BREAKING NEWS

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಬಿಜೆಪಿ ನಾಯಕನ ಬಂಧನ

ಮಧ್ಯಪ್ರದೇಶ : ರಸ್ತೆಬದಿ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಬಿಜೆಪಿ ನಾಯಕ ಪ್ರವೇಶ್‌ ಶುಕ್ಲಾ ಮೂತ್ರ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮಧ್ಯರಾತ್ರಿ ಬುಡಕಟ್ಟು ಕಾರ್ಮಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ಬಿಜೆಪಿ ನಾಯಕನನ್ನು ಬಂಧಿಸಲಾಗಿದೆ. ಈ ಕೃತ್ಯದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಕ್ಯಾಮರಾದಲ್ಲಿ ಸೆರೆಯಾದ ವ್ಯಕ್ತಿ ಪ್ರವೇಶ್ ಶುಕ್ಲಾ ಅವರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಲವರು ಒತ್ತಾಯಿಸಿದ್ದಾರೆ.

ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಕಳೆದ ವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದ್ದು, ಘಟನೆ ನಡೆದ 6 ದಿನಗಳ ನಂತರ ಈ ವಿಡಿಯೋವನ್ನು ಪೊಲೀಸರು ಪಡೆದುಕೊಂಡಿದ್ದರು ಎಂದು ತಿಳಿದುಬಂದಿದೆ. ಅಲ್ಲದೆ, ಪ್ರವೇಶ್ ಶುಕ್ಲಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 (ಅಶ್ಲೀಲ ಕೃತ್ಯಗಳು) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ) ಮತ್ತು SC/ST ಕಾಯಿದೆಯ ಅಡಿಯಲ್ಲಿ ಶುಕ್ಲಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ಈ ವೈರಲ್ ವಿಡಿಯೋಗೆ ಪ್ರತಿಕ್ರಿಯೆ ನೀಡಿದ್ದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರವೇಶ್ ಶುಕ್ಲಾ ವಿರುದ್ಧ ಆರೋಪ ಹೊರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿಯೂ ಹೇಳಿದ್ದರು. ಅಲ್ಲದೆ, ಆರೋಪಿಗೆ “ಕಠಿಣವಾದ ಶಿಕ್ಷೆ” ಯನ್ನು ಸರ್ಕಾರ ಖಚಿತಪಡಿಸುತ್ತದೆ. “ನಾವು ಅವನನ್ನು ಯಾವುದೇ ಕಾರಣಕ್ಕೂ ಸುಮ್ಮನೇ ಬಿಡುವುದಿಲ್ಲ’’ ಎಂದು ಶಿವರಾಜ್‌ ಸಿಂಗ್ ಚೌಹಾಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ..

ಇನ್ನು, ಆರೋಪಿ ಬಿಜೆಪಿಗೆ ಸೇರಿದವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಶಿವರಾಜ್‌ ಸಿಂಗ್ ಚೌಹಾಣ್, ಅಪರಾಧಿಗಳಿಗೆ ಜಾತಿ, ಧರ್ಮ ಮತ್ತು ಪಕ್ಷವಿಲ್ಲ. ಒಬ್ಬ ಅಪರಾಧಿ ಕೇವಲ ಅಪರಾಧಿ. ಅವನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇದೇ ರೀತಿಯ ಭಾವನೆಗಳನ್ನು ಪ್ರತಿಧ್ವನಿಸಿದ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ, “ಅವರು ಯಾವುದೇ ಪಕ್ಷವಾಗಿದ್ದರೂ, ಯಾರೇ ತಪ್ಪು ಮಾಡಿದರೂ ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಹೇಳಿದ್ದಾರೆ.

ಈ ಘಟನೆ ಮೂರು ತಿಂಗಳ ಹಿಂದೆ ನಡೆದಿದ್ದು ಎನ್ನಲಾಗಿದೆ. ವಿಡಿಯೋ ವೈರಲ್‌ ಆದ ಬಳಿಕ ಅದು ಬೆಳಕಿಗೆ ಬಂದಿದ್ದು, ಮಂಗಳವಾರ ಪ್ರವೇಶ್‌ ಶುಕ್ಲಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

lokesh

Recent Posts

ರಾಜ್ಯದಲ್ಲಿ ಮಳೆ ಕೊರತೆ: ತಾಪಮಾನ ಏರಿಕೆ: ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…

52 mins ago

ಕೊಡಗು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಗುಂಡು ಹಾರಿಸಿಕೊಂಡು ವೃದ್ಧ ಆತ್ಮಹತ್ಯೆ

ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…

1 hour ago

ಬಿಗ್‌ಬಾಸ್ ಮನೆಯಿಂದ ದಿಢೀರ್ ಹೊರಬಂದ ಓಂ ಪ್ರಕಾಶ್ ರಾವ್: ಆಸ್ಪತ್ರೆಗೆ ದಾಖಲು..!!

ಬೆಂಗಳೂರು: ಬಿಗ್‌ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…

1 hour ago

2,000 ರೂ. ವರೆಗಿನ ಯುಪಿಐ ಪಾವತಿಗಳಿಗೆ ಶುಲ್ಕವಿಲ್ಲ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ

ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…

1 hour ago

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

23 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

23 hours ago