BREAKING NEWS

ಬಿಜೆಪಿ ಸರ್ಕಾರ ಭ್ರಷ್ಟಾಚಾರದ ರೇಟ್ ಕಾರ್ಡ್: ಕಾಂಗ್ರೆಸ್ ನಿಂದ ಗಂಭೀರ ಆರೋಪ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 4 ದಿನ. ಬಹಿರಂಗ ಪ್ರಚಾರಕ್ಕೆ ಇನ್ನು ಮೂರು ದಿನ ಉಳಿದಿದೆ. ಈ ಹೊತ್ತಿನಲ್ಲಿ ಕಾಂಗ್ರೆಸ್ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿದೆ.

ಕಾಂಗ್ರೆಸ್ ಇಂದು ಪೋಸ್ಟ್‌ಗಳು ಮತ್ತು ಸ್ಥಳೀಯ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತುಗಳನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡುವ ಮೂಲಕ ಬಿಜೆಪಿ ಸರ್ಕಾರ ವಿರುದ್ಧ ಸಾಲುಸಾಲು ಭ್ರಷ್ಟಾಚಾರ ಆರೋಪ ಮಾಡಿದೆ.

ಇದಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಐಸಿಸಿ ವಕ್ತಾರ ಪವನ್ ಖೇರಾ, ಕರ್ನಾಟಕದ ಮುಖ್ಯಮಂತ್ರಿ ಸ್ಥಾನವನ್ನು 2,500 ಕೋಟಿ ರೂಪಾಯಿಗಳಿಗೆ ಮತ್ತು ಸಚಿವ ಸ್ಥಾನಗಳು 500 ಕೋಟಿ ರೂಪಾಯಿಗಳಿಗೆ ಮಾರಟವಾಗಲು ಸಿದ್ಧವಾಗಿದೆ ಎಂದು ಆರೋಪಿಸಿದರು.

ಬಿಜೆಪಿಯನ್ನು ‘40% ಸರ್ಕಾರ’ ಎಂದು ಕರೆಯಲು ಕಾರಣವಿದೆ. ಕರ್ನಾಟಕದಲ್ಲಿ ಸಮಾಜದ ಪ್ರತಿಯೊಂದು ವರ್ಗವೂ ಈ 40% ಕಮಿಷನ್ ಸರ್ಕಾರದ ಕಪಿಮುಷ್ಠಿಯಲ್ಲಿದೆ. ಭಾರತದ ಅತ್ಯಂತ ಧಾರ್ಮಿಕ ಪಕ್ಷ ಎಂದು ಹೇಳಿಕೊಳ್ಳುವ ಪಕ್ಷವು ಮಠಗಳಿಗೆ ಅನುದಾನ ಬಿಡುಗಡೆ ಮಾಡಲು 30% ಕಮಿಷನ್ ವಿಧಿಸುತ್ತದೆ, ಬಿಜೆಪಿ ‘ಭ್ರಷ್ಟಾಚಾರ ರೇಟ್ ಕಾರ್ಡ್’ ಪಕ್ಷ ಎಂದು ಟೀಕಿಸಿದರು.

ಮಣಿಪುರ ರಾಜ್ಯ ಅಕ್ಷರಶಃ ಹೊತ್ತಿ ಉರಿಯುತ್ತಿರುವ ಈ ಹೊತ್ತಿನಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದಲ್ಲಿ ಪ್ರಚಾರ ಮಾಡುವುದರಲ್ಲಿ ನಿರತರಾಗಿದ್ದಾರೆ. ಇದು ಬಿಜೆಪಿ ಸರ್ಕಾರದ ತಪ್ಪು ಆದ್ಯತೆಯನ್ನು ತೋರಿಸುತ್ತದೆ ಎಂದರು.

ಕರ್ನಾಟಕದಲ್ಲಿ ನಿರ್ಗಮಿಸುತ್ತಿರುವ ಬಿಜೆಪಿ ಸರ್ಕಾರವನ್ನು ‘ಭ್ರಷ್ಟ’ ಎಂದು ಬಣ್ಣಿಸಿರುವ ಕಾಂಗ್ರೆಸ್, ದಕ್ಷಿಣ ರಾಜ್ಯದಲ್ಲಿ ಅದು ‘ಆಡಳಿತವನ್ನು ಮಾರಾಟ ಮಾಡಿದೆ’ ಎಂದು ಆರೋಪಿಸಿದೆ.
andolanait

Recent Posts

ಇಂದು, ನಾಳೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಹಾಗೂ ನಾಳೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

19 mins ago

ನೆತನ್ಯಾಹು 1 ಫೋನ್‌ ಕಾಲ್‌ ಎಲ್ಲವನ್ನೂ ಹಾಳು ಮಾಡಿತು: ಇರಾನ್‌ ಹೊಸ ಬಾಂಬ್‌

ಟೆಹರಾನ್:‌ ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾದ ಬೆನ್ನಲ್ಲೇ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌…

45 mins ago

ಕಾರು-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್‌ ಸವಾರ ಸಾವು

ಟಿ.ನರಸೀಪುರ: ಕಾರು ಹಾಗೂ ಬೈಕ್‌ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಟಿ ನರಸೀಪುರ-ಮೈಸೂರು…

58 mins ago

ಓಂಕಾರ್ ವಲಯದಲ್ಲಿ ಹತೋಟಿಗೆ ಬಾರದ ಒಂಟಿ ಸಲಗದ ಉಪಟಳ: ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…

1 hour ago

ಬಂಡೀಪುರದಲ್ಲಿ ಸಫಾರಿಗರಿಗೆ ಹುಲಿ ದರ್ಶನ: ಜಿಂಕೆ ಬೇಟೆಯಾಡಿದ ಸೀಳು ನಾಯಿ

ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…

1 hour ago

ಚಾರಣದಲ್ಲಿ ಮಾರ್ಗಸೂಚಿ ಕಟ್ಟುನಿಟ್ಟು ಅನುಸರಣೆಗೆ ಕ್ರಮ ಅಗತ್ಯ

ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…

2 hours ago