ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ಕೇಂದ್ರದ ವಿರೋಧ ವಿಪಕ್ಷಗಳು (ಇಂಡಿಯಾ) ತಮ್ಮ ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ.
ಈ ಬೆನ್ನಲ್ಲೇ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ‘ಇದು INDIA ಅಲ್ಲ, ಇಟಲಿಯ Eat INDIA ಕಂಪೆನಿ’ ಎಂದು ಟ್ವೀಟ್ ಮಾಡಿದೆ.
ಬಿಜೆಪಿಯ ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಎಎಪಿ ಕರ್ನಾಟಕ @AAPBangalore, ‘ಆಲಿಬಾಬ ಮತ್ತು ನಲ್ವತ್ತು ಕಳ್ಳರ ಕತೆ ಕೇಳಿರಬಹುದು. ಇದು ಢೋಂಗಿ ಬಾಬ ಮತ್ತು 38 ಕಳ್ಳರ ಗುಂಪು. ಈ ಗುಂಪು ಎಷ್ಟೋ ಜನ ತಮ್ಮ ಪಕ್ಷಕ್ಕೇ ಚೂರಿ ಹಾಕಿದವರು ಇದ್ದಾರೆ! ಇಡಿ – ಐಟಿ ಭಯದಿಂದ ಬಂದವರು ಇದ್ದಾರೆ! ಪ್ರತ್ಯೇಕ ದೇಶಕ್ಕೆ ಬೇಡಿಕೆ ಇಟ್ಟುಕೊಂಡೇ ಪಕ್ಷ ಮಾಡಿಕೊಂಡಿರುವ ತುಕುಡೆ-ತುಕುಡೆ ಗ್ಯಾಂಗಿನವರಿದ್ದಾರೆ ! ಎಲ್ಲಿ ಅಧಿಕಾರ ಇರುತ್ತೋ ಅಲ್ಲಿ ಹೋಗುವ ಬಹಳಷ್ಟು ಗಂಜಿ ಗಿರಾಕಿಗಳಿದ್ದಾರೆ! ನಿನ್ನೆ ತನಕ ಕಳ್ಳರಾಗಿದ್ದವರು ಇಂದು ಮಳ್ಳರಾಗಿದ್ದಾರೆ ! ಎಷ್ಟೇ ದೊಡ್ಡ ಭ್ರಷ್ಟ ಇದ್ದರೂ, ಪಕ್ಷ ಸೇರಿದ ಕೂಡಲೇ ಕ್ಲೀನ್ ಮಾಡಿಕೊಡುವ ಬಿಜೆಪಿ ವಾಷಿಂಗ್ ಮಿಷನ್ ಪಕ್ಷ ಇದೆ’ ಎಂದು ತಿರುಗೇಟು ನೀಡಿದೆ.
Welcome to NDA
N : Narendra
D : Dummy of
A : Ambani & Adani
#INDIA vs NDA ಎಂದು NDA ಮೈತ್ರಿ ಕೂಟದ ಬಗ್ಗೆ ಕುಟುಕಿದೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…