BREAKING NEWS

ಬಿಜೆಪಿಯವರು ಭಾರತ ಮಾತೆಯ ಹಂತಕರು : ರಾಹುಲ್ ಗಾಂಧಿ

ನವದೆಹಲಿ : ಬಿಜೆಪಿಯವರು ಭಾರತ ಮಾತೆಯ ಹಂತಕರು. ಮಣಿಪುರ ಎರಡು ಹೋಳಾಗಿದೆ. ಸರ್ಕಾರದ ರಾಜಕೀಯ ಮಣಿಪುರದಲ್ಲಿ ಭಾರತವನ್ನು ಕೊಲೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿರೀಕ್ಷೆಯಂತೆ ಬಿಜೆಪಿಯನ್ನು ಟೀಕಿಸುವ ಮೂಲಕ ಭಾಷಣ ಆರಂಭಿಸಿದರು,ನೀವು (ಬಿಜೆಪಿ) ಇಂದು ಭಯಪಡುವ ಅಗತ್ಯವಿಲ್ಲ, ನನ್ನ ಭಾಷಣವು ಅದಾನಿ ವಿಷಯದ ಬಗ್ಗೆ ಅಲ್ಲ. ಮಣಿಪುರದ ಜನರನ್ನು ಕೊಲ್ಲುವ ಮೂಲಕ, ನೀವು ಭಾರತ ಮಾತೆಯ ಹಂತಕರಾಗಿದ್ದೀರಿ. ನೀವು ದೇಶದ್ರೋಹಿಗಳು, ದೇಶಭಕ್ತರಲ್ಲ ಎಂದು ಕಿಡಿ ಕಾರಿದರು.

ಭಾರತ ಒಂದು ಧ್ವನಿ, ಭಾರತ ನಮ್ಮ ಜನರ ಧ್ವನಿ, ಹೃದಯದ ದನಿ . ಆ ದನಿಯನ್ನು ನೀವು ಮಣಿಪುರದಲ್ಲಿ ಹತ್ಯೆ ಮಾಡಿದ್ದೀರಿ, ಇದರರ್ಥ ನೀವು ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆ ಮಾಡಿದ್ದೀರಿ. ಮಣಿಪುರದಲ್ಲಿನ ಜನರನ್ನು ಹತ್ಯೆ ಮಾಡುವ ಮೂಲಕ ನೀವು ಭಾರತವನ್ನು ಕೊಂದಿದ್ದೀರಿ. ನೀವು ದೇಶಪ್ರೇಮಿಗಳಲ್ಲ,ದೇಶದ್ರೋಹಿಗಳು ಎಂದು ರಾಹುಲ್ ಗುಡುಗಿದರು.

ಕೆಲವು ದಿನಗಳ ಹಿಂದೆ ನಾನು ಮಣಿಪುರಕ್ಕೆ ಹೋಗಿದ್ದೆ, ಇಲ್ಲಿವರೆಗೆ ನಮ್ಮ ಪ್ರಧಾನಿ ಹೋಗಿಲ್ಲ, ಏಕೆಂದರೆ ಅವರಿಗೆ ಮಣಿಪುರ ಭಾರತವಲ್ಲ, ನಾನು ಮಣಿಪುರ ಎಂಬ ಪದವನ್ನು ಬಳಸಿದ್ದೇನೆ ಆದರೆ ಅದು ಮಣಿಪುರವಾಗಿ ಉಳಿದಿಲ್ಲ ಎಂಬುದು ಸತ್ಯ .ನೀವು ಮಣಿಪುರವನ್ನು ಎರಡಾಗಿ ಮಾಡಿದ್ದೀರಿ, ನೀವು ಮಣಿಪುರವನ್ನು ಒಡೆದು ಹಾಕಿದ್ದೀರಿ ಎಂದು ಆರೋಪಿಸಿದರು. ಭಾರತ್ ಜೋಡೋ ಯಾತ್ರೆಯ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ಪ್ರಯಾಣ ಇನ್ನೂ ಮುಗಿದಿಲ್ಲ. ಅದು ಇನ್ನೂ ಚಾಲನೆಯಲ್ಲಿದೆ.ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಪ್ರಾರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಯಾಕೆ ಯಾತ್ರೆ ಆರಂಭಿಸಿದೆ ಎಂಬುದು ನನಗೇ ಗೊತ್ತಿಲ್ಲ. ಆದರೆ ಆ ಪ್ರಯಾಣದಲ್ಲಿ ಜನರ ನೋವು, ಸಂಕಟ, ಸಮಸ್ಯೆಗಳು ನನ್ನದೇ ಸಮಸ್ಯೆಗಳಾದವು. ಯಾತ್ರೆಯ ವೇಳೆ ನನ್ನಲ್ಲಿದ್ದ ಅಹಂಕಾರದ ಭಾವನೆ ಮಾಯವಾಯಿತು ಎಂದರು.

ಮಣಿಪುರದ ವಿಚಾರವಾಗಿ ಪ್ರಧಾನಿ ನರೇಂದ್ರ . ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ರಾಷ್ಟ್ರದ ಧ್ವನಿಯನ್ನು ಕೇಳಲು, ನಾವು ದುರಹಂಕಾರ ಮತ್ತು ದ್ವೇಷವನ್ನು ತ್ಯಜಿಸಬೇಕಾಗುತ್ತದೆ. ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಮ್ಮ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರಿಗೆ ಮಣಿಪುರ ಭಾರತದ ಭಾಗವಲ್ಲ ಎಂದು ಇದೇ ವೇಳೆ ಹರಿಹಾಯ್ದರು.

ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಆರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಈ ದೇಶವನ್ನು ಅರ್ಥಮಾಡಿಕೊಳ್ಳಲು ಯಾತ್ರೆಯನ್ನು ಪ್ರಾರಂಭಿಸಿದೆ ಎಂದು ಜನರಿಗೆ ಹೇಳುತ್ತಿದ್ದೆ. 10 ವರ್ಷಗಳಿಂದ ನನ್ನನ್ನು ಏಕೆ ನಿಂದಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ನಾನು (ಯಾತ್ರೆ) ಪ್ರಾರಂಭಿಸಿದಾಗ, ನಾನು ಪ್ರತಿದಿನ 10 ಕಿಮೀ ಓಡಲು ಸಾಧ್ಯವಾದರೆ 25 ಕಿಮೀ ನಡೆಯುವುದು ದೊಡ್ಡ ವಿಷಯವಲ್ಲ ಎಂಬುದು ನನ್ನ ಮನಸ್ಸಿನಲ್ಲಿತ್ತು, ಇಂದು ನಾನು ಅದನ್ನು ನೋಡಿದಾಗ -ಅದು ದುರಹಂಕಾರವಾಗಿತ್ತು ಎಂಬುದು ಅರ್ಥವಾಗಿದೆ. ಆಗ ನನ್ನ ಹೃದಯದಲ್ಲಿ ದುರಹಂಕಾರವಿತ್ತು .ಆದರೆ ಭಾರತವು ದುರಹಂಕಾರವನ್ನು ಅಳಿಸಿಬಿಡುತ್ತದೆ, ಒಂದು ಸೆಕೆಂಡಿನಲ್ಲಿ ಅದು ಅಳಿಸಿಹಾಕುತ್ತದೆ. ಯಾತ್ರೆಯ 2-3 ದಿನಗಳಲ್ಲಿ ಮೊಣಕಾಲು ನೋಯಲಾರಂಭಿಸಿತು, ಅದು ಹಳೆಯ ಗಾಯವಾಗಿತ್ತು. ಮೊದಲ ದಿನಗಳಲ್ಲಿ ತೋಳ ಇರುವೆ ಆಗಿ ಬಿಟ್ಟಿತು.. ಜೋ ಹಿಂದೂಸ್ತಾನ್ ಕೋ ಅಹಂಕಾರ್ ಸೆ ದೇಖ್ನೆ ನಿಕ್ಲಾ ಥಾ, ವೋ ಪೂರಾ ಕಾ ಪೂರಾ ಅಹಂಕಾರ್ ಗಯಾಬ್ ಹೋ ಗಯಾ.. (ಅಹಂಕಾರದಿಂದ ದೇಶವನ್ನು ಸುತ್ತಲು ಹೋಗಿದ್ದವನ ಎಲ್ಲ ಅಹಂಕಾರ ಇಳಿದು ಹೋಯ್ತು).`ಭಾರತ ಜನರ ಧ್ವನಿ. ಈ ಧ್ವನಿಗಳನ್ನು ಆಲಿಸಲು, ನಾವು ನಮ್ಮ ಆಸೆಗಳನ್ನು ತ್ಯಾಗ ಮಾಡಬೇಕು. ನಮ್ಮ ಅಹಂ ಮತ್ತು ದ್ವೇಷವನ್ನು ಬಿಟ್ಟುಬಿಡಬೇಕು ಎಂದು ಬಿಜೆಪಿಗೆ ಎಚ್ಚರಿಕೆ ಕೊಟ್ಟರು.

lokesh

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

6 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

7 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

7 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

8 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

8 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

8 hours ago