BREAKING NEWS

ಬಿಜೆಪಿ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಸಿಎಂ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ನೆನ್ನೆ ವಿಧಾನಸಭೆಯಲ್ಲಿ ನಡೆದ ಗದ್ದಲ, ಬಿಜೆಪಿ ಶಾಸಕರ ನಡವಳಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಶಾಸಕರು, ಉಪಸಭಾಧ್ಯಕ್ಷರಾಗಿ ಕಲಾಪ ನಡೆಸುತ್ತಿದ್ದ ರುದ್ರಪ್ಪ ಲಮಾಣಿ ಅವರತ್ತ ಪೇಪರ್ ಎಸೆದು, ಮಸೂದೆ ಪ್ರತಿಗಳನ್ನು ಹರಿದು ಹಾಕಿದ್ದನ್ನು ಸಿಎಂ ಸಿದ್ದರಾಮಯ್ಯ ಅನಾಗರಿಕ ವರ್ತನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಶಾಸಕರು, ಮಾಜಿ ಸಚಿವ ನಡವಳಿಕೆಯ ಕಾರಣದಿಂದಾಗಿ 10 ಶಾಸಕರನ್ನು ಸದನದ ಮುಂದಿನ ಅವಧಿವರೆಗೂ ಅಮಾನತುಗೊಳಿಸಲಾಗಿದೆ. ಸರ್ಕಾರದ ನಡೆಯನ್ನು ಖಂಡಿಸಿರುವ ಜೆಡಿಎಸ್ ಹಾಗೂ ಬಿಜೆಪಿ ಇಂದು ಸದನದ ಕಲಾಪವನ್ನು ಬಹಿಷ್ಕರಿಸಿದ್ದವು.

ಇದಷ್ಟೇ ಅಲ್ಲದೇ ಅವರು ಸಭಾಧ್ಯಕ್ಷರು, ಉಪಸಭಾಧ್ಯಕ್ಷರ ಹುದ್ದೆಗೆ ಗೌರವ ಹೊಂದಿಲ್ಲ ಎಂದು ಬಜೆಟ್ ಮೇಲಿನ ಚರ್ಚೆಗೆ ಪ್ರತಿಕ್ರಿಯೆ ನೀಡುವಾಗ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನೆನ್ನೆಯ ಬಿಜೆಪಿ ಶಾಸಕರ ನಡವಳಿಕೆಯನ್ನು ನಾನು ಏನೆಂದು ಕರೆಯಬೇಕು? ಅಸಭ್ಯ ಎನ್ನುವ ಶಬ್ದವೂ ಅವರ ನಡವಳಿಕೆಯನ್ನು ಸೂಚಿಸಲು ಸಭ್ಯವಾದ ಶಬ್ದವಾಗುತ್ತದೆ ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ.

ಘಟನೆಯ ಬಗ್ಗೆ ನೋವು ವ್ಯಕ್ತಪಡಿಸಿರುವ ಸಿದ್ದರಾಮಯ್ಯ,  “ನಾನು 1983 ರಿಂದ ವಿಧಾನಸಭೆಯಲ್ಲಿದ್ದೇನೆ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ ಕಾರ್ಯನಿರ್ವಹಿಸಿದ್ದೇನೆ ಆದರೆ ಎಂದಿಗೂ ಇಂತಹ ನಡವಳಿಕೆಯನ್ನು ಸದನದಲ್ಲಿ ನೋಡಿಲ್ಲ, ಕಾಂಗ್ರೆಸ್ ಶಾಸಕರು ಎಂದಿಗೂ ಈ ರೀತಿ ನಡೆದುಕೊಂಡಿಲ್ಲ ಎಂದು ಹೇಳಿದ್ದಾರೆ. ನೆನ್ನೆಯ ಘಟನೆಯಿಂದ ಲಮಾಣಿ ಅವರು ಕುಗ್ಗಿದ್ದಾರೆ, ಆದರೆ ಅವರೊಂದಿಗೆ ಕಾಂಗ್ರೆಸ್ ಎಂದಿಗೂ ಇರಲಿದೆ, ಆದ್ದರಿಂದ ಅವರು ಕುಗ್ಗಬಾರದು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

ಲಮಾಣಿ ಅವರು ಶತಮಾನಗಳಿಂದ ಶೋಷಣೆಗೆ ಒಳಗಾದ ದಲಿತ ಸಮುದಾಯದವರಾಗಿದ್ದಾರೆ. ಒಂದು ವೇಳೆ ಸದನದಲ್ಲಿ ಮಾರ್ಷಲ್ ಗಳು ಇಲ್ಲದೇ ಇದ್ದಿದ್ದರೆ ಬಿಜೆಪಿಯವರು ಉಪಸಭಾಧ್ಯಕ್ಷರ ಮೇಲೆ ಹಲ್ಲೆಯ ಯತ್ನವನ್ನೂ ಮಾಡುವ ಸಾಧ್ಯತೆ ಇತ್ತು, ನೆನ್ನೆಯ ಅವರ ನಡವಳಿಕೆ ಹಾಗೆಯೇ ಇತ್ತು ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದೇ ವೇಳೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡದ ಬಿಜೆಪಿಯನ್ನು ಸಿದ್ದರಾಮಯ್ಯ ಟೀಕಿಸಿದ್ದು, ಪ್ರಜಾಪ್ರಭುತ್ವದ ಸಂಸದೀಯ ವ್ಯವಸ್ಥೆಯಲ್ಲಿ ಹಾಗೂ ಸಂಮ್ವಿಧಾನದ ಬಗ್ಗೆ ಬಿಜೆಪಿಗರಿಗೆ ನಂಬಿಕೆ ಇಲ್ಲ. ಅವರು ರಚನಾತ್ಮಕ ವಿಪಕ್ಷವಾಗಿ ಕಾರ್ಯನಿರ್ವಹಿಸುವ ಬದಲು ಪ್ರತಿಭಟನೆಗಳಲ್ಲೇ ಕಾಲ ಕಳೆಯುತ್ತಾರೆ ಎಂದೂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ವಿಪಕ್ಷ ನಾಯಕನನ್ನೇ ಆಯ್ಕೆ ಮಾಡಿಲ್ಲ. ಆದ್ದರಿಂದ ವಿಪಕ್ಷ ನಾಯಕನೇ ಇಲ್ಲದೇ ಮೊದಲ ಬಾರಿಗೆ ಬಜೆಟ್ ಬಗ್ಗೆ ಚರ್ಚೆ ನಡೆದಿದೆ. ಬಿಜೆಪಿ ವಿಪಕ್ಷನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ, ರಾಜಕೀಯವಾಗಿ ದಿವಾಳಿಯಾಗಿದೆ ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಧಾನಿ ಮೋದಿ ಕಾಂಗ್ರೆಸ್ ಮುಕ್ತ ಭಾರತದ ಬಗ್ಗೆ ಮಾತನಾಡಿದ್ದರು ಆದರೆ ಕಾಂಗ್ರೆಸ್ ಆ ರೀತಿ ಎಂದಿಗೂ ಯೋಚಿಸುವುದಿಲ್ಲ.  ನಾವು ಬಿಜೆಪಿ ಮುಕ್ತ ಭಾರತ ಅಂತಲೋ ಬಿಜೆಪಿ ಮುಕ್ತ ಕರ್ನಾಟಕ ಎಂದೋ ಹೇಳುವುದಿಲ್ಲ. ಏಕೆಂದರೆ ಅವರು ಕೋಮುವಾದಿಗಳು ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ಹಾಳುಮಾಡುವ ದುಷ್ಟ ಶಕ್ತಿಗಳು, ನಮ್ಮ ಉದ್ದೇಶ ಒಂದೇ ಅದು ಅಂತಹ ಶಕ್ತಿಗಳು ಅಧಿಕಾರಕ್ಕೆ ಬರಬಾರದೆಂಬುದಾಗಿದೆ ಎಂದು ಸಿದ್ದರಾಮಯ್ಯ ಸದನಕ್ಕೆ ತಿಳಿಸಿದರು.

andolanait

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

2 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

2 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

7 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

7 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago