ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಟ್ಲರ್, ಮುಸೋಲಿನಿ ಎಂದು ಟೀಕಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.
ಶೇಷಾದ್ರಿಪುರ ರಸ್ತೆಯಲ್ಲಿರುವ ಚುನಾವಣಾ ಆಯೋಗಕ್ಕೆ ಶನಿವಾರ ಸಂಜೆ ಶಾಸಕ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ, ರಾಜ್ಯ ವಕ್ತಾರರಾದ ಹೆಚ್.ಎನ್. ಚಂದ್ರಶೇಖರ್, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದ ನಿಯೋಗ ದೂರು ನೀಡಿದೆ.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುರೇಶ್ ಕುಮಾರ್, ಕೊಳ್ಳೆಗಾಲದಲ್ಲಿ ಸಿದ್ದರಾಮಯ್ಯ ಪ್ರಧಾನಿ ಅವರನ್ನು ಹಿಟ್ಲರ್ ಎಂದು ಕರೆದಿದ್ದಾರೆ. ಇದೊಂದು ಅವಹೇಳನಕಾರಿ ಪದ, ಇದನ್ನು ಅವರು ಮಾತನಾಡಬಾರದು.
ಬಿಜೆಪಿ 400 ಸೀಟು ಗೆದ್ದರೆ ಸಂವಿಧಾನ ಬದಲಿಸುತ್ತದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲಿನ ಹತಾಶೆ ಕಾಡುತ್ತಿದೆ. ಹಾಗಾಗಿ ಸಂವಿಧಾನ ಅಪಾಯದಲ್ಲಿ ಇದೆ ಎಂದಿದ್ದಾರೆ ಎಂದು ಟೀಕಿಸಿದರು.
ನಿಜವಾಗಿಯೂ ಚಾಮರಾಜನಗರ ಜನರು, ರಾಜ್ಯದ ಜನರು ಸಿದ್ದರಾಮಯ್ಯ ಮಾತನ್ನು ತಿರಸ್ಕಾರ ಮಾಡ್ತಾರೆ. ಸದ್ಯ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಕೊಟ್ಟಿದ್ದೇವೆ.
ತಕ್ಷಣವೇ ಸ್ಟಾರ್ ಕ್ಯಾಂಪೇನ್ ರಿಂದ ಸಿದ್ದರಾಮಯ್ಯರ ಹೆಸರು ಕೈ ಬಿಡಬೇಕು ಎಂದಿದ್ದೇವೆ. ಅವರು ಕಾನೂನು ರೀತಿಯಲ್ಲಿ ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿದರು
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…