BREAKING NEWS

ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗಳಿಸುವಂತೆ ಬಿಜೆಪಿಯಿಂದ ಒತ್ತಡ ಹೇರಲಾಗುತ್ತಿದೆ : ಡಿಕೆಶಿ ಆರೋಪ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳ್ಳವಂತೆ ಮಾಡಲು ಸಿಎಂ ಕಚೇರಿ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾ ತಂಡ ಪ್ರಯತ್ನಿಸುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ. ಸಿಎಂ ಕಚೇರಿಯ ಸಿಬ್ಬಂದಿ ಹಾಗೂ ಸಿಎಂ ಲೀಗಲ್ ಟೀಂ ಸದಸ್ಯರು, ರಾಜ್ಯದ ನಾನಾ ವಿಧಾನಸಭಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಚುನಾವಣಾಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗಳಿಸುವಂತೆ ಒತ್ತಡ ಹೇರಲಾಗುತ್ತಿದೆ. ಜೊತೆಗೆ, ತಮ್ಮ ಅಭ್ಯರ್ಥಿಗಳ ನಾಮಪತ್ರಗಳಲ್ಲಿ ಲೋಪಗಳಿದ್ದರೂ ಅವುಗಳನ್ನು ಅಂಗೀಕರಿಸುವಂತೆ ಚುನಾವಣಾಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಡಿಕೆಶಿ ಆರೋಪಿಸಿದ್ದಾರೆ.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಸವದತ್ತಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ರತ್ನಾ ಮಾಮಡಿ ಅವರ ನಾಮಪತ್ರ ತಿರಸ್ಕೃತವಾಗುವ ಲಕ್ಷ್ಮಣಗಳು ಗೋಚರಿಸಿವೆ. ಅವರು, ನಾಮಪತ್ರದಲ್ಲಿ ಲೋಪ ಎಸಗಿದ್ದಾರೆಂದು ತಿಳಿದುಬಂದಿದೆ. ನಾಮಪತ್ರ ಪರಿಶೀಲಿಸಿದ ನಂತರ ಅಫಿಡವಿಟ್ ಸಲ್ಲಿಸಿರುವ ಆರೋಪಗಳೂ ಕೇಳಿಬಂದಿವೆ. ಆದರೆ, ಅವರ ನಾಮಪತ್ರವನ್ನು ಅಂಗೀಕಾರಿಸುವಂತೆ ಸಿಎಂ ಕಚೇರಿಯ ಸಿಬ್ಬಂದಿಯು ಸವದತ್ತಿ ಚುನಾವಣಾಧಿಕಾರಿಗಳಿಗೆ ಫೋನ್ ಮಾಡಿ ಒತ್ತಡ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ರತ್ನಾ ಮಾಮನಿ ಅವರು, ಅಫಿಡವಿಟ್ ಅನ್ನು ರಾತ್ರೋರಾತ್ರಿ ಸಲ್ಲಿಸಿದ್ದಾರೆ. ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಕಚೇರಿಯ ಅವಧಿಯಲ್ಲದ ಅವಧಿಯಲ್ಲಿ ಪ್ರಕಟವಾಗಿದೆ. ಆದರೂ, ಇದನ್ನು ಪರಿಗಣಿಸದೇ ಅವರ ನಾಮಪತ್ರವನ್ನು ಅಂಗೀಕರಿಸಲು ಚುನಾವಣಾಧಿಕಾರಿಗಳ ಮೇಲೆ ಸಿಎಂ ಕಚೇರಿಯ ಸಿಬ್ಬಂದಿ ಫೋನ್ ಮೂಲಕ ಒತ್ತಡ ಹಾಕಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂಬ ಭೀತಿಯಲ್ಲಿರುವ ಬಿಜೆಪಿ, ಕಾಂಗ್ರೆಸ್ ವಿರುದ್ಧ ಅನೇಕ ರೀತಿಯ ತಂತ್ರಗಾರಿಕೆಗಳನ್ನು ಪ್ರಯೋಗಿಸುತ್ತಿದೆ. ಚುನಾವಣೆಯಲ್ಲಿ ಕಾಂಗ್ರೆಸ್ ಹುರಿಯಾಳುಗಳಲ್ಲಿ ಕೆಲವರ ನಾಮಪತ್ರಗಳನ್ನು ತಿರಸ್ಕೃತಗೊಳಿಸುವಲ್ಲಿ ಬಿಜೆಪಿ ಪರೋಕ್ಷವಾಗಿ ಪಾತ್ರ ವಹಿಸುತ್ತಿದೆ ಎಂದು ಅವರು ಆರೋಪಿಸಿದರು.

ಲಿಂಗಾಯತ ಡ್ಯಾಂ ಈಗಾಗಲೇ ಒಡೆದು ಹೋಗಿದೆ : ಲಿಂಗಾಯತ ಸಮುದಾಯವನ್ನು ಅಣೆಕಟ್ಟಿಗೆ ಹೋಲಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಲಿಂಗಾಯತ ಡ್ಯಾಂ ಒಡೆಯುತ್ತೇವೆ ಎಂದು ಡಿಕೆ ಶಿವಕುಮಾರ್ ಅಂದುಕೊಂಡಿರಬಹುದು. ಆದರೆ, ಲಿಂಗಾಯತ ಡ್ಯಾಂ ಒಡೆಯಲು ಸಾಧ್ಯವಿಲ್ಲ. ಸಮುದಾಯದ ಅಭಿವೃದ್ಧಿಗಾಗಿ ನಾವು ಅನೇಕ ಕೆಲಸಗಳನ್ನು ಮಾಡಿದ್ದೇವೆ. ಆದ್ದರಿಂದ, ಲಿಂಗಾಯತ ಸಮುದಾಯವು ನಮ್ಮ ಕೈ ಹಿಡಿಯಲಿದೆ ಎಂದು ಏ. 21ರಂದು ಹೇಳಿಕೆ ನೀಡಿದ್ದರು. ಇದಕ್ಕೆ ಉತ್ತರ ಕೊಟ್ಟ ಶಿವಕುಮಾರ್, “ಲಿಂಗಾಯತ ಅಣೆಕಟ್ಟು ಈಗಾಗಲೇ ಒಡೆದು ಹೋಗಿದೆ. ಅಣೆಕಟ್ಟಿನಲ್ಲಿದ್ದ ಅಪಾರ ನೀರು, ಕಾಂಗ್ರೆಸ್ ಅನ್ನೋ ಸಮುದ್ರವನ್ನು ಸೇರಿಕೊಂಡಿದೆ” ಎಂದು ಹೇಳಿದ್ದಾರೆ.

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡ ಕೂಡಲೇ ಕಾಂಗ್ರೆಸ್ಸಿಗೆ ಶಕ್ತಿ ಬರುತ್ತೆ ಎಂದು ತಿಳಿದಿದ್ದರೆ ಅದು ತಪ್ಪು ಎಂದು ಸಿಎಂ ಹೇಳಿದ್ದರು. ಇದಕ್ಕೂ ಟಾಂಗ್ ಕೊಟ್ಟ ಶಿವಕುಮಾರ್, ಜಗದೀಶ್ ಶೆಟ್ಟರ್ ಅವರಿಂದ ಕಾಂಗ್ರೆಸ್ಸಿಗೆ ನಿಜಕ್ಕೂ ಬಲ ಬಂದಿದೆ. ಅವರು ನಮ್ಮ ಪಕ್ಷದ ಸ್ಟಾರ್ ಪ್ರಚಾರಕರೂ ಆಗಿರಲಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ರಾಜೀನಾಮೆ ನೀಡಲಿ : ಮಖ್ಯಮಂತ್ರಿಗಳ ಲೀಗಲ್ ಟೀಂ ನಿಂದ ಅಧಿಕಾರ ದುರುಪಯೋಗ ನಡೀತಾ ಇದೆ. ಸಿಎಂ ಕಚೇರಿ, ಸಿಎಂ ಲೀಗಲ್ ಟೀಂ ಎರಡೂ ಸೇರಿಕೊಂಡು ನನ್ನ ವಿರುದ್ಧ, ಕಾಂಗ್ರೆಸ್ ಅಭ್ಯರ್ಥಿಗಳ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಇನ್ನು ಈ ಸರ್ಕಾರದ ಅವಧಿ ಕೇವಲ 20 ದಿನವಿದೆ. ಅಷ್ಟರೊಳಗೆ ಸಿಎಂ ರಾಜೀನಾಮೆ ಕೊಟ್ಟರೆ ಒಳ್ಳೆಯದು ಎಂದು ಅವರು ಹೇಳಿದ್ದಾರೆ.

lokesh

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

1 hour ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago