BREAKING NEWS

ಬಿಜೆಪಿ ನನ್ನ ಹೇಳಿಕೆಯನ್ನು ತಿರುಚುತ್ತಿದೆ : ಉದಯನಿಧಿ ಸ್ಟಾಲಿನ್

ಚೆನ್ನೈ : ಸನಾತನ ಧರ್ಮ ಕುರಿತು ತನ್ನ ಹೇಳಿಕೆಯು ವಿವಾದವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು, ಬಿಜೆಪಿಯು ತನ್ನ ಹೇಳಿಕೆಯನ್ನು ತಿರುಚುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೆ ಮತ್ತು ಸನಾತನ ಧರ್ಮವನ್ನು ನಿರ್ಮೂಲನಗೊಳಿಸಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ನಾನು ಇದನ್ನು ನಿರಂತರವಾಗಿ ಹೇಳುತ್ತೇನೆ. ನಾನು ನರಮೇಧಕ್ಕೆ ಕರೆ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಹೇಳುತ್ತಿದ್ದಾರೆ,

ಇತರರು ದ್ರಾವಿಡವಾದವನ್ನು ನಿರ್ಮೂಲನಗೊಳಿಸಬೇಕು ಎಂದು ಹೇಳುತ್ತಿದ್ದಾರೆ. ಡಿಎಂಕೆಯವರನ್ನು ಕೊಲ್ಲಬೇಕು ಎಂದು ಹೇಳಿಕೆ ನೀಡುತ್ತಿರುವುದರ ಅರ್ಥವೇ? ಪ್ರಧಾನಿ ಮೋದಿಯವರು ‘ಕಾಂಗ್ರೆಸ್ ಮುಕ್ತ ಭಾರತ ’ಎಂದು ಹೇಳಿದಾಗ ಕಾಂಗ್ರೆಸಿಗರನ್ನು ಕೊಲ್ಲಬೇಕು ಎನ್ನುವುದು ಅದರ ಅರ್ಥವೇ ಎಂದು ಪ್ರಶ್ನಿಸಿದರು.

ಸನಾತನ ಎಂದರೇನು? ಸನಾತನ ಎಂದರೆ ಯಾವುದನ್ನೂ ಬದಲಿಸಬಾರದು ಮತ್ತು ಎಲ್ಲವೂ ಶಾಶ್ವತ ಎಂದು ಅರ್ಥ. ಆದರೆ ದ್ರಾವಿಡ ಮಾದರಿಯು ಬದಲಾವಣೆಗೆ ಕರೆ ನೀಡುತ್ತದೆ ಮತ್ತು ಎಲ್ಲರೂ ಸಮಾನವಾಗಿರಬೇಕು ಎಂದು ಹೇಳುತ್ತದೆ. ಬಿಜೆಪಿಯವರಿಗೆ ಇದು ಮಾಮೂಲಿ ಕೆಲಸವಾಗಿದೆ ಎಂದು ಹೇಳಿದ ಉದಯನಿಧಿ, ‘ಅವರು ನನ್ನ ವಿರುದ್ಧ ಏನೇ ಪ್ರಕರಣಗಳನ್ನು ದಾಖಲಿಸಿದರೂ ಎದುರಿಸಲು ನಾನು ಸಿದ್ಧನಿದ್ದೇನೆ. ಬಿಜೆಪಿಗೆ ಇಂಡಿಯಾ ಮೈತ್ರಿಕೂಟದ ಬಗ್ಗೆ ಭಯವಿದೆ ಮತ್ತು ಅದರಿಂದ ವಿಷಯಾಂತರಕ್ಕಾಗಿ ಇದನ್ನೆಲ್ಲ ಹೇಳುತ್ತಿದ್ದಾರೆ. ಒಂದೇ ಕುಲ, ಒಂದೇ ದೇವರು ಎನ್ನುವುದು ಡಿಎಂಕೆಯ ನೀತಿಯಾಗಿದೆʼ ಎಂದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

11 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

12 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

13 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

13 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

19 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

19 hours ago