ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಸಿದ ಕೇಂದ್ರದ ವಿರೋಧ ವಿಪಕ್ಷಗಳು (ಇಂಡಿಯಾ) ತಮ್ಮ ಸಾಮೂಹಿಕ ಸಂಕಲ್ಪ ಅಂಶಗಳನ್ನು ಪ್ರಕಟಿಸಿವೆ.
ಈ ಬೆನ್ನಲ್ಲೇ ವಿಪಕ್ಷಗಳ ಮೈತ್ರಿಕೂಟದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದ್ದು, ‘ಇದು INDIA ಅಲ್ಲ, ಇಟಲಿಯ Eat INDIA ಕಂಪೆನಿ’ ಎಂದು ಟ್ವೀಟ್ ಮಾಡಿದೆ.
ಬಿಜೆಪಿಯ ಈ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಎಎಪಿ ಕರ್ನಾಟಕ @AAPBangalore, ‘ಆಲಿಬಾಬ ಮತ್ತು ನಲ್ವತ್ತು ಕಳ್ಳರ ಕತೆ ಕೇಳಿರಬಹುದು. ಇದು ಢೋಂಗಿ ಬಾಬ ಮತ್ತು 38 ಕಳ್ಳರ ಗುಂಪು. ಈ ಗುಂಪು ಎಷ್ಟೋ ಜನ ತಮ್ಮ ಪಕ್ಷಕ್ಕೇ ಚೂರಿ ಹಾಕಿದವರು ಇದ್ದಾರೆ! ಇಡಿ – ಐಟಿ ಭಯದಿಂದ ಬಂದವರು ಇದ್ದಾರೆ! ಪ್ರತ್ಯೇಕ ದೇಶಕ್ಕೆ ಬೇಡಿಕೆ ಇಟ್ಟುಕೊಂಡೇ ಪಕ್ಷ ಮಾಡಿಕೊಂಡಿರುವ ತುಕುಡೆ-ತುಕುಡೆ ಗ್ಯಾಂಗಿನವರಿದ್ದಾರೆ ! ಎಲ್ಲಿ ಅಧಿಕಾರ ಇರುತ್ತೋ ಅಲ್ಲಿ ಹೋಗುವ ಬಹಳಷ್ಟು ಗಂಜಿ ಗಿರಾಕಿಗಳಿದ್ದಾರೆ! ನಿನ್ನೆ ತನಕ ಕಳ್ಳರಾಗಿದ್ದವರು ಇಂದು ಮಳ್ಳರಾಗಿದ್ದಾರೆ ! ಎಷ್ಟೇ ದೊಡ್ಡ ಭ್ರಷ್ಟ ಇದ್ದರೂ, ಪಕ್ಷ ಸೇರಿದ ಕೂಡಲೇ ಕ್ಲೀನ್ ಮಾಡಿಕೊಡುವ ಬಿಜೆಪಿ ವಾಷಿಂಗ್ ಮಿಷನ್ ಪಕ್ಷ ಇದೆ’ ಎಂದು ತಿರುಗೇಟು ನೀಡಿದೆ.
Welcome to NDA
N : Narendra
D : Dummy of
A : Ambani & Adani
#INDIA vs NDA ಎಂದು NDA ಮೈತ್ರಿ ಕೂಟದ ಬಗ್ಗೆ ಕುಟುಕಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…