BREAKING NEWS

ಬಿಜೆಪಿ, ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ: ಎಚ್ ಡಿಕೆ, ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಮತ್ತು ಹೊರಗೆ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ  ಎಂದರು.

ನಾನು ವಿರೋಧ ಪಕ್ಷದಲ್ಲಿದ್ದೇನೆ, ಬೊಮ್ಮಾಯಿ ಅವರೂ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಜೆಡಿಎಸ್ ಮತ್ತು ಬಿಜೆಪಿ ಎರಡೂ ವಿರೋಧ ಪಕ್ಷಗಳಾಗಿದ್ದು, ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ಸಂಘಟನೆಗೆ 10 ಜನರ ತಂಡ ರಚನೆ ಮಾಡಲಾಗಿದೆ. ಇಡೀ ರಾಜ್ಯದಲ್ಲಿ ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತುವಂತೆ ದೇವಗೌಡರು ಸಂದೇಶ ನೀಡಿದ್ದಾರೆ. ನಮಗೆ ದೇವೇಗೌಡರು ಸಲಹೆ ನೀಡಿದ್ದಾರೆ. ದೇವೇಗೌಡರ ಮಾರ್ಗದರ್ಶನ, ಪಕ್ಷ ಸಂಘಟನೆ ಮೂಲಕ ಯುವಕರ ತಂಡ ರಚನೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್‌ನವರಿಗೆ ಸರ್ಕಾರ ಬೇಕಿಲ್ಲ. ಭೂಮಿ ಲಪಟಾಯಿಸೋದು ಬೇಕು. ಇದು ಒಂದು ರೀತಿ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ. ಸರ್ಕಾರಕ್ಕೆ ನಿಜಕ್ಕೂ ಜನತೆಗೆ, ರೈತರಿಗೆ ಒಳ್ಳೆಯದು ಮಾಡಬೇಕು ಅನ್ನೋ ಮನಸ್ಸಿದ್ದರೆ ಸರ್ಕಾರದ ಸುಪರ್ದಿಗೆ ಬರಬೇಕಾದ ಭೂಮಿಯನ್ನ ಸ್ವಾಧೀನಪಡಿಸಿಕೊಳ್ಳಿ. ನನ್ನ ಪಕ್ಷದವ ಆಸ್ತಿ ಇದ್ದರೂ ಮುಟ್ಟುಗೋಲು ಹಾಕಿಕೊಳ್ಳಿ. ಅಕ್ರಮ ಭೂಕಬಳಿಕೆ ಬಯಲಿಗೆಳೆಯಬೇಕಾದರೆ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎಂದು ಮಾಜಿ ಸಿಎಂ ಒತ್ತಾಯಿಸಿದರು.

andolanait

Recent Posts

ಗಮನ ಸೆಳೆದ ಸ್ವಚ್ಛತಾ ಮ್ಯಾರಥಾನ್‌

ಮೈಸೂರು : ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಸ್ವಚ್ಛತೆಯಲ್ಲಿ ಸಾರ್ವಜನಿಕರ ಸಹಭಾಗಿತ್ವಕ್ಕಾಗಿ ಓಡೋಣ ಮೈಸೂರಿಗಾಗಿ ಒಂದಾಗೋಣ ಸ್ವಚ್ಛತೆಗಾಗಿ ಶೀರ್ಷಿಕೆಯಡಿ ಸ್ವಚ್ಚತಾ…

13 mins ago

ಗೃಹಲಕ್ಷ್ಮಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ : ಸಿಎಂ ಸೂಚನೆ

ಬೆಂಗಳೂರು : ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು ಜೀವಿತ ಪ್ರಮಾಣಪತ್ರ ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಪರಿಶೀಲಿಸಿ, ಕೂಡಲೇ ಕ್ರಮ ವಹಿಸುವಂತೆ ಸಿಎಂ…

55 mins ago

ವಿಜಯಪುರದ ಮಂಗಳೂರಿನಲ್ಲಿ ಖಾಸಗಿ ವಿಮಾನ ಪತನ: ಇಬ್ಬರಿಗೆ ಗಂಭೀರ ಗಾಯ

ವಿಜಯಪುರ: ಬಬಲೇಶ್ವರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್‌ ವಿಮಾನವೊಂದು ಪತನವಾಗಿ ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕಲಬುರ್ಗಿಯಿಂದ ಬೆಳಗಾವಿಗೆ…

3 hours ago

ಕಳೆದ 4 ವರ್ಷದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಗೆ 35 ಮಂದಿ ಬಲಿ

ಬೆಂಗಳೂರು: ರಾಜ್ಯದಲ್ಲಿ ಆನ್‌ಲೈನ್ ಬೆಟ್ಟಿಂಗ್ ಹಾವಳಿ ತೀವ್ರಗೊಂಡಿದೆ. ಕಳೆದ 4 ವರ್ಷದಲ್ಲಿ 35 ಮಂದಿ ಆನ್ ಲೈನ್ ಬೆಟ್ಟಿಂಗ್ ದಂಧೆಗೆ…

3 hours ago

ಮತ್ತೆರಡು ಸಮಾವೇಶ ಮಾಡಲು ಸಜ್ಜಾದ ಜೆಡಿಎಸ್‌: ಚುನಾವಣೆ ಗೆಲ್ಲಲು ರಣತಂತ್ರ

ಬೆಂಗಳೂರು: ಹಾಸನದಲ್ಲಿ ಇತ್ತೀಚೆಗೆ ನಡೆಸಿದ ಜೆಡಿಎಸ್ ಬೆಳ್ಳಿ ಮಹೋತ್ಸವದ ಮಾದರಿಯಲ್ಲಿ ರಾಜ್ಯದಲ್ಲಿ ಮತ್ತೆರಡು ಸಮಾವೇಶಗಳನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಕಲ್ಯಾಣ…

3 hours ago

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

3 hours ago