BREAKING NEWS

ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ ಹೆಸರಿನಲ್ಲಿ ಬಿಜೆಪಿ ಹೋರಾಟ : ಅಶ್ವತ್ಥ್ ನಾರಾಯಣ

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ನುಡಿದಂತೆ ನಡೆಯದ ಕಾಂಗ್ರೆಸ್ ವಿರುದ್ಧ ಜುಲೈ 3 ರಂದು ಬಿಜೆಪಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೆ, ಗ್ಯಾರಂಟಿ ಯೋಜನೆಗಳಿಗೆ ಹಾಕಿದ ಷರತ್ತುಗಳನ್ನು ವಾಪಸ್ ಪಡೆಯುವಂತೆ ಸದನದ ಒಳಗೆ ಹಾಗೂ ಆಚೆಗೆ ಪ್ರತಿಭಟನೆ ಮಾಡಲು ಬಿಜೆಪಿ ತೀರ್ಮಾನಿಸಿದೆ. ಇನ್ನು ಈ ಬಗ್ಗೆ ಇಂದು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಡಾ. ಸಿಎನ್ ಅಶ್ವತ್ಥ್ ನಾರಾಯಣ, ನಾಳೆಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ಮೋಸ ನಿಲ್ಲಿಸಿ-ಗ್ಯಾರಂಟಿ ಜಾರಿಗೊಳಿಸಿ ಎಂಬ ಶೀರ್ಷಿಕೆ ಅಡಿ ಹೋರಾಟ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಜನರಿಗೆ ಗ್ಯಾರಂಟಿಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಕೂಡಲೇ ಗ್ಯಾರಂಟಿ ಜಾರಿಗೊಳಿಸುತ್ತೇವೆ. ಎಂದಿದ್ದರು. ಈಗ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತು ತಪ್ಪಿದೆ. ಸದನದ ಹೊರಗಡೆ ಮತ್ತು ಒಳಗಡೆ ಹೋರಾಟ ಮಾಡಲಿದ್ದೇವೆ. ಸದನದ ಹೊರಗಡೆ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರು ಜು.4ರಂದು ಫ್ರೀಡಂಪಾರ್ಕ್​ನಲ್ಲಿ ಹೋರಾಟ ಮಾಡುತ್ತಾರೆ ಎಂದು ಹೇಳಿದರು.

ಇಂದು ವಿರೋಧ ಪಕ್ಷದ ನಾಯಕರ ಘೋಷಣೆ ಆಗಲಿದೆ. ವಿಪಕ್ಷ ನಾಯಕರ ನೇತೃತ್ವದಲ್ಲಿ ಸದನದಲ್ಲಿ ಹೋರಾಟ ಮಾಡುತ್ತೇವೆ. ನಾನು ಆಕಾಂಕ್ಷಿ ಅಂತಾ ಅರ್ಜಿ ಹಾಕುವುದು ಬಿಜೆಪಿಯಲ್ಲಿ ಇಲ್ಲ. ಕಾಂಗ್ರೆಸ್​ನವರು ಇನ್ನೂ ಹನಿಮೂನ್​ನಲ್ಲೇ ಇದ್ದಾರೆ. ಎಲ್ಲರ ಹತ್ತಿರ ಹಾರ ಹಾಕಿಸಿಕೊಂಡು ಸಂಭ್ರಮ ಮಾಡುತ್ತಿದ್ದಾರೆ. ಇನ್ಮುಂದೆ ನೋಡಿ ಹೇಗಿರುತ್ತೆ ನಮ್ಮ ಹೋರಾಟ ಎಂದರು.

ಷರತ್ತು ಇಲ್ಲದೇ ಗ್ಯಾರಂಟಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿತ್ತು. ಈಗ ನೋಡಿದ್ರೆ ಗ್ಯಾರಂಟಿಗಳಿಗೆ ಸರ್ಕಾರ ಕಂಡಿಷನ್ ಹಾಕುತ್ತಿದೆ. 10 ಕೆಜಿ ಅಕ್ಕಿಯನ್ನು ಕಾಂಗ್ರೆಸ್ ಸರ್ಕಾರ ಕೊಡಬೇಕು. ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಬಿಟ್ಟು 10 ಕೆಜಿ ಅಕ್ಕಿ ಕೊಡಬೇಕು. 200 ಯುನಿಟ್ ವಿದ್ಯುತ್ ಫ್ರೀ ಕೊಡುತ್ತೇವೆ ಎಂದು ಹೇಳಿದ್ದರು. ಆದ್ರೆ 200 ಯುನೈಟೆಡ್ ವಿದ್ಯುತ್ ಫ್ರೀ ಕೊಡುತ್ತಿಲ್ಲ. ಜನರು ವಿದ್ಯುತ್ ವಲೆಯನ್ನು ಖರೀದಿ ಮಾಡಿದ್ದಾರೆ. ಗೃಹ ಜ್ಯೋತಿ ಯೋಜನೆಯಿಂದ ಜಗಳಗಳು ಶುರುವಾಗಿದೆ ಎಂದು ಕಿಡಿಕಾರಿದರು.

ಯುವನಿಧಿ ಯೋಜನೆ ಬಗ್ಗೆ ಬಹುತೇಕ ಗೊಂದಲ ಇದೆ. ಎಲ್ಲಾ ನಿರುದ್ಯೋಗಿಗಳಿಗೆ 3000 ರೂ. ಹಣ ನೀಡಬೇಕು. ಶಕ್ತಿ ಯೊಜನೆಯಿಂದ ಬಸ್ ಗಳ ಕೊರತೆ ಉಂಟಾಗಿದೆ. ನಡು ರಸ್ತೆಯಲ್ಲಿಯೇ ಬಸ್ ಗಳು ಕೆಟ್ಟು ನಿಲ್ಲುತ್ತಿವೆ. ಅಲ್ಲದೇ ಶಕ್ತಿ ಯೊಜನೆಯಿಂದ ಆಟೋ ಚಾಲಕರ ಪರಿಸ್ಥಿತಿ ಹದಗೆಟ್ಟಿದೆ ಎಂದು ವಾಗ್ದಾಳಿ ನಡೆಸಿದರು.

lokesh

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

58 mins ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

13 hours ago