BREAKING NEWS

ಮೂರು ದಿನವಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ಅವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಟೀಕಿಸಿದರು.

ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪವನ್ನು ಬಿಜೆಪಿ ಹಿರಿಯ ಸದಸ್ಯ ಆರ್.ಅಶೋಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬ ಬಿಜೆಪಿ ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಲು ಮುಂದಾದಾಗ ಮಧ್ಯಪ್ರವೇಶಿಸಿದ ಸಿಎಂ, ಮೂರು ದಿನವಾದರೂ ನಿಮಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಬುರುಡೆ ಹೊಡೆಯುತ್ತಿದ್ದೀರಿ. ಪದೇ ಪದೇ ಎದ್ದು ನಿಂತು ಮಾತನಾಡಿದರೆ, ರಭಸವಾಗಿ ಮಾತನಾಡಿದರೆ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಾರೆಯೇ ಎಂದು ಯತ್ನಾಳ್ ಅವರನ್ನು ಪ್ರಶ್ನಿಸಿದರು.

ತಾಳ್ಮೆ ಇರಲಿ ಸಭಾಧ್ಯಕ್ಷರು ಅವಕಾಶ ಕೊಟ್ಟಿಲ್ಲ. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪಕ್ಕೆ ಮಾತ್ರ ಅವಕಾಶ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಹೆಣ್ಣುಮಕ್ಕಳಿಗೆ ಅವಕಾಶ ಮಾಡಿಕೊಟ್ಟಿರುವುದನ್ನು ಬಿಜೆಪಿಯವರು ವಿರೋಧ ಮಾಡಿದಂತಿದೆ. ಉತ್ತರ ಕೊಡದೆ ಓಡಿಹೋದವರು, ಜನರು ಚುನಾವಣೆಯಲ್ಲಿ ನಿಮಗೆ ತಕ್ಕ ಪಾಠ ಕಲಿಸಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಎಲ್ಲರೂ ಎದ್ದುನಿಂತು ಮಾತನಾಡಿದರೂ ನಾವು ಹೆದರುವುದಿಲ್ಲ. ಜನ ಈ ರೀತಿಯ ತೀರ್ಪು ಕೊಟ್ಟರೂ ನಿಮಗೆ ಬುದ್ದಿ ಬಂದಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು.

ಹೆಣ್ಣುಮಕ್ಕಳ ಉಚಿತ ಪ್ರಯಾಣದ ಪರವೋ ವಿರುದ್ಧವೋ ಎಂಬುದನ್ನು ಬಿಜೆಪಿಯವರು ಹೇಳಲಿ ನಾವು ಚರ್ಚೆಗೆ ಉತ್ತರ ಕೊಡಲು ತಯಾರಿದ್ದೇವೆ. 2018ರಲ್ಲಿ ಆಶ್ವಾಸನೆ ಕೊಟ್ಟು ಓಡಿಹೋದವರು ನಿಮ್ಮ ಪ್ರಣಾಳಿಕೆಯಲ್ಲಿ ನಿಮ್ಮ ಮುಖವನ್ನು ನೋಡಿಕೊಳ್ಳಿ ಎಂದು ಟೀಕಾಪ್ರಹಾರ ನಡೆಸಿದರು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಭರವಸೆಗಳನ್ನು ನೀಡಿತ್ತು. ಅದರಲ್ಲಿ ನಮ್ಮ ಸರ್ಕಾರ ಮೂರು ಗ್ಯಾರಂಟಿಗಳನ್ನು ಈಡೇರಿಸಿದೆ. ನಾಲ್ಕನೇ ಗ್ಯಾರಂಟಿ ಈಡೇರಿಸುವ ಸಿದ್ದತೆಯಲ್ಲಿದ್ದೇವೆ. 6 ತಿಂಗಳ ಬಳಿಕ 5ನೇ ಗ್ಯಾರಂಟಿಯು ಅನುಷ್ಠಾನವಾಗಲಿದೆ. ಯಾರು ಏನೇ ಹೇಳಿದರೂ ಶೇ.100ಕ್ಕೆ ನೂರರಷ್ಟು 5 ಗ್ಯಾರಂಟಿಯನ್ನು ಇದೇ ಆರ್ಥಿಕ ವರ್ಷದಲ್ಲಿ ಈಡೇರಿಸುತ್ತೇವೆ ಎಂದು ಸದನಕ್ಕೆ ಭರವಸೆ ನೀಡಿದರು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

4 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago