ನವದೆಹಲಿ: ಇಸ್ರೋ ಕೇಂದ್ರದ ಚಂದ್ರಯಾನ-2 ಮತ್ತು ಚಂದ್ರಯಾನ-3 ಕಾರ್ಯಾಚರಣೆಯಲ್ಲಿ ಚಂದ್ರಯಾನಗಳ ಲ್ಯಾಂಡಿಂಗ್ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹೆಸರುಗಳನ್ನು ಘೋಷಿಸಿದ ನಂತರ ಬಿಜೆಪಿ ಹಾಗೂ ಬಿಜೆಪಿ ಪರ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಪಕ್ಷವನ್ನು ಟೀಕೆ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.
ದೇಶದ ಅತಿ ಹಳೆಯ ಮತ್ತು ದೊಡ್ಡ ಪಕ್ಷವೆನಿಸಿಕೊಂಡಿರುವ ಕಾಂಗ್ರೆಸ್ ಜವಹರಲಾಲ್ ನೆಹರೂ ಕುಟುಂಬಕ್ಕೆ ಮೊದಲ ಮನ್ನಣೆ ನೀಡಿದರೆ ಬಿಜೆಪಿಯವರು ದೇಶಕ್ಕೆ ಮೊದಲ ಪ್ರಾಶಸ್ತ್ಯ ನೀಡುತ್ತಿದ್ದಾರೆ. ಅದಕ್ಕೆ ಪ್ರಧಾನಿ ಮೋದಿಯವರು ಇಂದು ಇಸ್ರೊದ ಚಂದ್ರಯಾನಕ್ಕೆ ಇಟ್ಟಿರುವ ಹೆಸರುಗಳು ಮತ್ತೊಮ್ಮೆ ಸಾಕ್ಷಿಯಾಗಿದೆ ಎಂದು ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುತ್ತಿದ್ದಾರೆ.
ಪ್ರಧಾನಿ ಮೋದಿ ಇಂದು ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿ ಇಸ್ರೋ ಕಚೇರಿಯಿಂದ 3 ಪ್ರಮುಖ ಘೋಷಣೆಗಳನ್ನು ಮಾಡಿದರು. ಚಂದ್ರಯಾನ-3 ಇಳಿದ ಸ್ಥಳವನ್ನು ಶಿವಶಕ್ತಿ ಎಂದು ಕರೆಯಲಾಗುವುದು, ಚಂದ್ರಯಾನ-2 ಪ್ರಭಾವದ ತಾಣವನ್ನು ‘ತಿರಂಗಾ’ ಎಂದು ಕರೆಯಲಾಗುವುದು ಮತ್ತು ಮೂರನೇ ಚಂದ್ರಯಾನದ ಯಶಸ್ವಿ ಲ್ಯಾಂಡಿಂಗ್ ದಿನವಾದ ಆಗಸ್ಟ್ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಇನ್ನು ಮುಂದೆ ಆಚರಿಸಲಾಗುವುದು ಎಂದು ಘೋಷಿಸಿದರು.
ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಅವರು ಟ್ವೀಟ್ ಮಾಡಿ, ಭಾರತ ಮೊದಲು ವರ್ಸಸ್ ಫ್ಯಾಮಿಲಿ ಫಸ್ಟ್! ಚಂದ್ರನ ಮೇಲೆ ಪರಿಣಾಮ / ಲ್ಯಾಂಡಿಂಗ್ ಪಾಯಿಂಟ್ ಹೆಸರುಗಳು – 1. ಚಂದ್ರಯಾನ1: ಜವಾಹರ್ ಪಾಯಿಂಟ್ 2. ಚಂದ್ರಯಾನ2: ತಿರಂಗ ಪಾಯಿಂಟ್ 3. ಚಂದ್ರಯಾನ3: ಶಿವಶಕ್ತಿ ಪಾಯಿಂಟ್ ನಂತರ ಲ್ಯಾಂಡರ್ ನ್ನು ವಿಕ್ರಮ್ ಲ್ಯಾಂಡರ್ ಎಂದು ಕರೆಯಲಾಯಿತು. ವಿಕ್ರಮ್ ಸಾರಾಭಾಯ್, ಯುಪಿಎ ಆಗಿದ್ದರೆ ಎಂದಿಗೂ ಕಳುಹಿಸುತ್ತಿರಲಿಲ್ಲ ಒಂದು ವೇಳೆ ಸಾಧನೆ ಮಾಡಿದ್ದರೂ ಕೂಡ ಅದಕ್ಕೆ ಇಂದಿರಾ ಪಾಯಿಂಟ್ ಮತ್ತು ರಾಜೀವ್ ಪಾಯಿಂಟ್ ಎಂದು ಹೆಸರಿಸುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…