BREAKING NEWS

ಮೂರು ದಿನವಾದರೂ ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ಅವೇಶನ ಪ್ರಾರಂಭವಾಗಿ ಮೂರು ದಿನವಾದರೂ ಬಿಜೆಪಿಯವರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಟೀಕಿಸಿದರು.

ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪವನ್ನು ಬಿಜೆಪಿ ಹಿರಿಯ ಸದಸ್ಯ ಆರ್.ಅಶೋಕ್ ಮಾಡುತ್ತಿದ್ದ ಸಂದರ್ಭದಲ್ಲಿ ಮತ್ತೊಬ್ಬ ಬಿಜೆಪಿ ಸದಸ್ಯ ಬಸವನಗೌಡ ಪಾಟೀಲ್ ಯತ್ನಾಳ್ ಮಾತನಾಡಲು ಮುಂದಾದಾಗ ಮಧ್ಯಪ್ರವೇಶಿಸಿದ ಸಿಎಂ, ಮೂರು ದಿನವಾದರೂ ನಿಮಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ. ಬುರುಡೆ ಹೊಡೆಯುತ್ತಿದ್ದೀರಿ. ಪದೇ ಪದೇ ಎದ್ದು ನಿಂತು ಮಾತನಾಡಿದರೆ, ರಭಸವಾಗಿ ಮಾತನಾಡಿದರೆ ವಿರೋಧ ಪಕ್ಷದ ನಾಯಕನನ್ನಾಗಿ ಮಾಡುತ್ತಾರೆಯೇ ಎಂದು ಯತ್ನಾಳ್ ಅವರನ್ನು ಪ್ರಶ್ನಿಸಿದರು.

ತಾಳ್ಮೆ ಇರಲಿ ಸಭಾಧ್ಯಕ್ಷರು ಅವಕಾಶ ಕೊಟ್ಟಿಲ್ಲ. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪಕ್ಕೆ ಮಾತ್ರ ಅವಕಾಶ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣಕ್ಕೆ ಹೆಣ್ಣುಮಕ್ಕಳಿಗೆ ಅವಕಾಶ ಮಾಡಿಕೊಟ್ಟಿರುವುದನ್ನು ಬಿಜೆಪಿಯವರು ವಿರೋಧ ಮಾಡಿದಂತಿದೆ. ಉತ್ತರ ಕೊಡದೆ ಓಡಿಹೋದವರು, ಜನರು ಚುನಾವಣೆಯಲ್ಲಿ ನಿಮಗೆ ತಕ್ಕ ಪಾಠ ಕಲಿಸಿ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಎಲ್ಲರೂ ಎದ್ದುನಿಂತು ಮಾತನಾಡಿದರೂ ನಾವು ಹೆದರುವುದಿಲ್ಲ. ಜನ ಈ ರೀತಿಯ ತೀರ್ಪು ಕೊಟ್ಟರೂ ನಿಮಗೆ ಬುದ್ದಿ ಬಂದಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿದರು.

ಹೆಣ್ಣುಮಕ್ಕಳ ಉಚಿತ ಪ್ರಯಾಣದ ಪರವೋ ವಿರುದ್ಧವೋ ಎಂಬುದನ್ನು ಬಿಜೆಪಿಯವರು ಹೇಳಲಿ ನಾವು ಚರ್ಚೆಗೆ ಉತ್ತರ ಕೊಡಲು ತಯಾರಿದ್ದೇವೆ. 2018ರಲ್ಲಿ ಆಶ್ವಾಸನೆ ಕೊಟ್ಟು ಓಡಿಹೋದವರು ನಿಮ್ಮ ಪ್ರಣಾಳಿಕೆಯಲ್ಲಿ ನಿಮ್ಮ ಮುಖವನ್ನು ನೋಡಿಕೊಳ್ಳಿ ಎಂದು ಟೀಕಾಪ್ರಹಾರ ನಡೆಸಿದರು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ನಮ್ಮ ಪಕ್ಷ ಐದು ಭರವಸೆಗಳನ್ನು ನೀಡಿತ್ತು. ಅದರಲ್ಲಿ ನಮ್ಮ ಸರ್ಕಾರ ಮೂರು ಗ್ಯಾರಂಟಿಗಳನ್ನು ಈಡೇರಿಸಿದೆ. ನಾಲ್ಕನೇ ಗ್ಯಾರಂಟಿ ಈಡೇರಿಸುವ ಸಿದ್ದತೆಯಲ್ಲಿದ್ದೇವೆ. 6 ತಿಂಗಳ ಬಳಿಕ 5ನೇ ಗ್ಯಾರಂಟಿಯು ಅನುಷ್ಠಾನವಾಗಲಿದೆ. ಯಾರು ಏನೇ ಹೇಳಿದರೂ ಶೇ.100ಕ್ಕೆ ನೂರರಷ್ಟು 5 ಗ್ಯಾರಂಟಿಯನ್ನು ಇದೇ ಆರ್ಥಿಕ ವರ್ಷದಲ್ಲಿ ಈಡೇರಿಸುತ್ತೇವೆ ಎಂದು ಸದನಕ್ಕೆ ಭರವಸೆ ನೀಡಿದರು.

andolanait

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

6 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

9 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

10 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

11 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

12 hours ago