BREAKING NEWS

ಚಂದ್ರಯಾನ ಲ್ಯಾಂಡಿಂಗ್ ಸ್ಥಳಕ್ಕೆ ಹೆಸರು ಘೋಷಣೆ ನಂತರ ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆ

ನವದೆಹಲಿ: ಇಸ್ರೋ ಕೇಂದ್ರದ ಚಂದ್ರಯಾನ-2 ಮತ್ತು ಚಂದ್ರಯಾನ-3 ಕಾರ್ಯಾಚರಣೆಯಲ್ಲಿ ಚಂದ್ರಯಾನಗಳ ಲ್ಯಾಂಡಿಂಗ್ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹೆಸರುಗಳನ್ನು ಘೋಷಿಸಿದ ನಂತರ ಬಿಜೆಪಿ ಹಾಗೂ ಬಿಜೆಪಿ ಪರ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.

ದೇಶದ ಅತಿ ಹಳೆಯ ಮತ್ತು ದೊಡ್ಡ ಪಕ್ಷವೆನಿಸಿಕೊಂಡಿರುವ ಕಾಂಗ್ರೆಸ್ ಜವಹರಲಾಲ್ ನೆಹರೂ ಕುಟುಂಬಕ್ಕೆ ಮೊದಲ ಮನ್ನಣೆ ನೀಡಿದರೆ ಬಿಜೆಪಿಯವರು ದೇಶಕ್ಕೆ ಮೊದಲ ಪ್ರಾಶಸ್ತ್ಯ ನೀಡುತ್ತಿದ್ದಾರೆ. ಅದಕ್ಕೆ ಪ್ರಧಾನಿ ಮೋದಿಯವರು ಇಂದು ಇಸ್ರೊದ ಚಂದ್ರಯಾನಕ್ಕೆ ಇಟ್ಟಿರುವ ಹೆಸರುಗಳು ಮತ್ತೊಮ್ಮೆ ಸಾಕ್ಷಿಯಾಗಿದೆ  ಎಂದು ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಪ್ರಧಾನಿ ಮೋದಿ ಇಂದು ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿ ಇಸ್ರೋ ಕಚೇರಿಯಿಂದ 3 ಪ್ರಮುಖ ಘೋಷಣೆಗಳನ್ನು ಮಾಡಿದರು. ಚಂದ್ರಯಾನ-3 ಇಳಿದ ಸ್ಥಳವನ್ನು ಶಿವಶಕ್ತಿ ಎಂದು ಕರೆಯಲಾಗುವುದು, ಚಂದ್ರಯಾನ-2 ಪ್ರಭಾವದ ತಾಣವನ್ನು ‘ತಿರಂಗಾ’ ಎಂದು ಕರೆಯಲಾಗುವುದು ಮತ್ತು ಮೂರನೇ ಚಂದ್ರಯಾನದ ಯಶಸ್ವಿ ಲ್ಯಾಂಡಿಂಗ್ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಇನ್ನು ಮುಂದೆ ಆಚರಿಸಲಾಗುವುದು ಎಂದು ಘೋಷಿಸಿದರು.

ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಟ್ವೀಟ್ ಮಾಡಿ, ಭಾರತ ಮೊದಲು ವರ್ಸಸ್ ಫ್ಯಾಮಿಲಿ ಫಸ್ಟ್! ಚಂದ್ರನ ಮೇಲೆ ಪರಿಣಾಮ / ಲ್ಯಾಂಡಿಂಗ್ ಪಾಯಿಂಟ್ ಹೆಸರುಗಳು – 1. ಚಂದ್ರಯಾನ1: ಜವಾಹರ್ ಪಾಯಿಂಟ್ 2. ಚಂದ್ರಯಾನ2: ತಿರಂಗ ಪಾಯಿಂಟ್ 3. ಚಂದ್ರಯಾನ3: ಶಿವಶಕ್ತಿ ಪಾಯಿಂಟ್ ನಂತರ ಲ್ಯಾಂಡರ್ ನ್ನು ವಿಕ್ರಮ್ ಲ್ಯಾಂಡರ್ ಎಂದು ಕರೆಯಲಾಯಿತು. ವಿಕ್ರಮ್ ಸಾರಾಭಾಯ್, ಯುಪಿಎ ಆಗಿದ್ದರೆ ಎಂದಿಗೂ ಕಳುಹಿಸುತ್ತಿರಲಿಲ್ಲ ಒಂದು ವೇಳೆ ಸಾಧನೆ ಮಾಡಿದ್ದರೂ ಕೂಡ ಅದಕ್ಕೆ ಇಂದಿರಾ ಪಾಯಿಂಟ್ ಮತ್ತು ರಾಜೀವ್ ಪಾಯಿಂಟ್ ಎಂದು ಹೆಸರಿಸುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago