BREAKING NEWS

ಬಿಜೆಪಿಗೆ ಸಂಸತ್ ಚುನಾವಣಾ ಸೋಲಿನ ಭಯವಿದ್ದು ಅದಕ್ಕಾಗಿ ಬಾಯಿಗೆ ಬಂದಂತೆ ಸುಳ್ಳು ಆರೋಪ ಮಾಡುತ್ತಿದ್ದಾರೆ: ಸಿಎಂ

ಬೆಳಗಾವಿ : ಕಳೆದ ಮೂರು ವರ್ಷಗಳಿಂದಲೂ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿಸದ ಬಿಜೆಪಿಯವರು ಈಗ ಆರೋಪಗಳನ್ನು ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ಯೋಜನೆಯಿಂದ ಜನ ಖುಷಿಯಲ್ಲಿದ್ದಾರೆ. ಇದನ್ನು ನೋಡಿ ಸಹಿಸಲಾಗದ ಬಿಜೆಪಿಯವರು ಮೈ ಪರಚಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಪಂಚಖಾತ್ರಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿವೆ. ಶಕ್ತಿ ಯೋಜನೆಯಿಂದ ಮಹಿಳೆಯರು ಖುಷಿಯಾಗಿದ್ದಾರೆ. ಇದೇ ತಿಂಗಳಲ್ಲಿ ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಉದ್ಘಾಟಿಸಲಾಗುತ್ತಿದೆ. ಇದನ್ನೆಲ್ಲ ನೋಡಿ ಬಿಜೆಪಿಯವರಿಗೆ ಹೊಟ್ಟೆ ಉರಿ ತಡೆದುಕೊಳ್ಳಲು ಆಗುತ್ತಿಲ್ಲ ಎಂದರು.

ಗೃಹಲಕ್ಷ್ಮಿ ದೇಶದಲ್ಲೇ ಅತ್ಯಂತ ದೊಡ್ಡ ಯೋಜನೆಯಾಗಿದೆ. ರಾಜ್ಯದ 1.28 ಕೋಟಿ ಮಹಿಳೆಯರು ಇದರ ಫಲಾನುಭವಿಗಳಾಗಲಿದ್ದಾರೆ. ಕಾರ್ಯಕ್ರಮ ಉದ್ಘಾಟನೆಗೆ ಸೋನಿಯಾ ಗಾಂ ಅವರನ್ನು ಆಹ್ವಾನಿಸಲಾಗಿದೆ ಎಂದರು.

ಈ ಹಿಂದೆ ಭ್ರಷ್ಟಾಚಾರ, ಧರ್ಮ ರಾಜಕಾರಣ, ಲಂಚಗುಳಿತನದಿಂದ ರಾಜ್ಯವನ್ನು ಹಾಳು ಮಾಡಿದ್ದಾರೆ. ಗುತ್ತಿಗೆದಾರರ ಬಿಲ್ ಬಾಕಿ ಉಳಿಸಿಕೊಂಡವರಿಗೆ ನಮ್ಮ ಸರ್ಕಾರದ ವಿರುದ್ಧ ಮಾತನಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

ನಾವು ಯಾವುದೇ ಗುತ್ತಿಗೆದಾರರಿಗೆ ತೊಂದರೆ ನೀಡುವ ಉದ್ದೇಶ ಹೊಂದಿಲ್ಲ. ಕಾಮಗಾರಿಗಳ ನೈಜ್ಯತೆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಪ್ರಾಮಾಣಿಕವಾಗಿ ಕೆಲಸ ಮಾಡಿದವರಿಗೆ ಬಾಕಿ ಬಿಲ್ ಪಾವತಿ ಮಾಡುತ್ತೇವೆ ಎಂದರು.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಇಂದು ಹೇಳಿಕೆ ನೀಡಿ ಯಾರು ಕಮೀಷನ್ ಕೇಳುತ್ತಿಲ್ಲ ಎಂದಿದ್ದಾರೆ. ಬಿಜೆಪಿಯವರಿಗೆ ಸಂಸತ್ ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯವಿದ್ದು, ಅದಕ್ಕಾಗಿ ಬಾಯಿಗೆ ಬಂದಂತೆ ಸುಳ್ಳು ಆರೋಪ ಮಾಡುತ್ತಿದ್ದಾರೆ.

ಕಳೆದ ಮೂರು ತಿಂಗಳಿಂದಷ್ಟೇ ನಮ್ಮ ಸರ್ಕಾರ ಅಕಾರಕ್ಕೆ ಬಂದಿದೆ. ಒಂದೂ ಕಾಮಗಾರಿಯನ್ನು ಗುತ್ತಿಗೆ ನೀಡಿಲ್ಲ. ಬಾಕಿ ಬಿಲ್‍ಗಳ ಪಾವತಿ ಮಾಡಬೇಕು. ಅದರಲ್ಲಿ ಎರಡು ಮಾತಿಲ್ಲ. ಅದಕ್ಕೂ ಮೊದಲು ತನಿಖೆ ಪೂರ್ಣಗೊಳ್ಳಬೇಕಿದೆ. ಈ ನಡುವೆ ಕಮೀಷನ್ ಕೇಳಲಾಗುತ್ತಿದೆ ಎಂಬ ಆರೋಪ ಸುಳ್ಳು ಎಂದರು.
ಸಂಸತ್‍ನಲ್ಲಿ ರಾಹುಲ್ ಗಾಂ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆಂಬ ಕುರಿತಂತೆ ತಮಗೆ ಮಾಹಿತಿ ಇಲ್ಲ. ಆ ಕುರಿತು ಸ್ಪೀಕರ್ ಮುಂದೆ ಅರ್ಜಿ ಬಾಕಿ ಇದೆ. ಈ ಬಗ್ಗೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದರು.

ಬೆಳಗಾವಿ ಜಿಲ್ಲೆಯಲ್ಲಿ ವಿಕಲಚೇತನ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪೊಲೀಸ್ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಇದೇ ವೇಳೆ ಸಿಎಂ ಭರವಸೆ ನೀಡಿದರು

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

9 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

11 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

11 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

15 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

20 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

20 hours ago