BREAKING NEWS

ಬಿಜೆಪಿ ನನ್ನ ಹೇಳಿಕೆಯನ್ನು ತಿರುಚುತ್ತಿದೆ : ಉದಯನಿಧಿ ಸ್ಟಾಲಿನ್

ಚೆನ್ನೈ : ಸನಾತನ ಧರ್ಮ ಕುರಿತು ತನ್ನ ಹೇಳಿಕೆಯು ವಿವಾದವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು, ಬಿಜೆಪಿಯು ತನ್ನ ಹೇಳಿಕೆಯನ್ನು ತಿರುಚುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೆ ಮತ್ತು ಸನಾತನ ಧರ್ಮವನ್ನು ನಿರ್ಮೂಲನಗೊಳಿಸಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ನಾನು ಇದನ್ನು ನಿರಂತರವಾಗಿ ಹೇಳುತ್ತೇನೆ. ನಾನು ನರಮೇಧಕ್ಕೆ ಕರೆ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಹೇಳುತ್ತಿದ್ದಾರೆ,

ಇತರರು ದ್ರಾವಿಡವಾದವನ್ನು ನಿರ್ಮೂಲನಗೊಳಿಸಬೇಕು ಎಂದು ಹೇಳುತ್ತಿದ್ದಾರೆ. ಡಿಎಂಕೆಯವರನ್ನು ಕೊಲ್ಲಬೇಕು ಎಂದು ಹೇಳಿಕೆ ನೀಡುತ್ತಿರುವುದರ ಅರ್ಥವೇ? ಪ್ರಧಾನಿ ಮೋದಿಯವರು ‘ಕಾಂಗ್ರೆಸ್ ಮುಕ್ತ ಭಾರತ ’ಎಂದು ಹೇಳಿದಾಗ ಕಾಂಗ್ರೆಸಿಗರನ್ನು ಕೊಲ್ಲಬೇಕು ಎನ್ನುವುದು ಅದರ ಅರ್ಥವೇ ಎಂದು ಪ್ರಶ್ನಿಸಿದರು.

ಸನಾತನ ಎಂದರೇನು? ಸನಾತನ ಎಂದರೆ ಯಾವುದನ್ನೂ ಬದಲಿಸಬಾರದು ಮತ್ತು ಎಲ್ಲವೂ ಶಾಶ್ವತ ಎಂದು ಅರ್ಥ. ಆದರೆ ದ್ರಾವಿಡ ಮಾದರಿಯು ಬದಲಾವಣೆಗೆ ಕರೆ ನೀಡುತ್ತದೆ ಮತ್ತು ಎಲ್ಲರೂ ಸಮಾನವಾಗಿರಬೇಕು ಎಂದು ಹೇಳುತ್ತದೆ. ಬಿಜೆಪಿಯವರಿಗೆ ಇದು ಮಾಮೂಲಿ ಕೆಲಸವಾಗಿದೆ ಎಂದು ಹೇಳಿದ ಉದಯನಿಧಿ, ‘ಅವರು ನನ್ನ ವಿರುದ್ಧ ಏನೇ ಪ್ರಕರಣಗಳನ್ನು ದಾಖಲಿಸಿದರೂ ಎದುರಿಸಲು ನಾನು ಸಿದ್ಧನಿದ್ದೇನೆ. ಬಿಜೆಪಿಗೆ ಇಂಡಿಯಾ ಮೈತ್ರಿಕೂಟದ ಬಗ್ಗೆ ಭಯವಿದೆ ಮತ್ತು ಅದರಿಂದ ವಿಷಯಾಂತರಕ್ಕಾಗಿ ಇದನ್ನೆಲ್ಲ ಹೇಳುತ್ತಿದ್ದಾರೆ. ಒಂದೇ ಕುಲ, ಒಂದೇ ದೇವರು ಎನ್ನುವುದು ಡಿಎಂಕೆಯ ನೀತಿಯಾಗಿದೆʼ ಎಂದರು.

andolanait

Recent Posts

ಕೊಳ್ಳೇಗಾಲ| ಹಳೆ ವೈಷಮ್ಯ ಓರ್ವನ ಕೊಲೆ

ಕೊಳ್ಳೇಗಾಲ: ರಾತ್ರಿ ಕಂಠಪೂರ್ತಿ ಕುಡಿದ ಇಬ್ಬರ ನಡುವೆ ಹಳೇ ವೈಷಮ್ಯದಿಂದ ಕಲಹ ನಡೆದು ಓರ್ವನನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ…

6 hours ago

ಮುಂದಿನ ಒಂದು ವಾರದವರೆಗೆ ರಾಜ್ಯದಲ್ಲಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಆರ್ಭಟ ಜೋರಾಗಿರುವ ಬೆನ್ನಲ್ಲೇ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

8 hours ago

ಕರ್ನಾಟಕದಲ್ಲಿ ರಾತ್ರಿ ವೇಳೆಯೂ ಬೀಸಲಿದೆ ಉಷ್ಣ ಅಲೆ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಕಳೆದ ಹಲವು ದಿನಗಳಿಂದ ರಾಜ್ಯಾದ್ಯಂತ ತಾಪಮಾನ ಹೆಚ್ಚಾಗಿದ್ದು, ಜನರು ಹೈರಾಣಾಗಿದ್ದಾರೆ. ಸುಡು ಬಿಸಿಲು ಹಾಗೂ ಸೆಖೆಯಿಂದಾಗಿ ಕರುನಾಡ ಜನರು…

8 hours ago

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು

ಮುತ್ತತ್ತಿಯಲ್ಲಿ ನೀರಿಗಿಳಿದ ಯುವಕ ಸಾವು ಹಲಗೂರು: ಇಲ್ಲಿಗೆ ಸಮೀಪದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ತೀವ್ರ ಸೆಳೆತಕ್ಕೆ…

9 hours ago

ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನ ಪತನ: ಪೈಲಟ್‌ ಹಾಗೂ ಕೋ ಪೈಲಟ್‌ ಸಾವು

ರಾಯ್ಪುರ: ಛತ್ತೀಸ್‌ಗಢದಲ್ಲಿ ಖಾಸಗಿ ವಿಮಾನವೊಂದು ಪತನವಾಗಿದ್ದು, ಪೈಲಟ್‌ ಹಾಗೂ ಸಹ ಪೈಲಟರ್‌ ಇಬ್ಬರೂ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಛತ್ತೀಸ್‌ಗಢದ…

9 hours ago

ಟ್ರಂಪ್‌ ಹೇಳಿದ್ದನ್ನು ಪಾಲಿಸಲು ಮೋದಿ ಇಸ್ರೇಲ್‌ಗೆ ಭೇಟಿ ನೀಡಿದ್ದರು: ರಾಹುಲ್‌ ಗಾಂಧಿ

ಚೆನ್ನೈ: ಇರಾನ್-ಇಸ್ರೇಲ್‌ ಯುದ್ಧ ಶುರುವಾಗುವ ಮೊದಲು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದನ್ನು ಪಾಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ…

9 hours ago