BREAKING NEWS

ಬಿಜೆಪಿ ನನ್ನ ಹೇಳಿಕೆಯನ್ನು ತಿರುಚುತ್ತಿದೆ : ಉದಯನಿಧಿ ಸ್ಟಾಲಿನ್

ಚೆನ್ನೈ : ಸನಾತನ ಧರ್ಮ ಕುರಿತು ತನ್ನ ಹೇಳಿಕೆಯು ವಿವಾದವನ್ನು ಸೃಷ್ಟಿಸಿರುವ ಹಿನ್ನೆಲೆಯಲ್ಲಿ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು, ಬಿಜೆಪಿಯು ತನ್ನ ಹೇಳಿಕೆಯನ್ನು ತಿರುಚುತ್ತಿದೆ ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,‘ನಾನು ಸನಾತನ ಧರ್ಮವನ್ನು ಮಾತ್ರ ಟೀಕಿಸಿದ್ದೆ ಮತ್ತು ಸನಾತನ ಧರ್ಮವನ್ನು ನಿರ್ಮೂಲನಗೊಳಿಸಬೇಕು ಎಂದು ಮತ್ತೆ ಹೇಳುತ್ತಿದ್ದೇನೆ. ನಾನು ಇದನ್ನು ನಿರಂತರವಾಗಿ ಹೇಳುತ್ತೇನೆ. ನಾನು ನರಮೇಧಕ್ಕೆ ಕರೆ ನೀಡಿದ್ದೇನೆ ಎಂದು ಕೆಲವರು ಬಾಲಿಶವಾಗಿ ಹೇಳುತ್ತಿದ್ದಾರೆ,

ಇತರರು ದ್ರಾವಿಡವಾದವನ್ನು ನಿರ್ಮೂಲನಗೊಳಿಸಬೇಕು ಎಂದು ಹೇಳುತ್ತಿದ್ದಾರೆ. ಡಿಎಂಕೆಯವರನ್ನು ಕೊಲ್ಲಬೇಕು ಎಂದು ಹೇಳಿಕೆ ನೀಡುತ್ತಿರುವುದರ ಅರ್ಥವೇ? ಪ್ರಧಾನಿ ಮೋದಿಯವರು ‘ಕಾಂಗ್ರೆಸ್ ಮುಕ್ತ ಭಾರತ ’ಎಂದು ಹೇಳಿದಾಗ ಕಾಂಗ್ರೆಸಿಗರನ್ನು ಕೊಲ್ಲಬೇಕು ಎನ್ನುವುದು ಅದರ ಅರ್ಥವೇ ಎಂದು ಪ್ರಶ್ನಿಸಿದರು.

ಸನಾತನ ಎಂದರೇನು? ಸನಾತನ ಎಂದರೆ ಯಾವುದನ್ನೂ ಬದಲಿಸಬಾರದು ಮತ್ತು ಎಲ್ಲವೂ ಶಾಶ್ವತ ಎಂದು ಅರ್ಥ. ಆದರೆ ದ್ರಾವಿಡ ಮಾದರಿಯು ಬದಲಾವಣೆಗೆ ಕರೆ ನೀಡುತ್ತದೆ ಮತ್ತು ಎಲ್ಲರೂ ಸಮಾನವಾಗಿರಬೇಕು ಎಂದು ಹೇಳುತ್ತದೆ. ಬಿಜೆಪಿಯವರಿಗೆ ಇದು ಮಾಮೂಲಿ ಕೆಲಸವಾಗಿದೆ ಎಂದು ಹೇಳಿದ ಉದಯನಿಧಿ, ‘ಅವರು ನನ್ನ ವಿರುದ್ಧ ಏನೇ ಪ್ರಕರಣಗಳನ್ನು ದಾಖಲಿಸಿದರೂ ಎದುರಿಸಲು ನಾನು ಸಿದ್ಧನಿದ್ದೇನೆ. ಬಿಜೆಪಿಗೆ ಇಂಡಿಯಾ ಮೈತ್ರಿಕೂಟದ ಬಗ್ಗೆ ಭಯವಿದೆ ಮತ್ತು ಅದರಿಂದ ವಿಷಯಾಂತರಕ್ಕಾಗಿ ಇದನ್ನೆಲ್ಲ ಹೇಳುತ್ತಿದ್ದಾರೆ. ಒಂದೇ ಕುಲ, ಒಂದೇ ದೇವರು ಎನ್ನುವುದು ಡಿಎಂಕೆಯ ನೀತಿಯಾಗಿದೆʼ ಎಂದರು.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

7 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

15 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

15 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

15 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

18 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

18 hours ago