BREAKING NEWS

ಶಿವಮೊಗ್ಗದಲ್ಲಿ ಬಿಜೆಪಿಗೆ ಒಂದೂ ಮುಸ್ಲಿಂ ವೋಟ್ ಬೇಡ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ವೀರಶೈವ-ಲಿಂಗಾಯತ ಸಮಾಜದ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವೀರಶೈವ ಸಮುದಾಯದವರನ್ನ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಲಿ ಶಿವಮೊಗ್ಗ ಶಾಸಕ ಕೆ.ಎಸ್ ಈಶ್ವರಪ್ಪ ಬಿಜೆಪಿಗೆ ಶಿವಮೊಗ್ಗದಲ್ಲಿ ಮುಸ್ಲಿಂ ವೋಟ್ ಬೇಡ ಎಂದರು. ಹಾಗೂ ವೋಟ್ ಹಾಕೋದು ಬರೀ ರಸ್ತೆ, ಚರಂಡಿ, ದೀಪ, ಕುಡಿಯುವ ನೀರಿಗಲ್ಲ ಎಂದರು.

ಈಶ್ವರಪ್ಪ ಮಾತನಾಡಿ, ಅಭಿವೃದ್ಧಿ ವಿವರದ ಬಗ್ಗೆ ನಾನು ಮಾತನಾಡುವುದಿಲ್ಲ. ಅಭಿವೃದ್ಧಿ ನಾವು ಅನುಭವಿಸುತ್ತಿದ್ದೇವೆ. ಆದರೆ ನಾನು ನಿಮಗೆ ಎಚ್ಚರಸುತ್ತಿರುವುದು ಜಾತಿ ಹಾಗೂ ಉಪಜಾತಿಗಳನ್ನು ಇಟ್ಟುಕೊಂಡು ಬರುವ ವ್ಯಕ್ತಿಗಳ ಬಗ್ಗೆ ಮಾತ್ರ. ಯಾರೂ ಕೂಡ ನಮ್ಮನ್ನ ಒಡೆಯದಂತೆ ನೋಡಿಕೊಳ್ಳಬೇಕು. ಶಿವಮೊಗ್ಗದಲ್ಲಿ 50 ರಿಂದ 56,000 ಮುಸ್ಲಿಂ ವೋಟ್ ಗಳಿವೆ ಎಂದು ಹೇಳುತ್ತಾರೆ. ನಮಗೆ ಅವರ ಒಂದೂ ವೋಟ್ ಬೇಡ.! ಶಿವಮೊಗ್ಗದಲ್ಲಿ ಹರ್ಷ ಕೊಲೆ ಸಮಯದಲ್ಲಿ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತ್ತು. ನಾನು ಎಸ್ ಪಿ ಜೊತೆ ಮಾತನಾಡುವಾಗ ಒಮ್ಮೆ ಲವ್ ಜಿಹಾದ್ ಬಗ್ಗೆ ಪ್ರಸ್ತಾಪಿಸಿದ್ದೆ. ಲವ್ ಜಿಹಾದ್ ಪ್ರಕರಣಗಳಲ್ಲಿ ಮಹಿಳೆಯರು ದೂರು ನೀಡಲು ಹಿಂಜರಿಯುತ್ತಾರೆ ಎಂದು ಹೇಳಿದರು.ಅಂತಹ ಎಷ್ಟೋ ಪ್ರಕರಣಗಳು ದಾಖಲಾಗದೆ ಉಳಿಯುತ್ತದೆ. ನಮ್ಮ ಹೆಣ್ಣು ಮಕ್ಕಳಿಗೆ ಆ ಮುಸ್ಲಿಮರು ತೊಂದರೆ ಕೊಟ್ಟರೆ ಕಾಂಗ್ರೆಸ್ ನಾಯಕರು ಬರೋದಿಲ್ಲ. ಅವರು ಗಟ್ಟಿಯಾಗಿ ನಿಲ್ಲೋದಿಲ್ಲ. ಇಲ್ಲಿ ನಾವು ಯೋಚನೆ ಮಾಡಬೇಕಾಗಿರೋದು ಬರೀ ರಸ್ತೆ, ಚರಂಡಿ ದೀಪ ಕುಡಿಯುವ ನೀರಿನ ಬಗ್ಗೆ ಅಲ್ಲ. ನಮ್ಮ ವೈಯಕ್ತಿಕ ಬದುಕಿನ ಬಗ್ಗೆ. ನಮ್ಮ ಧರ್ಮದ ಬಗ್ಗೆ. ಈ ದೇಶದ ಉಳಿವಿನ ಬಗ್ಗೆ. ಇದನ್ನೇ ಬಸವೇಶ್ವರರು ಹೇಳಿದ್ದು ಎಂದು ಈಶ್ವರಪ್ಪ ಹೇಳಿದರು.

ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ : ಯಾವುದೇ ಸಮಾಜದ ವ್ಯಕ್ತಿ ಹೊರಗಡೆ ಸಿಕ್ಕಾಗ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನೆ ಮಾಡಿ. ಬಿಜೆಪಿ ಅವರಿಗೆ ಏನು ಮಾಡಿಲ್ಲ ಎಂದರೆ ಆ ಸಮುದಾಯದ ವೋಟ್ ಕೇಳಲೇಬೇಡಿ. ಎಲ್ಲಾ ಸಮುದಾಯದವರು ಬಿಜೆಪಿಗೆ ವೋಟು ನೀಡುತ್ತೇವೆ ಅಂತ ಹೇಳುತ್ತಿದ್ದಾರೆ. ಕೆಲವರು ಈ ಸಂದರ್ಭದಲ್ಲಿ ಜಾತಿ ಉಪಜಾತಿಯನ್ನು ತರುತ್ತಿದ್ದಾರೆ‌. ಶಿವಮೊಗ್ಗದಲ್ಲಿ ಈ ಜಾತಿ ವ್ಯವಸ್ಥೆಗೆ ಮಾರುಹೋಗುತ್ತಾರೆ ಎಂಬ ನಂಬಿಕೆ ನನಗಿಲ್ಲ. ನೂರಕ್ಕೆ ನೂರು ನಮ್ಮ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲ್ಲುತ್ತಾರೆ. ಹಿಂದೂ ಸಮಾಜಕ್ಕೆ ಮಾದರಿ ನಮ್ಮ ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪಕ್ಕಿಂತ ಹಿಂದೂ ಯಾರೂ ಇಲ್ಲ. ಇಂತಹ ಹಿಂದೂ ಸಮಾಜ ಕಟ್ಟುವ ದಿಕ್ಕಿನಲ್ಲಿ ಶಿವಮೊಗ್ಗ ನಾಯಕ ಚನ್ನಬಸಪ್ಪ ಶ್ರಮಿಸಲಿದ್ದಾರೆ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ‌.

ಭದ್ರತೆ ಇರುವುದಿಲ್ಲ : ಬಿಜೆಪಿ ಬಿಟ್ಟು ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕೂಡ ನಮಗೆ ಭದ್ರತೆ ಇರುವುದಿಲ್ಲ ಕಾಂಗ್ರೆಸ್ ಹಿಂದು ಮುಸ್ಲಿಂ ಎಂದು ಪ್ರತ್ಯೇಕ ಮಾಡಿ ಮುಸ್ಲಿಂ ವೋಟ್ ಗಳನ್ನ ಪಡೆಯುತ್ತಿದೆ. ವರ್ಣ ಪ್ರೇರೇಪಿಸಿ ಹಿಂದೂ ಸಮಾಜವನ್ನು ನಿಕೃಷ್ಟ ಮಾಡುವ ಪ್ರಯತ್ನ ಮಾಡಿಕೊಂಡು ಬಂದಿದೆ‌. ಯಾರು ರಾಷ್ಟ್ರೀಯವಾದಿ ಮುಸಲ್ಮಾನರಿದ್ದಾರೋ ಅವರು ಬಿಜೆಪಿಗೆ ವೋಟ್ ನೀಡುತ್ತಾರೆ. ರಾಷ್ಟ್ರ ದ್ರೋಹಿ ಮುಸ್ಲಿಂ ಸಹವಾಸಕ್ಕೆ ನಾವು ಹೋಗುವುದು ಬೇಡ. ಯಡಿಯೂರಪ್ಪ ಜಾತಿವಾದಿ ಅಲ್ಲ, ಅವರು ರಾಷ್ಟ್ರೀಯವಾದಿ. ಅವರು ರಾಷ್ಟ್ರವಾದದ ಮೇಲೆ ಸರ್ಕಾರ ನಡೆಸಿಕೊಂಡು ಬಂದಿದ್ದಾರೆ.

ಬಿಎಸ್‌ವೈ ಊರೂರು ಸುತ್ತಿದ್ದಾರೆ : ಈ ತನಕ ನಮಗೆ ಪೂರ್ಣ ಬಹುಮತ ಬಂದಿಲ್ಲ. ಹಾಗಾಗಿ ಯಡಿಯೂರಪ್ಪನವರು ಈಗಲೂ ಬಿಸಿಲು ಎನ್ನದೆ ಊರೂರು ಸುತ್ತುತ್ತಿದ್ದಾರೆ. ಎಲ್ಲಾ ಒಕ್ಕಲಿಗರು ಬನ್ನಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ. ಸಿದ್ದರಾಮಯ್ಯ ಕುರುಬರನ್ನ ಕರೆಯುತ್ತಾರೆ. ಯಡಿಯೂರಪ್ಪ ಪಕ್ಷ ಬಿಜೆಪಿ ಜಾತಿವಾದಿ ಪಕ್ಷ ಅಲ್ಲ ರಾಷ್ಟ್ರೀಯವಾದಿ ಪಕ್ಷ. ನಾವೆಲ್ಲಾ ಸಂಕುಚಿತ ವ್ಯಕ್ತಿಗಳ ಬಗ್ಗೆ ಚರ್ಚೆ ಮಾಡುವುದು ಬೇಡ. ಕಾಂಗ್ರೆಸ್ ನಿರ್ನಾಮ ಆಗಿದೆ ,ಸಿಎಂ ಆಗಬೇಕು ಎಂದು ಸ್ಪರ್ಧೆ ಏರ್ಪಟ್ಟಿದೆ. ಜನತಾದಳ ಯಾರಿಗೂ ಬಹುಮತ ಬರಬಾರದು ತಾವು ಸಿಎಂ ಆಗಬೇಕು ಅಂತ ಹವಣಿಸುತ್ತಿದೆ. ಇಷ್ಟು ವರ್ಷ ಪೂರ್ಣ ಬಹುಮತ ಇಲ್ಲದ ಸಮಯದಲ್ಲಿ ಯಡಿಯೂರಪ್ಪನವರು ನಾಲ್ಕು ಬಾರಿ ಸಿಎಂ ಆಗಿದ್ದರು ಎಂದು ಈಶ್ವರಪ್ಪ ಹೇಳಿದರು.

lokesh

Recent Posts

ಡಿ.ಕೆ.ಶಿವಕುಮಾರ್‌ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್‌: ಬುಧವಾರ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…

55 mins ago

ಓದುಗರ ಪತ್ರ: ಕ್ರಿಕೆಟ್ ಕ್ರೀಡಾಂಗಣಕ್ಕೆ ಡಾ.ಅಂಬೇಡ್ಕರ್ ಹೆಸರಿಡಿ

ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…

2 hours ago

ಓದುಗರ ಪತ್ರ: ನಾಳಿನ ನೆರಳಿಗೆ ಇಂದೇ ಗಿಡ ನೆಡೋಣ

ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…

2 hours ago

ಓದುಗರ ಪತ್ರ: ಸಿದ್ದರಾಮಯ್ಯನವರ ಆಡಳಿತ ಮಾದರಿ

ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…

2 hours ago

ಸಿದ್ದು ರಾಜೀನಾಮೆ; ಒಂದು ಯುಗದ ಅಂತ್ಯ!

ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…

2 hours ago

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

4 hours ago