BREAKING NEWS

ಸಿದ್ದರಾಮಯ್ಯ ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು !

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಿಟ್ಲರ್, ಮುಸೋಲಿನಿ ಎಂದು ಟೀಕಿಸಿದ ಸಿಎಂ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.

ಶೇಷಾದ್ರಿಪುರ ರಸ್ತೆಯಲ್ಲಿರುವ ಚುನಾವಣಾ ಆಯೋಗಕ್ಕೆ ಶನಿವಾರ ಸಂಜೆ ಶಾಸಕ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ, ರಾಜ್ಯ ವಕ್ತಾರರಾದ ಹೆಚ್.ಎನ್. ಚಂದ್ರಶೇಖರ್, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದ ನಿಯೋಗ ದೂರು ನೀಡಿದೆ.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುರೇಶ್ ಕುಮಾರ್, ಕೊಳ್ಳೆಗಾಲದಲ್ಲಿ ಸಿದ್ದರಾಮಯ್ಯ ಪ್ರಧಾನಿ ಅವರನ್ನು ಹಿಟ್ಲರ್ ಎಂದು ಕರೆದಿದ್ದಾರೆ. ಇದೊಂದು ಅವಹೇಳನಕಾರಿ ಪದ, ಇದನ್ನು ಅವರು ಮಾತನಾಡಬಾರದು.

ಬಿಜೆಪಿ 400 ಸೀಟು ಗೆದ್ದರೆ ಸಂವಿಧಾನ ಬದಲಿಸುತ್ತದೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸೋಲಿನ ಹತಾಶೆ ಕಾಡುತ್ತಿದೆ. ಹಾಗಾಗಿ ಸಂವಿಧಾನ ಅಪಾಯದಲ್ಲಿ ಇದೆ ಎಂದಿದ್ದಾರೆ ಎಂದು ಟೀಕಿಸಿದರು.

ನಿಜವಾಗಿಯೂ ಚಾಮರಾಜನಗರ ಜನರು, ರಾಜ್ಯದ ಜನರು ಸಿದ್ದರಾಮಯ್ಯ ಮಾತನ್ನು ತಿರಸ್ಕಾರ ಮಾಡ್ತಾರೆ. ಸದ್ಯ ಚುನಾವಣಾ ಆಯೋಗಕ್ಕೆ ಈ ಬಗ್ಗೆ ದೂರು ಕೊಟ್ಟಿದ್ದೇವೆ.

ತಕ್ಷಣವೇ ಸ್ಟಾರ್ ಕ್ಯಾಂಪೇನ್ ರಿಂದ ಸಿದ್ದರಾಮಯ್ಯರ ಹೆಸರು ಕೈ ಬಿಡಬೇಕು ಎಂದಿದ್ದೇವೆ. ಅವರು ಕಾನೂನು ರೀತಿಯಲ್ಲಿ ಕ್ರಮ ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಹೇಳಿದರು

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

3 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

3 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago