BREAKING NEWS

ಬಿಜೆಪಿಯವರು ಭಾರತ ಮಾತೆಯ ಹಂತಕರು : ರಾಹುಲ್ ಗಾಂಧಿ

ನವದೆಹಲಿ : ಬಿಜೆಪಿಯವರು ಭಾರತ ಮಾತೆಯ ಹಂತಕರು. ಮಣಿಪುರ ಎರಡು ಹೋಳಾಗಿದೆ. ಸರ್ಕಾರದ ರಾಜಕೀಯ ಮಣಿಪುರದಲ್ಲಿ ಭಾರತವನ್ನು ಕೊಲೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿರೀಕ್ಷೆಯಂತೆ ಬಿಜೆಪಿಯನ್ನು ಟೀಕಿಸುವ ಮೂಲಕ ಭಾಷಣ ಆರಂಭಿಸಿದರು,ನೀವು (ಬಿಜೆಪಿ) ಇಂದು ಭಯಪಡುವ ಅಗತ್ಯವಿಲ್ಲ, ನನ್ನ ಭಾಷಣವು ಅದಾನಿ ವಿಷಯದ ಬಗ್ಗೆ ಅಲ್ಲ. ಮಣಿಪುರದ ಜನರನ್ನು ಕೊಲ್ಲುವ ಮೂಲಕ, ನೀವು ಭಾರತ ಮಾತೆಯ ಹಂತಕರಾಗಿದ್ದೀರಿ. ನೀವು ದೇಶದ್ರೋಹಿಗಳು, ದೇಶಭಕ್ತರಲ್ಲ ಎಂದು ಕಿಡಿ ಕಾರಿದರು.

ಭಾರತ ಒಂದು ಧ್ವನಿ, ಭಾರತ ನಮ್ಮ ಜನರ ಧ್ವನಿ, ಹೃದಯದ ದನಿ . ಆ ದನಿಯನ್ನು ನೀವು ಮಣಿಪುರದಲ್ಲಿ ಹತ್ಯೆ ಮಾಡಿದ್ದೀರಿ, ಇದರರ್ಥ ನೀವು ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆ ಮಾಡಿದ್ದೀರಿ. ಮಣಿಪುರದಲ್ಲಿನ ಜನರನ್ನು ಹತ್ಯೆ ಮಾಡುವ ಮೂಲಕ ನೀವು ಭಾರತವನ್ನು ಕೊಂದಿದ್ದೀರಿ. ನೀವು ದೇಶಪ್ರೇಮಿಗಳಲ್ಲ,ದೇಶದ್ರೋಹಿಗಳು ಎಂದು ರಾಹುಲ್ ಗುಡುಗಿದರು.

ಕೆಲವು ದಿನಗಳ ಹಿಂದೆ ನಾನು ಮಣಿಪುರಕ್ಕೆ ಹೋಗಿದ್ದೆ, ಇಲ್ಲಿವರೆಗೆ ನಮ್ಮ ಪ್ರಧಾನಿ ಹೋಗಿಲ್ಲ, ಏಕೆಂದರೆ ಅವರಿಗೆ ಮಣಿಪುರ ಭಾರತವಲ್ಲ, ನಾನು ಮಣಿಪುರ ಎಂಬ ಪದವನ್ನು ಬಳಸಿದ್ದೇನೆ ಆದರೆ ಅದು ಮಣಿಪುರವಾಗಿ ಉಳಿದಿಲ್ಲ ಎಂಬುದು ಸತ್ಯ .ನೀವು ಮಣಿಪುರವನ್ನು ಎರಡಾಗಿ ಮಾಡಿದ್ದೀರಿ, ನೀವು ಮಣಿಪುರವನ್ನು ಒಡೆದು ಹಾಕಿದ್ದೀರಿ ಎಂದು ಆರೋಪಿಸಿದರು. ಭಾರತ್ ಜೋಡೋ ಯಾತ್ರೆಯ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ಪ್ರಯಾಣ ಇನ್ನೂ ಮುಗಿದಿಲ್ಲ. ಅದು ಇನ್ನೂ ಚಾಲನೆಯಲ್ಲಿದೆ.ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಪ್ರಾರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಯಾಕೆ ಯಾತ್ರೆ ಆರಂಭಿಸಿದೆ ಎಂಬುದು ನನಗೇ ಗೊತ್ತಿಲ್ಲ. ಆದರೆ ಆ ಪ್ರಯಾಣದಲ್ಲಿ ಜನರ ನೋವು, ಸಂಕಟ, ಸಮಸ್ಯೆಗಳು ನನ್ನದೇ ಸಮಸ್ಯೆಗಳಾದವು. ಯಾತ್ರೆಯ ವೇಳೆ ನನ್ನಲ್ಲಿದ್ದ ಅಹಂಕಾರದ ಭಾವನೆ ಮಾಯವಾಯಿತು ಎಂದರು.

ಮಣಿಪುರದ ವಿಚಾರವಾಗಿ ಪ್ರಧಾನಿ ನರೇಂದ್ರ . ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ರಾಷ್ಟ್ರದ ಧ್ವನಿಯನ್ನು ಕೇಳಲು, ನಾವು ದುರಹಂಕಾರ ಮತ್ತು ದ್ವೇಷವನ್ನು ತ್ಯಜಿಸಬೇಕಾಗುತ್ತದೆ. ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಮ್ಮ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರಿಗೆ ಮಣಿಪುರ ಭಾರತದ ಭಾಗವಲ್ಲ ಎಂದು ಇದೇ ವೇಳೆ ಹರಿಹಾಯ್ದರು.

ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಆರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಈ ದೇಶವನ್ನು ಅರ್ಥಮಾಡಿಕೊಳ್ಳಲು ಯಾತ್ರೆಯನ್ನು ಪ್ರಾರಂಭಿಸಿದೆ ಎಂದು ಜನರಿಗೆ ಹೇಳುತ್ತಿದ್ದೆ. 10 ವರ್ಷಗಳಿಂದ ನನ್ನನ್ನು ಏಕೆ ನಿಂದಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ನಾನು (ಯಾತ್ರೆ) ಪ್ರಾರಂಭಿಸಿದಾಗ, ನಾನು ಪ್ರತಿದಿನ 10 ಕಿಮೀ ಓಡಲು ಸಾಧ್ಯವಾದರೆ 25 ಕಿಮೀ ನಡೆಯುವುದು ದೊಡ್ಡ ವಿಷಯವಲ್ಲ ಎಂಬುದು ನನ್ನ ಮನಸ್ಸಿನಲ್ಲಿತ್ತು, ಇಂದು ನಾನು ಅದನ್ನು ನೋಡಿದಾಗ -ಅದು ದುರಹಂಕಾರವಾಗಿತ್ತು ಎಂಬುದು ಅರ್ಥವಾಗಿದೆ. ಆಗ ನನ್ನ ಹೃದಯದಲ್ಲಿ ದುರಹಂಕಾರವಿತ್ತು .ಆದರೆ ಭಾರತವು ದುರಹಂಕಾರವನ್ನು ಅಳಿಸಿಬಿಡುತ್ತದೆ, ಒಂದು ಸೆಕೆಂಡಿನಲ್ಲಿ ಅದು ಅಳಿಸಿಹಾಕುತ್ತದೆ. ಯಾತ್ರೆಯ 2-3 ದಿನಗಳಲ್ಲಿ ಮೊಣಕಾಲು ನೋಯಲಾರಂಭಿಸಿತು, ಅದು ಹಳೆಯ ಗಾಯವಾಗಿತ್ತು. ಮೊದಲ ದಿನಗಳಲ್ಲಿ ತೋಳ ಇರುವೆ ಆಗಿ ಬಿಟ್ಟಿತು.. ಜೋ ಹಿಂದೂಸ್ತಾನ್ ಕೋ ಅಹಂಕಾರ್ ಸೆ ದೇಖ್ನೆ ನಿಕ್ಲಾ ಥಾ, ವೋ ಪೂರಾ ಕಾ ಪೂರಾ ಅಹಂಕಾರ್ ಗಯಾಬ್ ಹೋ ಗಯಾ.. (ಅಹಂಕಾರದಿಂದ ದೇಶವನ್ನು ಸುತ್ತಲು ಹೋಗಿದ್ದವನ ಎಲ್ಲ ಅಹಂಕಾರ ಇಳಿದು ಹೋಯ್ತು).`ಭಾರತ ಜನರ ಧ್ವನಿ. ಈ ಧ್ವನಿಗಳನ್ನು ಆಲಿಸಲು, ನಾವು ನಮ್ಮ ಆಸೆಗಳನ್ನು ತ್ಯಾಗ ಮಾಡಬೇಕು. ನಮ್ಮ ಅಹಂ ಮತ್ತು ದ್ವೇಷವನ್ನು ಬಿಟ್ಟುಬಿಡಬೇಕು ಎಂದು ಬಿಜೆಪಿಗೆ ಎಚ್ಚರಿಕೆ ಕೊಟ್ಟರು.

lokesh

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

3 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

4 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

4 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

5 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

5 hours ago