BREAKING NEWS

ಬಿಜೆಪಿಯವರು ಭಾರತ ಮಾತೆಯ ಹಂತಕರು : ರಾಹುಲ್ ಗಾಂಧಿ

ನವದೆಹಲಿ : ಬಿಜೆಪಿಯವರು ಭಾರತ ಮಾತೆಯ ಹಂತಕರು. ಮಣಿಪುರ ಎರಡು ಹೋಳಾಗಿದೆ. ಸರ್ಕಾರದ ರಾಜಕೀಯ ಮಣಿಪುರದಲ್ಲಿ ಭಾರತವನ್ನು ಕೊಲೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿರೀಕ್ಷೆಯಂತೆ ಬಿಜೆಪಿಯನ್ನು ಟೀಕಿಸುವ ಮೂಲಕ ಭಾಷಣ ಆರಂಭಿಸಿದರು,ನೀವು (ಬಿಜೆಪಿ) ಇಂದು ಭಯಪಡುವ ಅಗತ್ಯವಿಲ್ಲ, ನನ್ನ ಭಾಷಣವು ಅದಾನಿ ವಿಷಯದ ಬಗ್ಗೆ ಅಲ್ಲ. ಮಣಿಪುರದ ಜನರನ್ನು ಕೊಲ್ಲುವ ಮೂಲಕ, ನೀವು ಭಾರತ ಮಾತೆಯ ಹಂತಕರಾಗಿದ್ದೀರಿ. ನೀವು ದೇಶದ್ರೋಹಿಗಳು, ದೇಶಭಕ್ತರಲ್ಲ ಎಂದು ಕಿಡಿ ಕಾರಿದರು.

ಭಾರತ ಒಂದು ಧ್ವನಿ, ಭಾರತ ನಮ್ಮ ಜನರ ಧ್ವನಿ, ಹೃದಯದ ದನಿ . ಆ ದನಿಯನ್ನು ನೀವು ಮಣಿಪುರದಲ್ಲಿ ಹತ್ಯೆ ಮಾಡಿದ್ದೀರಿ, ಇದರರ್ಥ ನೀವು ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆ ಮಾಡಿದ್ದೀರಿ. ಮಣಿಪುರದಲ್ಲಿನ ಜನರನ್ನು ಹತ್ಯೆ ಮಾಡುವ ಮೂಲಕ ನೀವು ಭಾರತವನ್ನು ಕೊಂದಿದ್ದೀರಿ. ನೀವು ದೇಶಪ್ರೇಮಿಗಳಲ್ಲ,ದೇಶದ್ರೋಹಿಗಳು ಎಂದು ರಾಹುಲ್ ಗುಡುಗಿದರು.

ಕೆಲವು ದಿನಗಳ ಹಿಂದೆ ನಾನು ಮಣಿಪುರಕ್ಕೆ ಹೋಗಿದ್ದೆ, ಇಲ್ಲಿವರೆಗೆ ನಮ್ಮ ಪ್ರಧಾನಿ ಹೋಗಿಲ್ಲ, ಏಕೆಂದರೆ ಅವರಿಗೆ ಮಣಿಪುರ ಭಾರತವಲ್ಲ, ನಾನು ಮಣಿಪುರ ಎಂಬ ಪದವನ್ನು ಬಳಸಿದ್ದೇನೆ ಆದರೆ ಅದು ಮಣಿಪುರವಾಗಿ ಉಳಿದಿಲ್ಲ ಎಂಬುದು ಸತ್ಯ .ನೀವು ಮಣಿಪುರವನ್ನು ಎರಡಾಗಿ ಮಾಡಿದ್ದೀರಿ, ನೀವು ಮಣಿಪುರವನ್ನು ಒಡೆದು ಹಾಕಿದ್ದೀರಿ ಎಂದು ಆರೋಪಿಸಿದರು. ಭಾರತ್ ಜೋಡೋ ಯಾತ್ರೆಯ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ಪ್ರಯಾಣ ಇನ್ನೂ ಮುಗಿದಿಲ್ಲ. ಅದು ಇನ್ನೂ ಚಾಲನೆಯಲ್ಲಿದೆ.ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಪ್ರಾರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಯಾಕೆ ಯಾತ್ರೆ ಆರಂಭಿಸಿದೆ ಎಂಬುದು ನನಗೇ ಗೊತ್ತಿಲ್ಲ. ಆದರೆ ಆ ಪ್ರಯಾಣದಲ್ಲಿ ಜನರ ನೋವು, ಸಂಕಟ, ಸಮಸ್ಯೆಗಳು ನನ್ನದೇ ಸಮಸ್ಯೆಗಳಾದವು. ಯಾತ್ರೆಯ ವೇಳೆ ನನ್ನಲ್ಲಿದ್ದ ಅಹಂಕಾರದ ಭಾವನೆ ಮಾಯವಾಯಿತು ಎಂದರು.

ಮಣಿಪುರದ ವಿಚಾರವಾಗಿ ಪ್ರಧಾನಿ ನರೇಂದ್ರ . ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ರಾಷ್ಟ್ರದ ಧ್ವನಿಯನ್ನು ಕೇಳಲು, ನಾವು ದುರಹಂಕಾರ ಮತ್ತು ದ್ವೇಷವನ್ನು ತ್ಯಜಿಸಬೇಕಾಗುತ್ತದೆ. ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಮ್ಮ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರಿಗೆ ಮಣಿಪುರ ಭಾರತದ ಭಾಗವಲ್ಲ ಎಂದು ಇದೇ ವೇಳೆ ಹರಿಹಾಯ್ದರು.

ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಆರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಈ ದೇಶವನ್ನು ಅರ್ಥಮಾಡಿಕೊಳ್ಳಲು ಯಾತ್ರೆಯನ್ನು ಪ್ರಾರಂಭಿಸಿದೆ ಎಂದು ಜನರಿಗೆ ಹೇಳುತ್ತಿದ್ದೆ. 10 ವರ್ಷಗಳಿಂದ ನನ್ನನ್ನು ಏಕೆ ನಿಂದಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ನಾನು (ಯಾತ್ರೆ) ಪ್ರಾರಂಭಿಸಿದಾಗ, ನಾನು ಪ್ರತಿದಿನ 10 ಕಿಮೀ ಓಡಲು ಸಾಧ್ಯವಾದರೆ 25 ಕಿಮೀ ನಡೆಯುವುದು ದೊಡ್ಡ ವಿಷಯವಲ್ಲ ಎಂಬುದು ನನ್ನ ಮನಸ್ಸಿನಲ್ಲಿತ್ತು, ಇಂದು ನಾನು ಅದನ್ನು ನೋಡಿದಾಗ -ಅದು ದುರಹಂಕಾರವಾಗಿತ್ತು ಎಂಬುದು ಅರ್ಥವಾಗಿದೆ. ಆಗ ನನ್ನ ಹೃದಯದಲ್ಲಿ ದುರಹಂಕಾರವಿತ್ತು .ಆದರೆ ಭಾರತವು ದುರಹಂಕಾರವನ್ನು ಅಳಿಸಿಬಿಡುತ್ತದೆ, ಒಂದು ಸೆಕೆಂಡಿನಲ್ಲಿ ಅದು ಅಳಿಸಿಹಾಕುತ್ತದೆ. ಯಾತ್ರೆಯ 2-3 ದಿನಗಳಲ್ಲಿ ಮೊಣಕಾಲು ನೋಯಲಾರಂಭಿಸಿತು, ಅದು ಹಳೆಯ ಗಾಯವಾಗಿತ್ತು. ಮೊದಲ ದಿನಗಳಲ್ಲಿ ತೋಳ ಇರುವೆ ಆಗಿ ಬಿಟ್ಟಿತು.. ಜೋ ಹಿಂದೂಸ್ತಾನ್ ಕೋ ಅಹಂಕಾರ್ ಸೆ ದೇಖ್ನೆ ನಿಕ್ಲಾ ಥಾ, ವೋ ಪೂರಾ ಕಾ ಪೂರಾ ಅಹಂಕಾರ್ ಗಯಾಬ್ ಹೋ ಗಯಾ.. (ಅಹಂಕಾರದಿಂದ ದೇಶವನ್ನು ಸುತ್ತಲು ಹೋಗಿದ್ದವನ ಎಲ್ಲ ಅಹಂಕಾರ ಇಳಿದು ಹೋಯ್ತು).`ಭಾರತ ಜನರ ಧ್ವನಿ. ಈ ಧ್ವನಿಗಳನ್ನು ಆಲಿಸಲು, ನಾವು ನಮ್ಮ ಆಸೆಗಳನ್ನು ತ್ಯಾಗ ಮಾಡಬೇಕು. ನಮ್ಮ ಅಹಂ ಮತ್ತು ದ್ವೇಷವನ್ನು ಬಿಟ್ಟುಬಿಡಬೇಕು ಎಂದು ಬಿಜೆಪಿಗೆ ಎಚ್ಚರಿಕೆ ಕೊಟ್ಟರು.

lokesh

Recent Posts

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

35 mins ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

45 mins ago

ಮೇಲುಕೋಟೆಯಲ್ಲಿ ಸರಣಿ ಕಳ್ಳತನ

ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್‌ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…

55 mins ago

ಕಾರ್ಯಾಚರಣೆ ತಂಡವನ್ನೇ ಹಿಮ್ಮೆಟ್ಟಿಸಿದ ಕಾಡಾನೆಗಳು!

ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…

1 hour ago

ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲು

ದಾವಣಗೆರೆ: ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ವಿಜಯಪುರ ಶಾಸಕ ಪಾಟೀಲ ಯತ್ನಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ರಾಜ್ಯ ಕಾಂಗ್ರೆಸ್‌…

10 hours ago

ಅಸ್ಸಾಂ: ಹಳಿ ತಪ್ಪಿದ ಲೋಕಮಾನ್ಯ ತಿಲಕ ಎಕ್ಸ್‌ಪ್ರೆಸ್‌ ರೈಲು

ಅಸ್ಸಾಂ: ಅಸ್ಸಾಂನ ಅಗರ್ತಲಾದಿಂದ ಮುಂಬೈಗೆ ತೆರಳುತ್ತಿದ್ದ ಲೋಕಮಾನ್ಯ ತಿಲಕ್‌ ಎಕ್ಸ್‌ಪ್ರೆಸ್‌ ರೈಲು ಡಿಬಾಲೊಂಗ್‌ ನಿಲ್ದಾಣದ ಬಳಿ ಹಳಿ ತಪ್ಪಿವೆ ಎಂದು…

12 hours ago