BREAKING NEWS

ಮೂರು ದಿನವಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ಅವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಟೀಕಿಸಿದರು.

ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪವನ್ನು ಬಿಜೆಪಿ ಹಿರಿಯ ಸದಸ್ಯ ಆರ್.ಅಶೋಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬ ಬಿಜೆಪಿ ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಲು ಮುಂದಾದಾಗ ಮಧ್ಯಪ್ರವೇಶಿಸಿದ ಸಿಎಂ, ಮೂರು ದಿನವಾದರೂ ನಿಮಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಬುರುಡೆ ಹೊಡೆಯುತ್ತಿದ್ದೀರಿ. ಪದೇ ಪದೇ ಎದ್ದು ನಿಂತು ಮಾತನಾಡಿದರೆ, ರಭಸವಾಗಿ ಮಾತನಾಡಿದರೆ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಾರೆಯೇ ಎಂದು ಯತ್ನಾಳ್ ಅವರನ್ನು ಪ್ರಶ್ನಿಸಿದರು.

ತಾಳ್ಮೆ ಇರಲಿ ಸಭಾಧ್ಯಕ್ಷರು ಅವಕಾಶ ಕೊಟ್ಟಿಲ್ಲ. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪಕ್ಕೆ ಮಾತ್ರ ಅವಕಾಶ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಹೆಣ್ಣುಮಕ್ಕಳಿಗೆ ಅವಕಾಶ ಮಾಡಿಕೊಟ್ಟಿರುವುದನ್ನು ಬಿಜೆಪಿಯವರು ವಿರೋಧ ಮಾಡಿದಂತಿದೆ. ಉತ್ತರ ಕೊಡದೆ ಓಡಿಹೋದವರು, ಜನರು ಚುನಾವಣೆಯಲ್ಲಿ ನಿಮಗೆ ತಕ್ಕ ಪಾಠ ಕಲಿಸಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಎಲ್ಲರೂ ಎದ್ದುನಿಂತು ಮಾತನಾಡಿದರೂ ನಾವು ಹೆದರುವುದಿಲ್ಲ. ಜನ ಈ ರೀತಿಯ ತೀರ್ಪು ಕೊಟ್ಟರೂ ನಿಮಗೆ ಬುದ್ದಿ ಬಂದಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು.

ಹೆಣ್ಣುಮಕ್ಕಳ ಉಚಿತ ಪ್ರಯಾಣದ ಪರವೋ ವಿರುದ್ಧವೋ ಎಂಬುದನ್ನು ಬಿಜೆಪಿಯವರು ಹೇಳಲಿ ನಾವು ಚರ್ಚೆಗೆ ಉತ್ತರ ಕೊಡಲು ತಯಾರಿದ್ದೇವೆ. 2018ರಲ್ಲಿ ಆಶ್ವಾಸನೆ ಕೊಟ್ಟು ಓಡಿಹೋದವರು ನಿಮ್ಮ ಪ್ರಣಾಳಿಕೆಯಲ್ಲಿ ನಿಮ್ಮ ಮುಖವನ್ನು ನೋಡಿಕೊಳ್ಳಿ ಎಂದು ಟೀಕಾಪ್ರಹಾರ ನಡೆಸಿದರು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಭರವಸೆಗಳನ್ನು ನೀಡಿತ್ತು. ಅದರಲ್ಲಿ ನಮ್ಮ ಸರ್ಕಾರ ಮೂರು ಗ್ಯಾರಂಟಿಗಳನ್ನು ಈಡೇರಿಸಿದೆ. ನಾಲ್ಕನೇ ಗ್ಯಾರಂಟಿ ಈಡೇರಿಸುವ ಸಿದ್ದತೆಯಲ್ಲಿದ್ದೇವೆ. 6 ತಿಂಗಳ ಬಳಿಕ 5ನೇ ಗ್ಯಾರಂಟಿಯು ಅನುಷ್ಠಾನವಾಗಲಿದೆ. ಯಾರು ಏನೇ ಹೇಳಿದರೂ ಶೇ.100ಕ್ಕೆ ನೂರರಷ್ಟು 5 ಗ್ಯಾರಂಟಿಯನ್ನು ಇದೇ ಆರ್ಥಿಕ ವರ್ಷದಲ್ಲಿ ಈಡೇರಿಸುತ್ತೇವೆ ಎಂದು ಸದನಕ್ಕೆ ಭರವಸೆ ನೀಡಿದರು.

andolanait

Recent Posts

ಕಳಪೆ ಪ್ರಗತಿ ಸಾಧಿಸಿದ 5 ಪಿಡಿಒಗಳಿಗೆ ಕಾರಣ ಕೇಳಿ ನೋಟಿಸ್ ನೀಡಿದ ಸಿಇಒ ನಂದಿನಿ

ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…

23 mins ago

ಅಕ್ರಮ ನಾಟ ಸಾಗಾಟ : ಲಾರಿ ಸಮೇತ ಮೂವರ ಬಂಧನ

ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…

38 mins ago

ಡೆವಿಲ್‌ ಅಬ್ಬರ | ಮೊದಲ ದಿನದ ಗಳಿಗೆ ಎಷ್ಟು?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…

45 mins ago

ಮಳವಳ್ಳಿ | ವಿದ್ಯುತ್‌ ಸ್ಪರ್ಶ ; ಕಾರ್ಮಿಕ ಸಾವು

ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…

48 mins ago

2027ರ ಜನಗಣತಿ | 11,718 ಕೋಟಿ ನೀಡಲು ಕೇಂದ್ರ ಸಂಪುಟ ಅನುಮೋದನೆ

ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…

54 mins ago

ಇಂಡಿಗೋ ಬಿಕ್ಕಟ್ಟು | ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳ ಅಮಾನತ್ತು

ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…

1 hour ago