ಬೆಂಗಳೂರು: ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನನ್ನು ಇನ್ನೂ ಆಯ್ಕೆ ಮಾಡದಿರುವುದು ಬಿಜೆಪಿಯಲ್ಲಿನ ಗುಂಪುಗಾರಿಕೆಯನ್ನು ತೋರಿಸುತ್ತದೆ ಮತ್ತು ಅದೊಂದು ‘ಅತ್ಯಂತ ಅಶಿಸ್ತಿನ’ ರಾಜಕೀಯ ಪಕ್ಷ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.
‘ಅವರಲ್ಲಿ ಗುಂಪುಗಾರಿಕೆ ಇದೆ ಎಂಬುದನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ತಮ್ಮನ್ನು ಶಿಸ್ತಿನ ಪಕ್ಷ ಎಂದು ಕರೆದುಕೊಳ್ಳುತ್ತದೆ. ಆದರೆ, ಅದು ಅತ್ಯಂತ ಅಶಿಸ್ತಿನ ಪಕ್ಷ ಎಂದು ಆರೋಪಿಸಿದರು.
ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಸೋಮವಾರ ಆರಂಭಗೊಂಡಿದ್ದು, ಬಿಜೆಪಿ ಇನ್ನೂ ಕೆಳಮನೆಯಲ್ಲಿ ತನ್ನ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಕೇಂದ್ರದ ಚುನಾವಣಾ ವೀಕ್ಷಕರನ್ನಾಗಿ ನೇಮಿಸಿದ್ದಾರೆ.
ಬಿಜೆಪಿಯ ಮುಖ್ಯ ವಕ್ತಾರ ಮತ್ತು ರಾಜ್ಯಸಭಾ ಸಂಸದ ಅನಿಲ್ ಬಲುನಿ ಮಾತನಾಡಿ, ಇಬ್ಬರು ಕೇಂದ್ರ ನಾಯಕರು ರಾಜ್ಯಕ್ಕೆ ಭೇಟಿ ನೀಡಲಿದ್ದು, ರಾಜ್ಯ ವಿಧಾನಸಭೆಯಲ್ಲಿ ಪಕ್ಷದ ನಾಯಕನನ್ನು ಅದರ ಶಾಸಕರು ಆಯ್ಕೆ ಮಾಡುತ್ತಾರೆ ಎಂದಿದ್ದಾರೆ.
ರಾಜ್ಯ ಚುನಾವಣೆಯಲ್ಲಿ ಸೋತ ನಂತರ, ಬಿಜೆಪಿ ಇನ್ನೂ ವಿಧಾನಸಭೆಯಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಿಲ್ಲ. ಬಜೆಟ್ ಅಧಿವೇಶನ ಆರಂಭವಾಗಿದ್ದರೂ, ವಿರೋಧ ಪಕ್ಷದ ನಾಯಕನನ್ನು ನೇಮಿಸಲು ಹೈಕಮಾಂಡ್ ತಮ್ಮ ಆಯ್ಕೆಗಳನ್ನು ಅಳೆದು ತೂಗುವಲ್ಲಿ ನಿರವಾಗಿದೆ.
ರಾಜ್ಯದಲ್ಲಿ ಜಾತಿ ಸಮೀಕರಣವನ್ನು ಸರಿದೂಗಿಸಿಕೊಂಡು ಹಳೆ ನಾಯಕನಿಗೆ ಅಂಟಿಕೊಳ್ಳಬೇಕೋ ಅಥವಾ ಹೊಸ ನಾಯಕನ ಮೇಲೆ ನಂಬಿಕೆ ಇಡಬೇಕೋ ಎಂಬುದನ್ನು ನಿರ್ಧರಿಸಲು ಬಿಜೆಪಿ ಉದ್ದೇಶಿಸಿರುವ ಕಾರಣ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸ್ಪರ್ಧಿಗಳಲ್ಲಿ ಒಬ್ಬರಾಗಿದ್ದಾರೆ.
224 ಸದಸ್ಯ ಬಲದ ವಿಧಾನಸಭೆಗೆ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳೊಂದಿಗೆ ಅಧಿಕಾರಕ್ಕೆ ಬಂದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಗೆದ್ದುಕೊಂಡಿತು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…