BREAKING NEWS

ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರೇಟ್ ಕಾರ್ಡ್: ಕಾಂಗ್ರೆಸ್ ನಿಂದ ಗಂಭೀರ ಆರೋಪ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 4 ದಿನ. ಬಹಿರಂಗ ಪ್ರಚಾರಕ್ಕೆ ಇನ್ನು ಮೂರು ದಿನ ಉಳಿದಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ.

ಕಾಂಗ್ರೆಸ್ ಇಂದು ಪೋಸ್ಟ್‌ಗಳು ಮತ್ತು ಸ್ಥಳೀಯ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತುಗಳನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡುವ ಮೂಲಕ ಬಿಜೆಪಿ ಸರ್ಕಾರ ವಿರುದ್ಧ ಸಾಲುಸಾಲು ಭ್ರಷ್ಟಾಚಾರ ಆರೋಪ ಮಾಡಿದೆ.

ಇದಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಪವನ್ ಖೇರಾ, ಕರ್ನಾಟಕದ ಮುಖ್ಯಮಂತ್ರಿ ಸ್ಥಾನವನ್ನು 2,500 ಕೋಟಿ ರೂಪಾಯಿಗಳಿಗೆ ಮತ್ತು ಸಚಿವ ಸ್ಥಾನಗಳು 500 ಕೋಟಿ ರೂಪಾಯಿಗಳಿಗೆ ಮಾರಟವಾಗಲು ಸಿದ್ಧವಾಗಿದೆ ಎಂದು ಆರೋಪಿಸಿದರು.

ಬಿಜೆಪಿಯನ್ನು ‘40% ಸರ್ಕಾರ’ ಎಂದು ಕರೆಯಲು ಕಾರಣವಿದೆ. ಕರ್ನಾಟಕದಲ್ಲಿ ಸಮಾಜದ ಪ್ರತಿಯೊಂದು ವರ್ಗವೂ ಈ 40% ಕಮಿಷನ್ ಸರ್ಕಾರದ ಕಪಿಮುಷ್ಠಿಯಲ್ಲಿದೆ. ಭಾರತದ ಅತ್ಯಂತ ಧಾರ್ಮಿಕ ಪಕ್ಷ ಎಂದು ಹೇಳಿಕೊಳ್ಳುವ ಪಕ್ಷವು ಮಠಗಳಿಗೆ ಅನುದಾನ ಬಿಡುಗಡೆ ಮಾಡಲು 30% ಕಮಿಷನ್ ವಿಧಿಸುತ್ತದೆ, ಬಿಜೆಪಿ ‘ಭ್ರಷ್ಟಾಚಾರ ರೇಟ್ ಕಾರ್ಡ್’ ಪಕ್ಷ ಎಂದು ಟೀಕಿಸಿದರು.

ಮಣಿಪುರ ರಾಜ್ಯ ಅಕ್ಷರಶಃ ಹೊತ್ತಿ ಉರಿಯುತ್ತಿರುವ ಈ ಹೊತ್ತಿನಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದಲ್ಲಿ ಪ್ರಚಾರ ಮಾಡುವುದರಲ್ಲಿ ನಿರತರಾಗಿದ್ದಾರೆ. ಇದು ಬಿಜೆಪಿ ಸರ್ಕಾರದ ತಪ್ಪು ಆದ್ಯತೆಯನ್ನು ತೋರಿಸುತ್ತದೆ ಎಂದರು.

ಕರ್ನಾಟಕದಲ್ಲಿ ನಿರ್ಗಮಿಸುತ್ತಿರುವ ಬಿಜೆಪಿ ಸರ್ಕಾರವನ್ನು ‘ಭ್ರಷ್ಟ’ ಎಂದು ಬಣ್ಣಿಸಿರುವ ಕಾಂಗ್ರೆಸ್, ದಕ್ಷಿಣ ರಾಜ್ಯದಲ್ಲಿ ಅದು ‘ಆಡಳಿತವನ್ನು ಮಾರಾಟ ಮಾಡಿದೆ’ ಎಂದು ಆರೋಪಿಸಿದೆ.
andolanait

Recent Posts

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 min ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago