BREAKING NEWS

ಬಿಜೆಪಿ, ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ: ಎಚ್ ಡಿಕೆ, ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ರಾಜ್ಯ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಮತ್ತು ಹೊರಗೆ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡುತ್ತೇವೆ  ಎಂದರು.

ನಾನು ವಿರೋಧ ಪಕ್ಷದಲ್ಲಿದ್ದೇನೆ, ಬೊಮ್ಮಾಯಿ ಅವರೂ ಇದ್ದಾರೆ. ನಾಡಿನ ಹಿತಾಸಕ್ತಿ ಕಾಪಾಡುವ ಸಲುವಾಗಿ ಹೋರಾಟ ಮಾಡಲು ನಾವು ಒಗ್ಗಟ್ಟಾಗಿ ಹೋಗುತ್ತಿದ್ದೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಜೆಡಿಎಸ್ ಮತ್ತು ಬಿಜೆಪಿ ಎರಡೂ ವಿರೋಧ ಪಕ್ಷಗಳಾಗಿದ್ದು, ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಆಗಿದೆ. ಎಲ್ಲರ ಅಭಿಪ್ರಾಯ ಪಡೆದು ಪಕ್ಷದ ಸಂಘಟನೆಗೆ 10 ಜನರ ತಂಡ ರಚನೆ ಮಾಡಲಾಗಿದೆ. ಇಡೀ ರಾಜ್ಯದಲ್ಲಿ ಸರ್ಕಾರದ ಕಾನೂನುಬಾಹಿರ ಚಟುವಟಿಕೆಗಳ ವಿರುದ್ಧ ಧ್ವನಿ ಎತ್ತುವಂತೆ ದೇವಗೌಡರು ಸಂದೇಶ ನೀಡಿದ್ದಾರೆ. ನಮಗೆ ದೇವೇಗೌಡರು ಸಲಹೆ ನೀಡಿದ್ದಾರೆ. ದೇವೇಗೌಡರ ಮಾರ್ಗದರ್ಶನ, ಪಕ್ಷ ಸಂಘಟನೆ ಮೂಲಕ ಯುವಕರ ತಂಡ ರಚನೆ ಮಾಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್‌ನವರಿಗೆ ಸರ್ಕಾರ ಬೇಕಿಲ್ಲ. ಭೂಮಿ ಲಪಟಾಯಿಸೋದು ಬೇಕು. ಇದು ಒಂದು ರೀತಿ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ. ಸರ್ಕಾರಕ್ಕೆ ನಿಜಕ್ಕೂ ಜನತೆಗೆ, ರೈತರಿಗೆ ಒಳ್ಳೆಯದು ಮಾಡಬೇಕು ಅನ್ನೋ ಮನಸ್ಸಿದ್ದರೆ ಸರ್ಕಾರದ ಸುಪರ್ದಿಗೆ ಬರಬೇಕಾದ ಭೂಮಿಯನ್ನ ಸ್ವಾಧೀನಪಡಿಸಿಕೊಳ್ಳಿ. ನನ್ನ ಪಕ್ಷದವ ಆಸ್ತಿ ಇದ್ದರೂ ಮುಟ್ಟುಗೋಲು ಹಾಕಿಕೊಳ್ಳಿ. ಅಕ್ರಮ ಭೂಕಬಳಿಕೆ ಬಯಲಿಗೆಳೆಯಬೇಕಾದರೆ ಈ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎಂದು ಮಾಜಿ ಸಿಎಂ ಒತ್ತಾಯಿಸಿದರು.

andolanait

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

2 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

2 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

3 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

7 hours ago