BREAKING NEWS

ಶಿವಮೊಗ್ಗದಲ್ಲಿ ಬಿಜೆಪಿಗೆ ಒಂದೂ ಮುಸ್ಲಿಂ ವೋಟ್ ಬೇಡ : ಕೆ.ಎಸ್ ಈಶ್ವರಪ್ಪ

ಶಿವಮೊಗ್ಗ : ಶಿವಮೊಗ್ಗದ ವಿನೋಬಾ ನಗರದಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ವೀರಶೈವ-ಲಿಂಗಾಯತ ಸಮಾಜದ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ವೀರಶೈವ ಸಮುದಾಯದವರನ್ನ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಲಿ ಶಿವಮೊಗ್ಗ ಶಾಸಕ ಕೆ.ಎಸ್ ಈಶ್ವರಪ್ಪ ಬಿಜೆಪಿಗೆ ಶಿವಮೊಗ್ಗದಲ್ಲಿ ಮುಸ್ಲಿಂ ವೋಟ್ ಬೇಡ ಎಂದರು. ಹಾಗೂ ವೋಟ್ ಹಾಕೋದು ಬರೀ ರಸ್ತೆ, ಚರಂಡಿ, ದೀಪ, ಕುಡಿಯುವ ನೀರಿಗಲ್ಲ ಎಂದರು.

ಈಶ್ವರಪ್ಪ ಮಾತನಾಡಿ, ಅಭಿವೃದ್ಧಿ ವಿವರದ ಬಗ್ಗೆ ನಾನು ಮಾತನಾಡುವುದಿಲ್ಲ. ಅಭಿವೃದ್ಧಿ ನಾವು ಅನುಭವಿಸುತ್ತಿದ್ದೇವೆ. ಆದರೆ ನಾನು ನಿಮಗೆ ಎಚ್ಚರಸುತ್ತಿರುವುದು ಜಾತಿ ಹಾಗೂ ಉಪಜಾತಿಗಳನ್ನು ಇಟ್ಟುಕೊಂಡು ಬರುವ ವ್ಯಕ್ತಿಗಳ ಬಗ್ಗೆ ಮಾತ್ರ. ಯಾರೂ ಕೂಡ ನಮ್ಮನ್ನ ಒಡೆಯದಂತೆ ನೋಡಿಕೊಳ್ಳಬೇಕು. ಶಿವಮೊಗ್ಗದಲ್ಲಿ 50 ರಿಂದ 56,000 ಮುಸ್ಲಿಂ ವೋಟ್ ಗಳಿವೆ ಎಂದು ಹೇಳುತ್ತಾರೆ. ನಮಗೆ ಅವರ ಒಂದೂ ವೋಟ್ ಬೇಡ.! ಶಿವಮೊಗ್ಗದಲ್ಲಿ ಹರ್ಷ ಕೊಲೆ ಸಮಯದಲ್ಲಿ ಕಾಂಗ್ರೆಸ್ ಬಾಯಿ ಮುಚ್ಚಿಕೊಂಡಿತ್ತು. ನಾನು ಎಸ್ ಪಿ ಜೊತೆ ಮಾತನಾಡುವಾಗ ಒಮ್ಮೆ ಲವ್ ಜಿಹಾದ್ ಬಗ್ಗೆ ಪ್ರಸ್ತಾಪಿಸಿದ್ದೆ. ಲವ್ ಜಿಹಾದ್ ಪ್ರಕರಣಗಳಲ್ಲಿ ಮಹಿಳೆಯರು ದೂರು ನೀಡಲು ಹಿಂಜರಿಯುತ್ತಾರೆ ಎಂದು ಹೇಳಿದರು.ಅಂತಹ ಎಷ್ಟೋ ಪ್ರಕರಣಗಳು ದಾಖಲಾಗದೆ ಉಳಿಯುತ್ತದೆ. ನಮ್ಮ ಹೆಣ್ಣು ಮಕ್ಕಳಿಗೆ ಆ ಮುಸ್ಲಿಮರು ತೊಂದರೆ ಕೊಟ್ಟರೆ ಕಾಂಗ್ರೆಸ್ ನಾಯಕರು ಬರೋದಿಲ್ಲ. ಅವರು ಗಟ್ಟಿಯಾಗಿ ನಿಲ್ಲೋದಿಲ್ಲ. ಇಲ್ಲಿ ನಾವು ಯೋಚನೆ ಮಾಡಬೇಕಾಗಿರೋದು ಬರೀ ರಸ್ತೆ, ಚರಂಡಿ ದೀಪ ಕುಡಿಯುವ ನೀರಿನ ಬಗ್ಗೆ ಅಲ್ಲ. ನಮ್ಮ ವೈಯಕ್ತಿಕ ಬದುಕಿನ ಬಗ್ಗೆ. ನಮ್ಮ ಧರ್ಮದ ಬಗ್ಗೆ. ಈ ದೇಶದ ಉಳಿವಿನ ಬಗ್ಗೆ. ಇದನ್ನೇ ಬಸವೇಶ್ವರರು ಹೇಳಿದ್ದು ಎಂದು ಈಶ್ವರಪ್ಪ ಹೇಳಿದರು.

ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ : ಯಾವುದೇ ಸಮಾಜದ ವ್ಯಕ್ತಿ ಹೊರಗಡೆ ಸಿಕ್ಕಾಗ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಪ್ರಶ್ನೆ ಮಾಡಿ. ಬಿಜೆಪಿ ಅವರಿಗೆ ಏನು ಮಾಡಿಲ್ಲ ಎಂದರೆ ಆ ಸಮುದಾಯದ ವೋಟ್ ಕೇಳಲೇಬೇಡಿ. ಎಲ್ಲಾ ಸಮುದಾಯದವರು ಬಿಜೆಪಿಗೆ ವೋಟು ನೀಡುತ್ತೇವೆ ಅಂತ ಹೇಳುತ್ತಿದ್ದಾರೆ. ಕೆಲವರು ಈ ಸಂದರ್ಭದಲ್ಲಿ ಜಾತಿ ಉಪಜಾತಿಯನ್ನು ತರುತ್ತಿದ್ದಾರೆ‌. ಶಿವಮೊಗ್ಗದಲ್ಲಿ ಈ ಜಾತಿ ವ್ಯವಸ್ಥೆಗೆ ಮಾರುಹೋಗುತ್ತಾರೆ ಎಂಬ ನಂಬಿಕೆ ನನಗಿಲ್ಲ. ನೂರಕ್ಕೆ ನೂರು ನಮ್ಮ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ ಗೆಲ್ಲುತ್ತಾರೆ. ಹಿಂದೂ ಸಮಾಜಕ್ಕೆ ಮಾದರಿ ನಮ್ಮ ಬಿಎಸ್ ಯಡಿಯೂರಪ್ಪ. ಯಡಿಯೂರಪ್ಪಕ್ಕಿಂತ ಹಿಂದೂ ಯಾರೂ ಇಲ್ಲ. ಇಂತಹ ಹಿಂದೂ ಸಮಾಜ ಕಟ್ಟುವ ದಿಕ್ಕಿನಲ್ಲಿ ಶಿವಮೊಗ್ಗ ನಾಯಕ ಚನ್ನಬಸಪ್ಪ ಶ್ರಮಿಸಲಿದ್ದಾರೆ ಎಂದು ನಾನು ಹೆಮ್ಮೆಯಿಂದ ಹೇಳುತ್ತೇನೆ‌.

ಭದ್ರತೆ ಇರುವುದಿಲ್ಲ : ಬಿಜೆಪಿ ಬಿಟ್ಟು ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ಕೂಡ ನಮಗೆ ಭದ್ರತೆ ಇರುವುದಿಲ್ಲ ಕಾಂಗ್ರೆಸ್ ಹಿಂದು ಮುಸ್ಲಿಂ ಎಂದು ಪ್ರತ್ಯೇಕ ಮಾಡಿ ಮುಸ್ಲಿಂ ವೋಟ್ ಗಳನ್ನ ಪಡೆಯುತ್ತಿದೆ. ವರ್ಣ ಪ್ರೇರೇಪಿಸಿ ಹಿಂದೂ ಸಮಾಜವನ್ನು ನಿಕೃಷ್ಟ ಮಾಡುವ ಪ್ರಯತ್ನ ಮಾಡಿಕೊಂಡು ಬಂದಿದೆ‌. ಯಾರು ರಾಷ್ಟ್ರೀಯವಾದಿ ಮುಸಲ್ಮಾನರಿದ್ದಾರೋ ಅವರು ಬಿಜೆಪಿಗೆ ವೋಟ್ ನೀಡುತ್ತಾರೆ. ರಾಷ್ಟ್ರ ದ್ರೋಹಿ ಮುಸ್ಲಿಂ ಸಹವಾಸಕ್ಕೆ ನಾವು ಹೋಗುವುದು ಬೇಡ. ಯಡಿಯೂರಪ್ಪ ಜಾತಿವಾದಿ ಅಲ್ಲ, ಅವರು ರಾಷ್ಟ್ರೀಯವಾದಿ. ಅವರು ರಾಷ್ಟ್ರವಾದದ ಮೇಲೆ ಸರ್ಕಾರ ನಡೆಸಿಕೊಂಡು ಬಂದಿದ್ದಾರೆ.

ಬಿಎಸ್‌ವೈ ಊರೂರು ಸುತ್ತಿದ್ದಾರೆ : ಈ ತನಕ ನಮಗೆ ಪೂರ್ಣ ಬಹುಮತ ಬಂದಿಲ್ಲ. ಹಾಗಾಗಿ ಯಡಿಯೂರಪ್ಪನವರು ಈಗಲೂ ಬಿಸಿಲು ಎನ್ನದೆ ಊರೂರು ಸುತ್ತುತ್ತಿದ್ದಾರೆ. ಎಲ್ಲಾ ಒಕ್ಕಲಿಗರು ಬನ್ನಿ ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ. ಸಿದ್ದರಾಮಯ್ಯ ಕುರುಬರನ್ನ ಕರೆಯುತ್ತಾರೆ. ಯಡಿಯೂರಪ್ಪ ಪಕ್ಷ ಬಿಜೆಪಿ ಜಾತಿವಾದಿ ಪಕ್ಷ ಅಲ್ಲ ರಾಷ್ಟ್ರೀಯವಾದಿ ಪಕ್ಷ. ನಾವೆಲ್ಲಾ ಸಂಕುಚಿತ ವ್ಯಕ್ತಿಗಳ ಬಗ್ಗೆ ಚರ್ಚೆ ಮಾಡುವುದು ಬೇಡ. ಕಾಂಗ್ರೆಸ್ ನಿರ್ನಾಮ ಆಗಿದೆ ,ಸಿಎಂ ಆಗಬೇಕು ಎಂದು ಸ್ಪರ್ಧೆ ಏರ್ಪಟ್ಟಿದೆ. ಜನತಾದಳ ಯಾರಿಗೂ ಬಹುಮತ ಬರಬಾರದು ತಾವು ಸಿಎಂ ಆಗಬೇಕು ಅಂತ ಹವಣಿಸುತ್ತಿದೆ. ಇಷ್ಟು ವರ್ಷ ಪೂರ್ಣ ಬಹುಮತ ಇಲ್ಲದ ಸಮಯದಲ್ಲಿ ಯಡಿಯೂರಪ್ಪನವರು ನಾಲ್ಕು ಬಾರಿ ಸಿಎಂ ಆಗಿದ್ದರು ಎಂದು ಈಶ್ವರಪ್ಪ ಹೇಳಿದರು.

lokesh

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

1 hour ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago