BREAKING NEWS

ಬಿಜೆಪಿಯವರು ಭಾರತ ಮಾತೆಯ ಹಂತಕರು : ರಾಹುಲ್ ಗಾಂಧಿ

ನವದೆಹಲಿ : ಬಿಜೆಪಿಯವರು ಭಾರತ ಮಾತೆಯ ಹಂತಕರು. ಮಣಿಪುರ ಎರಡು ಹೋಳಾಗಿದೆ. ಸರ್ಕಾರದ ರಾಜಕೀಯ ಮಣಿಪುರದಲ್ಲಿ ಭಾರತವನ್ನು ಕೊಲೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.

ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ನಂತರ ಅವಿಶ್ವಾಸ ಗೊತ್ತುವಳಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಿರೀಕ್ಷೆಯಂತೆ ಬಿಜೆಪಿಯನ್ನು ಟೀಕಿಸುವ ಮೂಲಕ ಭಾಷಣ ಆರಂಭಿಸಿದರು,ನೀವು (ಬಿಜೆಪಿ) ಇಂದು ಭಯಪಡುವ ಅಗತ್ಯವಿಲ್ಲ, ನನ್ನ ಭಾಷಣವು ಅದಾನಿ ವಿಷಯದ ಬಗ್ಗೆ ಅಲ್ಲ. ಮಣಿಪುರದ ಜನರನ್ನು ಕೊಲ್ಲುವ ಮೂಲಕ, ನೀವು ಭಾರತ ಮಾತೆಯ ಹಂತಕರಾಗಿದ್ದೀರಿ. ನೀವು ದೇಶದ್ರೋಹಿಗಳು, ದೇಶಭಕ್ತರಲ್ಲ ಎಂದು ಕಿಡಿ ಕಾರಿದರು.

ಭಾರತ ಒಂದು ಧ್ವನಿ, ಭಾರತ ನಮ್ಮ ಜನರ ಧ್ವನಿ, ಹೃದಯದ ದನಿ . ಆ ದನಿಯನ್ನು ನೀವು ಮಣಿಪುರದಲ್ಲಿ ಹತ್ಯೆ ಮಾಡಿದ್ದೀರಿ, ಇದರರ್ಥ ನೀವು ಮಣಿಪುರದಲ್ಲಿ ಭಾರತ ಮಾತೆಯ ಹತ್ಯೆ ಮಾಡಿದ್ದೀರಿ. ಮಣಿಪುರದಲ್ಲಿನ ಜನರನ್ನು ಹತ್ಯೆ ಮಾಡುವ ಮೂಲಕ ನೀವು ಭಾರತವನ್ನು ಕೊಂದಿದ್ದೀರಿ. ನೀವು ದೇಶಪ್ರೇಮಿಗಳಲ್ಲ,ದೇಶದ್ರೋಹಿಗಳು ಎಂದು ರಾಹುಲ್ ಗುಡುಗಿದರು.

ಕೆಲವು ದಿನಗಳ ಹಿಂದೆ ನಾನು ಮಣಿಪುರಕ್ಕೆ ಹೋಗಿದ್ದೆ, ಇಲ್ಲಿವರೆಗೆ ನಮ್ಮ ಪ್ರಧಾನಿ ಹೋಗಿಲ್ಲ, ಏಕೆಂದರೆ ಅವರಿಗೆ ಮಣಿಪುರ ಭಾರತವಲ್ಲ, ನಾನು ಮಣಿಪುರ ಎಂಬ ಪದವನ್ನು ಬಳಸಿದ್ದೇನೆ ಆದರೆ ಅದು ಮಣಿಪುರವಾಗಿ ಉಳಿದಿಲ್ಲ ಎಂಬುದು ಸತ್ಯ .ನೀವು ಮಣಿಪುರವನ್ನು ಎರಡಾಗಿ ಮಾಡಿದ್ದೀರಿ, ನೀವು ಮಣಿಪುರವನ್ನು ಒಡೆದು ಹಾಕಿದ್ದೀರಿ ಎಂದು ಆರೋಪಿಸಿದರು. ಭಾರತ್ ಜೋಡೋ ಯಾತ್ರೆಯ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ಪ್ರಯಾಣ ಇನ್ನೂ ಮುಗಿದಿಲ್ಲ. ಅದು ಇನ್ನೂ ಚಾಲನೆಯಲ್ಲಿದೆ.ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಪ್ರಾರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಯಾಕೆ ಯಾತ್ರೆ ಆರಂಭಿಸಿದೆ ಎಂಬುದು ನನಗೇ ಗೊತ್ತಿಲ್ಲ. ಆದರೆ ಆ ಪ್ರಯಾಣದಲ್ಲಿ ಜನರ ನೋವು, ಸಂಕಟ, ಸಮಸ್ಯೆಗಳು ನನ್ನದೇ ಸಮಸ್ಯೆಗಳಾದವು. ಯಾತ್ರೆಯ ವೇಳೆ ನನ್ನಲ್ಲಿದ್ದ ಅಹಂಕಾರದ ಭಾವನೆ ಮಾಯವಾಯಿತು ಎಂದರು.

ಮಣಿಪುರದ ವಿಚಾರವಾಗಿ ಪ್ರಧಾನಿ ನರೇಂದ್ರ . ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅವರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ರಾಹುಲ್ ಗಾಂಧಿ, ರಾಷ್ಟ್ರದ ಧ್ವನಿಯನ್ನು ಕೇಳಲು, ನಾವು ದುರಹಂಕಾರ ಮತ್ತು ದ್ವೇಷವನ್ನು ತ್ಯಜಿಸಬೇಕಾಗುತ್ತದೆ. ಹಿಂಸಾಚಾರ ಪೀಡಿತ ಮಣಿಪುರಕ್ಕೆ ನಮ್ಮ ಪ್ರಧಾನಿ ಮೋದಿ ಭೇಟಿ ನೀಡಿಲ್ಲ. ಅವರಿಗೆ ಮಣಿಪುರ ಭಾರತದ ಭಾಗವಲ್ಲ ಎಂದು ಇದೇ ವೇಳೆ ಹರಿಹಾಯ್ದರು.

ನೀವು ಯಾತ್ರೆಯನ್ನು (ಭಾರತ್ ಜೋಡೋ ಯಾತ್ರೆ) ಏಕೆ ಆರಂಭಿಸಿದ್ದೀರಿ ಎಂದು ಜನರು ನನ್ನನ್ನು ಕೇಳುತ್ತಿದ್ದರು. ನಾನು ಈ ದೇಶವನ್ನು ಅರ್ಥಮಾಡಿಕೊಳ್ಳಲು ಯಾತ್ರೆಯನ್ನು ಪ್ರಾರಂಭಿಸಿದೆ ಎಂದು ಜನರಿಗೆ ಹೇಳುತ್ತಿದ್ದೆ. 10 ವರ್ಷಗಳಿಂದ ನನ್ನನ್ನು ಏಕೆ ನಿಂದಿಸಲಾಗಿದೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದರು.
ನಾನು (ಯಾತ್ರೆ) ಪ್ರಾರಂಭಿಸಿದಾಗ, ನಾನು ಪ್ರತಿದಿನ 10 ಕಿಮೀ ಓಡಲು ಸಾಧ್ಯವಾದರೆ 25 ಕಿಮೀ ನಡೆಯುವುದು ದೊಡ್ಡ ವಿಷಯವಲ್ಲ ಎಂಬುದು ನನ್ನ ಮನಸ್ಸಿನಲ್ಲಿತ್ತು, ಇಂದು ನಾನು ಅದನ್ನು ನೋಡಿದಾಗ -ಅದು ದುರಹಂಕಾರವಾಗಿತ್ತು ಎಂಬುದು ಅರ್ಥವಾಗಿದೆ. ಆಗ ನನ್ನ ಹೃದಯದಲ್ಲಿ ದುರಹಂಕಾರವಿತ್ತು .ಆದರೆ ಭಾರತವು ದುರಹಂಕಾರವನ್ನು ಅಳಿಸಿಬಿಡುತ್ತದೆ, ಒಂದು ಸೆಕೆಂಡಿನಲ್ಲಿ ಅದು ಅಳಿಸಿಹಾಕುತ್ತದೆ. ಯಾತ್ರೆಯ 2-3 ದಿನಗಳಲ್ಲಿ ಮೊಣಕಾಲು ನೋಯಲಾರಂಭಿಸಿತು, ಅದು ಹಳೆಯ ಗಾಯವಾಗಿತ್ತು. ಮೊದಲ ದಿನಗಳಲ್ಲಿ ತೋಳ ಇರುವೆ ಆಗಿ ಬಿಟ್ಟಿತು.. ಜೋ ಹಿಂದೂಸ್ತಾನ್ ಕೋ ಅಹಂಕಾರ್ ಸೆ ದೇಖ್ನೆ ನಿಕ್ಲಾ ಥಾ, ವೋ ಪೂರಾ ಕಾ ಪೂರಾ ಅಹಂಕಾರ್ ಗಯಾಬ್ ಹೋ ಗಯಾ.. (ಅಹಂಕಾರದಿಂದ ದೇಶವನ್ನು ಸುತ್ತಲು ಹೋಗಿದ್ದವನ ಎಲ್ಲ ಅಹಂಕಾರ ಇಳಿದು ಹೋಯ್ತು).`ಭಾರತ ಜನರ ಧ್ವನಿ. ಈ ಧ್ವನಿಗಳನ್ನು ಆಲಿಸಲು, ನಾವು ನಮ್ಮ ಆಸೆಗಳನ್ನು ತ್ಯಾಗ ಮಾಡಬೇಕು. ನಮ್ಮ ಅಹಂ ಮತ್ತು ದ್ವೇಷವನ್ನು ಬಿಟ್ಟುಬಿಡಬೇಕು ಎಂದು ಬಿಜೆಪಿಗೆ ಎಚ್ಚರಿಕೆ ಕೊಟ್ಟರು.

lokesh

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

1 hour ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

1 hour ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

1 hour ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

1 hour ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

2 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

2 hours ago