BREAKING NEWS

ಮೂರು ದಿನವಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ಅವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಟೀಕಿಸಿದರು.

ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪವನ್ನು ಬಿಜೆಪಿ ಹಿರಿಯ ಸದಸ್ಯ ಆರ್.ಅಶೋಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬ ಬಿಜೆಪಿ ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಲು ಮುಂದಾದಾಗ ಮಧ್ಯಪ್ರವೇಶಿಸಿದ ಸಿಎಂ, ಮೂರು ದಿನವಾದರೂ ನಿಮಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಬುರುಡೆ ಹೊಡೆಯುತ್ತಿದ್ದೀರಿ. ಪದೇ ಪದೇ ಎದ್ದು ನಿಂತು ಮಾತನಾಡಿದರೆ, ರಭಸವಾಗಿ ಮಾತನಾಡಿದರೆ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಾರೆಯೇ ಎಂದು ಯತ್ನಾಳ್ ಅವರನ್ನು ಪ್ರಶ್ನಿಸಿದರು.

ತಾಳ್ಮೆ ಇರಲಿ ಸಭಾಧ್ಯಕ್ಷರು ಅವಕಾಶ ಕೊಟ್ಟಿಲ್ಲ. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪಕ್ಕೆ ಮಾತ್ರ ಅವಕಾಶ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಹೆಣ್ಣುಮಕ್ಕಳಿಗೆ ಅವಕಾಶ ಮಾಡಿಕೊಟ್ಟಿರುವುದನ್ನು ಬಿಜೆಪಿಯವರು ವಿರೋಧ ಮಾಡಿದಂತಿದೆ. ಉತ್ತರ ಕೊಡದೆ ಓಡಿಹೋದವರು, ಜನರು ಚುನಾವಣೆಯಲ್ಲಿ ನಿಮಗೆ ತಕ್ಕ ಪಾಠ ಕಲಿಸಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಎಲ್ಲರೂ ಎದ್ದುನಿಂತು ಮಾತನಾಡಿದರೂ ನಾವು ಹೆದರುವುದಿಲ್ಲ. ಜನ ಈ ರೀತಿಯ ತೀರ್ಪು ಕೊಟ್ಟರೂ ನಿಮಗೆ ಬುದ್ದಿ ಬಂದಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು.

ಹೆಣ್ಣುಮಕ್ಕಳ ಉಚಿತ ಪ್ರಯಾಣದ ಪರವೋ ವಿರುದ್ಧವೋ ಎಂಬುದನ್ನು ಬಿಜೆಪಿಯವರು ಹೇಳಲಿ ನಾವು ಚರ್ಚೆಗೆ ಉತ್ತರ ಕೊಡಲು ತಯಾರಿದ್ದೇವೆ. 2018ರಲ್ಲಿ ಆಶ್ವಾಸನೆ ಕೊಟ್ಟು ಓಡಿಹೋದವರು ನಿಮ್ಮ ಪ್ರಣಾಳಿಕೆಯಲ್ಲಿ ನಿಮ್ಮ ಮುಖವನ್ನು ನೋಡಿಕೊಳ್ಳಿ ಎಂದು ಟೀಕಾಪ್ರಹಾರ ನಡೆಸಿದರು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಭರವಸೆಗಳನ್ನು ನೀಡಿತ್ತು. ಅದರಲ್ಲಿ ನಮ್ಮ ಸರ್ಕಾರ ಮೂರು ಗ್ಯಾರಂಟಿಗಳನ್ನು ಈಡೇರಿಸಿದೆ. ನಾಲ್ಕನೇ ಗ್ಯಾರಂಟಿ ಈಡೇರಿಸುವ ಸಿದ್ದತೆಯಲ್ಲಿದ್ದೇವೆ. 6 ತಿಂಗಳ ಬಳಿಕ 5ನೇ ಗ್ಯಾರಂಟಿಯು ಅನುಷ್ಠಾನವಾಗಲಿದೆ. ಯಾರು ಏನೇ ಹೇಳಿದರೂ ಶೇ.100ಕ್ಕೆ ನೂರರಷ್ಟು 5 ಗ್ಯಾರಂಟಿಯನ್ನು ಇದೇ ಆರ್ಥಿಕ ವರ್ಷದಲ್ಲಿ ಈಡೇರಿಸುತ್ತೇವೆ ಎಂದು ಸದನಕ್ಕೆ ಭರವಸೆ ನೀಡಿದರು.

andolanait

Recent Posts

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

34 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

38 mins ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

45 mins ago

ಮಾನಸಿಕ ಅಸ್ವಸ್ಥರಿಗೆ ಬೇಕಿದೆ ಮಮತೆಯ ಮನೆ

ಪ್ರಶಾಂತ್ ಎಸ್. ಮೈಸೂರು: ಯಾವುದೋ ಕಾರಣಕ್ಕೆ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವ ಬಹುತೇಕ ಮಂದಿ ಮನೆ ಹಾಗೂ ಕುಟುಂಬದವರಿಂದ ದೂರವಾಗುವುದು ಸಹಜ.…

51 mins ago

ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಹೆಚ್ಚಿನ ಬೇಡಿಕೆ ನಿರೀಕ್ಷೆ

ಗಿರೀಶ್ ಹುಣಸೂರು ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ದಾಖಲೆ ಫಲಿತಾಂಶ ಹಿನ್ನೆಲೆ ಮೈಸೂರು: ಶೈಕ್ಷಣಿಕ ವರ್ಷದ ಆರಂಭಕ್ಕೆ ದಿನಗಣನೆ ಆರಂಭ ವಾಗಿರುವ…

54 mins ago

‘ನಮ್ಮ ಕ್ಲಿನಿಕ್’; ಉಡಾಫೆ ಸಿಬ್ಬಂದಿಗೆ ಬ್ರೇಕ್!

ಕೆ.ಬಿ.ರಮೇಶನಾಯಕ ೨ನೇ, ೪ನೇ ಶನಿವಾರ, ಭಾನುವಾರ ಬಾಗಿಲು ಹಾಕಿದರೆ ಶಿಸ್ತುಕ್ರಮ ಮೈಸೂರು: ವಾರದ ಭಾನುವಾರವೂ ಸೇರಿದಂತೆ ಸರ್ಕಾರಿ ರಜಾ ದಿನಗಳಂದು…

59 mins ago