BREAKING NEWS

ಕನಕಪುರದಲ್ಲಿ ಬಿಜೆಪಿ ಅಭ್ಯರ್ಥಿ ಅಶೋಕ್ ಪ್ರಚಾರಕ್ಕೆ ರದ್ದು : ಕಾರಣ ಏನು ?

ರಾಮನಗರ : ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಕನಕಪುರ ಕ್ಷೇತ್ರದಲ್ಲಿ ಚುನಾವಣಾ ಕಣ ರಂಗೇರಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪರ್ಧಿಸುತ್ತಿದ್ದಾರೆ. ಹೈವೋಲ್ಟೇಜ್ ಕ್ಷೇತ್ರ ಎನಿಸಿರುವ ಕನಕಪುರ ಕ್ಷೇತ್ರದಲ್ಲಿಂದು ಆರ್​ ಅಶೋಕ್ ಪ್ರಚಾರ ನಡೆಸಬೇಕಿತ್ತು. ಆದರೆ ಪ್ರಚಾರ ದಿಢೀರ್ ರದ್ದಾಗಿದೆ.

ಕನಕಪುರದಲ್ಲಿ ಡಿಕೆ ಶಿವಕುಮಾರ್ ಪರ ಡಿಕೆ ಸುರೇಶ್ ಪ್ರಚಾರ ನಡೆಸಲಿದ್ದು ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳು ಒಂದೇ ಮಾರ್ಗದಲ್ಲಿ ಪ್ರಚಾರ ಮಾಡಿದರೆ ಘರ್ಷಣೆ ಎದುರಾಗುವ ಹಿನ್ನೆಲೆ ಪ್ರಚಾರ ರದ್ದು ಮಾಡಲಾಗಿದೆ.
ಬಿಜೆಪಿ ಅಭ್ಯರ್ಥಿ ಆರ್ ಅಶೋಕ್, ಕನಕಪುರ ಕ್ಷೇತ್ರದ ಅರಳಾಳು ಸಂದ್ರಗೇಟ್, ಚಿಕ್ಕಮುದವಾಡಿ, ಚಿಕ್ಕೇನಹಳ್ಳಿ ವಾಡೇದೊಡ್ಡಿ ಮುಂತಾದೆಡೆ ಪ್ರಚಾರ ಮಾಡಬೇಕಿತ್ತು.

ಆದರೆ ಇದೇ ಮಾರ್ಗದಲ್ಲಿ ಸಂಸದ ಡಿಕೆ ಸುರೇಶ್ ಅವರು ಡಿಕೆ ಶಿವಕುಮಾರ್ ಪರವಾಗಿ ಪ್ರಚಾರ ನಡೆಸುವ ಹಿನ್ನೆಲೆ ಆಶೋಕ್ ಪ್ರಚಾರಕ್ಕೆ ಪೊಲೀಸರು ನಿರಾಕರಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಘರ್ಷಣೆ ನಡೆಯುವ ಸಾಧ್ಯತೆ ಹಿನ್ನೆಲೆ ಪೊಲೀಸರಿಂದ ಅನುಮತಿ ನಿರಾಕರಿಸಲಾಗಿದೆ. ಸದ್ಯ ಈಗ ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಹುಸೇನ್ ಅವರ ಪರವಾಗಿ ಡಿಕೆ ಸುರೇಶ್ ರೋಡ್ ಶೋ ನಡೆಸುತ್ತಿದ್ದಾರೆ.

lokesh

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

10 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

12 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

14 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

14 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

20 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

20 hours ago