬಿಜೆಪಿ ಮುಕ್ತ ಕರ್ನಾಟಕ ಎಂದೋ ಹೇಳುವುದಿಲ್ಲ. ಏಕೆಂದರೆ ಅವರು ಕೋಮುವಾದಿಗಳು ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಹಾಳುಮಾಡುವ ದುಷ್ಟ ಶಕ್ತಿಗಳು, ನಮ್ಮ ಉದ್ದೇಶ ಒಂದೇ ಅದು ಅಂತಹ ಶಕ್ತಿಗಳು ಅಧಿಕಾರಕ್ಕೆ ಬರಬಾರದೆಂಬುದಾಗಿದೆ ಎಂದು ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು.

andolanait

Recent Posts

ಅರಣ್ಯ ಕಾಯುವುದಕ್ಕೆ ರೆಡಿ ಆಯ್ತು ಬೆಲ್ಜಿಯಂ ಶ್ವಾನ

ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…

23 mins ago

ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಳಗಾವಿ: ಬೆಳಗಾವಿಯಲ್ಲಿ ನಾಳೆಯಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ…

26 mins ago

ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ದುರಂತ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶ ನೀಡಿದ ಸಿಎಂ ಪ್ರಮೋದ್‌ ಸಾವಂತ್‌

ಪಣಜಿ: ಗೋವಾದ ನೈಟ್‌ಕ್ಲಬ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 25 ಜನರು ಸಾವನ್ನಪ್ಪಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತನಿಖೆಗೆ ಆದೇಶ…

39 mins ago

ನನ್ನದು ಕೃಷ್ಣತತ್ವ ಕಾಂಗ್ರೆಸ್ ಪಕ್ಷದ್ದು ಕಂಸತತ್ವ: ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ…

44 mins ago

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ…

1 hour ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ: ಡಿಸಿಎಂ ಡಿಕೆಶಿ ಆಪ್ತ ಇನಾಯತ್‌ಗೆ ನೋಟಿಸ್‌ ಜಾರಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಪ್ತನಿಗೂ ನೋಟಿಸ್‌ ನೀಡಲಾಗಿದೆ. ಮಂಗಳೂರಿನ ಕಾಂಗ್ರೆಸ್‌ ಮುಖಂಡ ಇನಾಯತ್‌ ಅಲಿ ಅವರಿಗೆ…

2 hours ago